ಗುಜರಾತ್ : 99ಕ್ಕೆ ಬಿಜೆಪಿ ಸುಸ್ತು, 80ಕ್ಕೆ ಕಾಂಗ್ರೆಸ್ ಮಸ್ತು
ನವದೆಹಲಿ, ಡಿಸೆಂಬರ್ 18 : ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಯಾಟ ಸೆಂಚುರಿ ಗಡಿಯನ್ನು ಕೂಡ ಮುಟ್ಟದೆ 99ಗೆ ಸುಸ್ತಾಗಿ ಬಳಲಿದ್ದಾರೆ. ಆದರೆ, ರಾಹಲು ಗಾಂಧಿಯವರು ಏಕಾಂಗಿಯಾಗಿ ಅಜೇಯ 80 ಬಾರಿಸಿದ್ದು, ಹುಮ್ಮಸ್ಸಿನಿಂದ ಬೀಗುತ್ತಿದ್ದಾರೆ.
ಇದು ಪರಿಸ್ಥಿತಿಯ ವ್ಯಂಗ್ಯವಾದರೂ ಸತ್ಯ ಸಂಗತಿ. ಕಳೆದ ಚುನಾವಣೆಗೆ ಹೋಲಿಸಿದರೆ, 99 ಸ್ಥಾನಗಳನ್ನು ಗುಜರಾತ್ ನಲ್ಲಿ ಗಳಿಸಿ, ಭಾರತೀಯ ಜನತಾ ಪಕ್ಷ ಶೇ.16ರಷ್ಟು ಸೀಟುಗಳನ್ನು ಕಳೆದುಕೊಂಡು ಬೀಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಶೇ.31ರಷ್ಟು ಹೆಚ್ಚಿನ ಸ್ಥಾನ ಗಳಿಸಿದ್ದರೂ ಮುಖ ಎತ್ತಿಕೊಂಡು ತಿರುಗಾಡುತ್ತಿಲ್ಲ.

ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ 2012ರಲ್ಲಿ 115 ಸ್ಥಾನಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಕೇವಲ 61 ಸೀಟುಗಳನ್ನು ಗಳಿಸಿತ್ತು. ನರೇಂದ್ರ ಮೋದಿಯವರು ಪ್ರಧಾನಿಯಾಗಿ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟನಂತರ ಗುಜರಾತಿನಲ್ಲಿ ಭಾರೀ ಬದಲಾವಣೆಗಳಾಗಿವೆ, ಬಿಜೆಪಿ ತನ್ನ ನೆಲೆಯನ್ನು ಸಾಕಷ್ಟು ಕಳೆದುಕೊಂಡಿದೆ.
ನರೇಂದ್ರ ಮೋದಿ ಅವರ ಮುಂದಾಳತ್ವದಲ್ಲಿ 2012ರಲ್ಲಿ ಬಿಜೆಪಿ ಶೇ. 47ರಷ್ಟು ಮತ ಗಳಿಸಿತ್ತು, 2017ರಲ್ಲಿ ಮತಗಳಿಕೆ ಶೇ.49.1ರಷ್ಟಿದೆ (14,673,450). ಅದೇ ಕಾಂಗ್ರೆಸ್ 2012ರಲ್ಲಿ ಶೇ.42ರಷ್ಟು ಮತಗಳನ್ನು ಗಳಿಸಿದ್ದರೆ, 2017ರಲ್ಲಿ ಶೇ.41.4ರಷ್ಟು (12,386,184).
ಅಚ್ಚರಿಯ ಸಂಗತಿಯೆಂದರೆ, ಗ್ರಾಮೀಣ ಗುಜರಾತಿನಲ್ಲಿ ಭಾರೀ ಸಂಖ್ಯೆಯಲ್ಲಿ ಮತದಾರರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಬಿಜೆಪಿ ನಗರ ಪ್ರದೇಶದಲ್ಲಿ ಹೆಚ್ಚಿನ ಮತಗಳ ಪಾಲನ್ನು ಪಡೆದಿದೆ. ಇದರ ಅರ್ಥ, ಗ್ರಾಮೀಣ ಭಾಗದಲ್ಲಿ ಜನರನ್ನು ಆಕರ್ಷಿಸುವಲ್ಲಿ ಮೋದಿ ಮತ್ತು ಅವರ ನೀತಿಗಳು ವಿಫಲವಾಗಿವೆ.
Gujarat is Modi wave's last hurrah
— Rajeev Gowda (@rajeevgowda) December 18, 2017
2014 Assembly segments BJP 145 INC 37
2017 BJP 99 INC+ 80
INC gains 53 seats
2014 BJP vote share 59.05 INC 32.86
2017 BJP 49.1 down 10% INC 41.4 up 9%
Importantly 2014 BJP 26 LS seats INC 0
2017 BJP 17 INC 9 LS approx
2019 Game on!
2012ರಲ್ಲಿ ಮತ್ತು 2017ರಲ್ಲಿ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಷ್ಟೆಷ್ಟು ಮತಗಳನ್ನು ಪಡೆದಿದ್ದವು ಮತ್ತು ಮತಗಳಿಕೆ ಶೇಕಡಾವಾರು ಎಷ್ಟೆಷ್ಟಿತ್ತು ಎಂದು ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ, ಎಐಸಿಸಿ ಸಂಶೋಧನಾ ವಿಭಾಗದ ಚೇರ್ಮನ್ ಆಗಿರುವ ರಾಜೀವ್ ಗೌಡ ಅವರು ಇಂಟ್ರೆಸ್ಟಿಂಗ್ ಅಂಕಿಸಂಖ್ಯೆಯನ್ನು ಟ್ವೀಟ್ ಮಾಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications