Arvind Kejriwal: ಅರವಿಂದ್ ಕೇಜ್ರಿವಾಲ್ 'ಮದ್ಯದ ದಲ್ಲಾಳಿ'; ಸಿಎಜಿ ವರದಿ ಬಳಿಕ ಬಿಜೆಪಿ ಟೀಕೆ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಆಘಾತ ಎದುರಿಸಿದ್ದ ಎಎಪಿ ಮುಖ್ಯಸ್ಥ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಎಜಿ ಕೊಟ್ಟಿರುವ ವರದಿ ಮತ್ತಷ್ಟು ಮುಜುಗರ ತಂದಿದೆ. ದೆಹಲಿ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಬಕಾರಿ ಇಲಾಖೆಯ ಸಿಎಜಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದ್ದು, ಬಿಜೆಪಿ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿದೆ.
ಮಂಗಳವಾರ ಸಿಎಜಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದ ಬಳಿಕ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಅವರನ್ನು ಮದ್ಯದ ದಲ್ಲಾಳಿ ಎಂದು ಕರೆದಿದೆ.

ಸಿಎಜಿ ವರದಿಯನ್ನು ಮುಖ್ಯಮಂತ್ರಿ ರೇಕಾ ಗುಪ್ತಾ ಮಂಡಿಸಿದ್ದಾರೆ, ಇದು ಎಎಪಿಯ ಕರಾಳ ಕೃತ್ಯಗಳ ಪಟ್ಟಿಯಾಗಿದೆ. ದೆಹಲಿಯಲ್ಲಿ ಯಾರಾದರೂ ಮದ್ಯದ ದಲ್ಲಾಳಿ ಇದ್ದರೆ ಅದು ಅರವಿಂದ್ ಕೇಜ್ರಿವಾಲ್ ಎಂದು ನಾವು ಚುನಾವಣಾ ಪ್ರಚಾರದಲ್ಲೇ ಹೇಳಿದ್ದೇವೆ, ಭ್ರಷ್ಟಾಚಾರ ಮಾಡಿದ ಯಾರೇ ಆದರೂ ಉತ್ತರ ನೀಡಲೇಬೇಕು ಎಂದು ದೆಹಲಿ ಜನತೆಗೆ ಭರವಸೆ ನೀಡಿದ್ದೆವು ಎಂದು ಬಿಜೆಪಿ ನಾಯಕ ಸಚ್ದೇವ್ ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ಸಿಎಜಿ ವರದಿಯನ್ನು ದೆಹಲಿ ವಿಧಾನಸಭೆಯಲ್ಲಿ ಮಂಡಿಸದಂತೆ ತಡೆಯಲು ಅರವಿಂದ್ ಕೇಜ್ರಿವಾಲ್ ತಮಗಿದ್ದ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಮನೋಜ್ ತಿವಾರಿ ಆರೋಪಿಸಿದ್ದಾರೆ.
ಮಂಗಳವಾರ ಸಿಎಜಿ ವರದಿಯನ್ನು ದೆಹಲಿ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ದೆಹಲಿಯಲ್ಲಿ ಎರಡು ಅವಧಿಗೆ ಆಡಳಿತ ನಡೆಸಿರುವ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷದ ನಾಯಕರು, ಸಿಎಜಿ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸದಂತೆ ತಡೆಯಲು ಸಾಕಷ್ಟು ಪ್ರಯತ್ನ ಮಾಡಿದೆ. ಮದ್ಯ ನೀತಿ ಹಗರಣದಲ್ಲಿ ₹2000 ಕೋಟಿಗೂ ಹೆಚ್ಚು ಹಣ ಅಕ್ರಮ ನಡೆದಿದೆ ಎಂದು ವರದಿಯಲ್ಲಿ ಬಯಲಾಗಿದೆ ಎಂದು ತಿವಾರಿ ಹೇಳಿದ್ದಾರೆ.
ಸಿಎಜಿ ವರದಿಯಲ್ಲಿ ಏನಿದೆ?
ಮಂಗಳವಾರ ಬೆಳಿಗ್ಗೆ ಸಿಎಂ ರೇಖಾ ಗುಪ್ತಾ ದೆಹಲಿಯಲ್ಲಿ ಮದ್ಯದ ನಿಯಂತ್ರಣ ಮತ್ತು ಪೂರೈಕೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ ವರದಿಯನ್ನು ಮಂಡಿಸಿದ್ದಾರೆ. 2021-2022 ರಲ್ಲಿ ಜಾರಿಗೆ ತಂದ ಅಬಕಾರಿ ನೀತಿಯಿಂದಾಗಿ ರಾಜ್ಯ ಸರ್ಕಾರಕ್ಕೆ ₹2,000 ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಲ್ಲಿ ತಿಳಿದಿದೆ ಎಂದು ಅವರು ಹೇಳಿದ್ದಾರೆ.
ಸಿಎಜಿ ವರದಿಯನ್ನು ಮಂಡಿಸುತ್ತಿದ್ದಂತೆ ಎಎಪಿ ನಾಯಕಿ, ದೆಹಲಿ ಮಾಜಿ ಮುಖ್ಯಮಂತ್ರಿ ಅತಿಶಿ ರದ್ದುಗೊಂಡಿರುವ ಹೊಸ ಮದ್ಯ ನೀತಿಯನ್ನು ಸಮರ್ಥನೆ ಮಾಡಿದ್ದಾರೆ. ಅಕ್ಕ-ಪಕ್ಕದ ರಾಜ್ಯಗಳಿಂದ ಅಕ್ರಮವಾಗಿ ಮದ್ಯವನ್ನು ಪೂರೈಕೆ ಮಾಡುತ್ತಿರುವುದರಿಂದ ದೆಹಲಿಯ ಜನತೆ ನಷ್ಟ ಅನುಭವಿಸಿದ್ದಾರೆ ಎಂದು ಹೇಳಿದ್ದು, ಹಳೆಯ ಮದ್ಯ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications