ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಡಿಪಿ-ಬಿಜೆಪಿ ತಲಾಕ್: ಯೋಗಿ ಆದಿತ್ಯನಾಥ್ ನೀಡಿದ ಕಾರಣವೇನು?

|
Google Oneindia Kannada News

Recommended Video

ಬಿಜೆಪಿ - ಪಿಡಿಪಿ ( ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ ) ಬ್ರೇಕ್ಅಪ್ ಬಗ್ಗೆ ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಗೋರಕ್ಪುರ, ಜೂನ್ 20: 'ಜಮ್ಮು-ಕಾಶ್ಮೀರದ ಹಿತದೃಷ್ಟಿಯಿಂದ ಬಿಜೆಪಿ, ಪಿಡಿಪಿ(ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ)ಯಿಂದ ಬೆಂಬಲ ವಾಪಸ್ ಪಡೆದಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

"ಬಿಜೆಪಿಯ ಎಲ್ಲಾ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಮ್ಮು-ಕಾಶ್ಮಿರದ ಸ್ಥಳೀಯ ನಾಯಕರು, ಉಪಮುಖ್ಯಮಂತ್ರಿಗಳು, ರಾಜ್ಯ ಸಚಿವರ ವಿಶ್ವಾಸ ತೆಗೆದುಕೊಳ್ಳಲಾಗಿದೆ. ದೇಶ ಮತ್ತು ಜಮ್ಮು ಕಾಶ್ಮೀರದ ಹಿತ ದೃಷ್ಟಿಯಿಂದ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಹಿತಕ್ಕಾಗಿ ಏನೆಲ್ಲಾ ಕ್ರಮ ಕೈಗೊಳ್ಳಬಹುದೋ ಅವನ್ನೆಲ್ಲ ನಾವು ಕೈಗೊಳ್ಳುತ್ತೇವೆ" ಎಂದು ಆದಿತ್ಯನಾಥ್ ಹೇಳಿದ್ದಾರೆ.

ಪಿಡಿಪಿಯಿಂದ ಬಿಜೆಪಿ ಬೆಂಬಲ ವಾಪಸ್: ಅಸಲಿ ಕಾರಣವೇನು? ಪಿಡಿಪಿಯಿಂದ ಬಿಜೆಪಿ ಬೆಂಬಲ ವಾಪಸ್: ಅಸಲಿ ಕಾರಣವೇನು?

2014 ರ ವಿಧಾನಸಭೆ ಚುನಾವಣೆಯ ನಂತರ ಜಮ್ಮು ಕಾಶ್ಮೀರ ವಿಧಾನಸಭೆಯ 87 ಸ್ಥಾನಗಳಲ್ಲಿ ಯಾವ ಪಕ್ಷಗಳಿಗೂ ಅಗತ್ಯವಿದ್ದ ಬಹುಮತ ಸಿಕ್ಕಿರಲಿಲ್ಲ. ಈ ಸಂದರ್ಭದಲ್ಲಿ ಪಿಡಿಪಿಯೊಂದಿಗೆ ಸೇರಿ ಬಿಜೆಪಿ ಸರ್ಕಾರ ರಚಿಸಿತ್ತು. ಜಮ್ಮು-ಕಾಶ್ಮೀರದಲ್ಲಿ ಪ್ರಪ್ರಥಮ ಬಾರಿಗೆ ಈ ಮೂಲಕ ಬಿಜೆಪಿ ಅಸ್ತಿತ್ವ ಕಂಡುಕೊಂಡಿತ್ತು.

BJP ended alliance with PDP for benefit of state: Adityanath

ಆದರೆ ಕಣಿವೆಯಲ್ಲಿನ ಹಿಂಸಾಚಾರ, ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ ಮುಂತಾದ ಕಾರಣಗಳನ್ನು ನೀಡಿ ಬಿಜೆಪಿ ಇದೀಗ ಬೆಂಬಲವನ್ನು ವಾಪಸ್ ಪಡೆದಿದೆ. ಮುಖ್ಯಮಂತ್ರಿ, ಪಿಡಿಪಿಯ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದು, ಸದ್ಯಕ್ಕೆ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ.

English summary
Uttar Pradesh Chief Minister Yogi Adityanath said the decision to end the alliance with People's Democratic Party (PDP) in Jammu and Kashmir was for the benefit of the state. Adityanath said the move was taken after taking the state Bharatiya Janata Party (BJP) ministers into confidence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X