ರಾಜ್ಯಸಭೆ ಚುನಾವಣೆ: ಗುಜರಾತ್ ನಿಂದ ಜೆ ಪಿ ನಡ್ಡಾ, ಕಾಂಗ್ರೆಸ್ ಸೇರಿದ್ದ ನಾಯಕನಿಗೆ ಮಹಾರಾಷ್ಟ್ರದಿಂದ ಟಿಕೆಟ್
ನವದೆಹಲಿ, ಫೆಬ್ರವರಿ 14: ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಚುನಾವಣೆಗೆ ಮತ್ತಷ್ಟು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯಸಭೆ ಚುನಾವಣೆಗೆ ಗುಜರಾತ್ ನಿಂದ ಬಿಜೆಪಿ ರಾಷ್ಟ್ರಧ್ಯಕ್ಷರಾದ ಜೆ ಪಿ ನಡ್ಡಾ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಅಶೋಕ್ ಚವಾಣ್ ಅವರನ್ನ ಮಹರಾಷ್ಟ್ರದಿಂದ ಕಣಕ್ಕಿಳಿಸಿ, ಅಧಿಕೃತವಾಗಿ ಪ್ರಕಟಿಸಿದೆ.
ಹೌದು, ರಾಜ್ಯಸಭಾ ಚುನಾವಣೆಗೆ ಬಿಜೆಪಿ ಗುಜರಾತ್ನಿಂದ ನಾಲ್ವರು ಮತ್ತು ಮಹಾರಾಷ್ಟ್ರದಿಂದ ಮೂವರು ಸೇರಿ ಒಟ್ಟು 7 ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಬಹುದಾಗಿದೆ. ಪ್ರಸ್ತುತ ಬಿಜೆಪಿ ರಾಷ್ಟ್ರಧ್ಯಕ್ಷರಾದ ಜೆ ಪಿ ನಡ್ಡಾ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದು, ಈ ರಾಜ್ಯದಿಂದ ಏಕೈಕ ಸ್ಥಾನವನ್ನು ಗೆಲ್ಲಲು ಅಗತ್ಯವಾದ ಸಂಖ್ಯಾಬಲವನ್ನು ಬಿಜೆಪಿ ಹೊಂದಿಲ್ಲ. ಹೀಗಾಗಿ ಗುಜರಾತ್ ನಿಂದ ಜೆ ಪಿ ನಡ್ಡಾ ಅವರನ್ನ ಕಣಕ್ಕಿಳಿಸಲಾಗಿದೆ.

ಇನ್ನೂ ಗುಜರಾತ್ ನಿಂದ ಜೆಪಿ ನಡ್ಡಾ ಸೇರಿಂದತೆ ಗುಜರಾತ್ನಿಂದ ಗೋವಿಂದ್ ಭಾಯಿ ಧೋಲಾಕಿಯಾ, ಮಾಯಾಂಕ್ಭಾಯ್ ನಾಯಕ್ ಮತ್ತು ಡಾ. ಜಶ್ವಂತ್ ಸಿಂಗ್ ಸಲಾಂ ಸಿಂಗ್ ಪರ್ಮಾರ್ ಅವರನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಪಕ್ಷ ಘೋಷಿಸಿದೆ. ಇತ್ತ ಮಹಾರಾಷ್ಟ್ರದಿಂದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ , ಮೇಧಾ ಕುಲಕರ್ಣಿ ಮತ್ತು ಡಾ. ಅಜಿತ್ ಗೋಪ್ಚಾಡೆ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ.
ಇಂದು ಮುಂಜಾನೆ, ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಧ್ಯಪ್ರದೇಶದಿಂದ ಕೇಂದ್ರ ಸಚಿವರಾದ ಎಲ್ ಮುರುಗನ್, ಮಾಯಾ ನರೋಲ್ಯ, ಬನ್ಸಿಲಾಲ್ ಗುರ್ಜರ್ ಮತ್ತು ಉಮೇಶ್ ನಾಥ್ ಮಹಾರಾಯ್ ಅವರನ್ನು ಕಣಕ್ಕಿಳಿಸಿದೆ. ಒಡಿಶಾದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರನ್ನು ಕಣಕ್ಕಿಳಿಸಲಾಗಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications