ಶತ್ರು ಸಂಹಾರ: ಕೆಂಪುಕೋಟೆಯಲ್ಲಿ ಬಿಜೆಪಿಯಿಂದ ಮಹಾಯಜ್ಞ
ನವದೆಹಲಿ, ಜ 23: ದೇವೇಗೌಡರ ಅತಿರುದ್ರ ಮಹಾಯಾಗ, ಡಿ ಕೆ ಶಿವಕುಮಾರ್ ಅವರ ಶತಚಂಡಿಕಾ ಯಾಗದ ನಂತರ, ಬಿಜೆಪಿ ಸಂಸದರೊಬ್ಬರು ನವದೆಹಲಿಯ ಕೆಂಪುಕೋಟೆಯ ಬಳಿ ಅದ್ದೂರಿ ಯಜ್ಞವೊಂದನ್ನು ಆಯೋಜಿಸಿದ್ದಾರೆ.
ಸುಮಾರು 1,200 ಪುರೋಹಿತರು ಈ ಮಹಾಯಜ್ಞದಲ್ಲಿ ಪಾಲ್ಗೊಳ್ಳಲಿದ್ದು, ದೆಹಲಿ ಪೂರ್ವ ಕ್ಷೇತ್ರದ ಬಿಜೆಪಿ ಸಂಸದ ಮಹೇಶ್ ಗಿರಿ ಈ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಮಾರ್ಚ್ 18ರಿಂದ 25ರ ವರೆಗೆ ಈ ಮಹಾಯಜ್ಞ ನಡೆಯಲಿದೆ.
ಕೆಂಪುಕೋಟೆಯ ಮಗ್ಗುಲಲ್ಲಿ ಮಹಾಯಜ್ಞಕ್ಕೆ ಅವಕಾಶ ಲಭಿಸಿದ್ದು, ದೇಶದೊಳಗಿನ ಮತ್ತು ಹೊರಗಿನ ದುಷ್ಟಶಕ್ತಿಗಳನ್ನು ಮಟ್ಟಹಾಕುವ ಆಶಯದೊಂದಿಗೆ ಈ ಯಜ್ಞ ನಡೆಸಲಾಗುತ್ತಿದೆ ಎಂದು ಮಹೇಶ್ ಗಿರಿ ಹೇಳಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ಮೋದಿ ಮತ್ತು ಇತರ ಕ್ಯಾಬಿನೆಟ್ ಸಚಿವರಿಗೆ ಆಹ್ವಾನ ನೀಡಲಾಗಿದೆ ಎಂದು ಮಹೇಶ್ ಗಿರಿ ಹೇಳಿದ್ದಾರೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಆಹ್ವಾನ ಹೋಗಿದೆಯೇ ಎಂದು ತಿಳಿದುಬಂದಿಲ್ಲ.
ವೇದಪಠಣದೊಂದಿಗೆ ನಡೆಯುವ 'ವೇದಿಕ್ ಯಜ್ಞ' ಎಂದು ಕರೆಯಲಾಗುವ ಈ ಮಹಾಯಾಗಕ್ಕೆ ವಾಣಿಜ್ಯೋದ್ಯಮಿಗಳು, ಸಾರ್ವಜನಿಕರು ದೇಣಿಗೆ ನೀಡಲು ಮುಂದೆ ಬರುತ್ತಿರುವುದು ವಿಶೇಷ.
ಶೃಂಗೇರಿಯಲ್ಲಿ 128 ಖುತ್ವಿಜರಿಂದ ಹನ್ನೆರಡು ದಿನಗಳ ಅತಿರುದ್ರ ಮಹಾಯಾಗವನ್ನು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಕುಟುಂಬದವರು ಆಯೋಜಿಸಿದ್ದರು. ಇದಕ್ಕೂ ಮುನ್ನ ಕೊಲ್ಲೂರು ದೇವಾಲಯದಲ್ಲಿ ಮೂವತ್ತಕ್ಕೂ ಹೆಚ್ಚು ಪುರೋಹಿತರ ನೇತೃತ್ವದಲ್ಲಿ ಇಂಧನ ಸಚಿವ ಡಿ ಕೆ ಶಿವಕುಮಾರ್ ಶತಚಂಡಿಕಾ ಯಾಗ ನಡೆಸಿದ್ದರು.
ನಾನು ನಡೆಸಿದ ಯಾಗ ದೇಶ ಕಲ್ಯಾಣಕ್ಕಾಗಿ, ಶತ್ರುಸಂಹಾರಕ್ಕಾಗಿ ನಡೆಸುವುದು ಶತಚಂಡಿಕಾ ಯಾಗ ಎಂದು ದೇವೇಗೌಡರು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications