ಬಿಜೆಪಿಗೆ ಬಂಪರ್: ಚುನಾವಣಾ ಬಾಂಡ್ ಮೂಲಕ 2,555 ಕೋಟಿ ಸಂಗ್ರಹ!
ನವದೆಹಲಿ, ಆಗಸ್ಟ್ 9: ಭಾರತದಲ್ಲಿ ಸಾರ್ವಜನಿಕರು, ಉದ್ಯಮಿಗಳು ಮತ್ತು ಗಣ್ಯರು ನೀಡುವ ಚುನಾವಣಾ ಬಾಂಡ್ ಗಳಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸಿಂಹಪಾಲು ಸಿಕ್ಕಿರುವುದು ಕೇಂದ್ರೀಯ ಚುನಾವಣಾ ಆಯೋಗ ನೀಡಿರುವ ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗಿದೆ.
2019-20ನೇ ಸಾಲಿನಲ್ಲಿ 3,355 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಸಂಗ್ರಹಿಸಲಾಗಿದ್ದು, ಈ ಪೈಕಿ ಬಿಜೆಪಿಗೆ 2,555 ಕೋಟಿ ಮೌಲ್ಯದ ಬಾಂಡ್ ಬಂದಿವೆ. ಕಳೆದ ಆರ್ಥಿಕ ಸಾಲಿಗೆ ಹೋಲಿಕೆ ಮಾಡಿದರೆ ಬಿಜೆಪಿಯ ಚುನಾವಣಾ ಬಾಂಡ್ ಆದಾಯದಲ್ಲಿ ಶೇ.75ರಷ್ಟು ಹೆಚ್ಚಳವಾಗಿದ್ದು, 1,450 ಕೋಟಿ ರೂಪಾಯಿ ಏರಿಕೆಯಾಗಿದೆ.
ದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಬಾಂಡ್ ರೂಪದಲ್ಲಿ ಬಂದಿರುವ ಆದಾಯ ಎಷ್ಟಿದೆ. ಅಸಲಿಗೆ ಈ ಚುನಾವಣಾ ಬಾಂಡ್ ಪದ್ಧತಿ ಎಂದರೇನು?, 2019ರಲ್ಲಿ ಇದೇ ಚುನಾವಣಾ ಬಾಂದ್ ಪದ್ಧತಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಲು ಕಾರಣವೇನು?, 2019-20ನೇ ಸಾಲಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಹಣ ಸಂಗ್ರಹವಾಗಿದೆ ಎಂಬುದರ ಕುರಿತು ಮುಂದೆ ನೋಡೋಣ.

ಕಾಂಗ್ರೆಸ್ ಆದಾಯದಲ್ಲಿ ಇಳಿಕೆ
ಚುನಾವಣಾ ಬಾಂಡ್ ಮೂಲಕ ಸಂಗ್ರಹಿಸಿದ ಆದಾಯದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಆದಾಯದಲ್ಲಿ ಶೇ.17ರಷ್ಟು ಇಳಿಕೆಯಾಗಿದೆ. 2018ರಲ್ಲಿ ಚುನಾವಣಾ ಬಾಂಡ್ ಮೂಲಕ 383 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. 2019-20ನೇ ಸಾಲಿನಲ್ಲಿ ಕಾಂಗ್ರೆಸ್ ಚುನಾವಣಾ ಬಾಂಡ್ ಮೂಲಕ 318 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಚುನಾವಣಾ ಬಾಂಡ್ ಮೂಲಕ ಯಾವ ಪಕ್ಷಕ್ಕೆ ಎಷ್ಟು ಹಣ?
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ 100.46 ಕೋಟಿ ರೂಪಾಯಿ, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ 29.25 ಕೋಟಿ, ಶಿವಸೇನೆ 41 ಕೋಟಿ ರೂಪಾಯಿ, ಡಿಎಂಕೆ 45 ಕೋಟಿ ರೂಪಾಯಿ, ಲಾಲೂ ಪ್ರಸಾದ್ ಯಾದವ್ ರಾಷ್ಟ್ರೀಯ ಜನತಾ ದಳ 2.5 ಕೋಟಿ ರೂಪಾಯಿ, ಮತ್ತು ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ 18 ಕೋಟಿ ರೂಪಾಯಿ ಚುನಾವಣಾ ಬಾಂಡ್ ಸಂಗ್ರಹಿಸಿರುವುದಾಗಿ ಕೇಂದ್ರೀಯ ಚುನಾವಣಾ ಆಯೋಗದ ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಬಿಜೆಪಿ ಆದಾಯದಲ್ಲಿ ಶೇ.68ರಷ್ಟು ಹೆಚ್ಚಳ
2019ರ ಮಾರ್ಚ್ ತಿಂಗಳಿಗೆ ಹೋಲಿಸಿ ನೋಡಿದರೆ 2020ರ ಮಾರ್ಚ್ ವೇಳೆಗೆ ಬಿಜೆಪಿ ಆದಾಯವು ಇಮ್ಮಡಿಯಾಗಿರುವಂತೆ ಗೋಚರಿಸುತ್ತಿದೆ. ಮಾರ್ಚ್ 2020ರ ಹೊತ್ತಿಗೆ ಚುನಾವಣಾ ಬಾಂಡ್ ಮೂಲಕ ಭಾರತೀಯ ಜನತಾ ಪಕ್ಷವೊಂದೇ ಶೇ.68ರಷ್ಟು ಆದಾಯ ಪಡೆದುಕೊಂಡಿದೆ. ಚುನಾವಣಾ ಬಾಂಡ್ ಪದ್ಧತಿಯನ್ನು ಆರಂಭಿಸಿದ ದಿನದಿಂದ ಈವರೆಗೂ ಅತಿಹೆಚ್ಚು ಆದಾಯವನ್ನು ಪಡೆದುಕೊಂಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಚುನಾವಣಾ ಬಾಂಡ್ ಯೋಜನೆ ಎಂದರೇನು?
ಯಾವುದೇ ವ್ಯಕ್ತಿ, ಸಂಸ್ಥೆ ಹಾಗೂ ಕಂಪನಿಗಳು ಚುನಾವಣೆ ಸಮಯದಲ್ಲಿ ತಮ್ಮಿಷ್ಟದ ರಾಜಕೀಯ ಪಕ್ಷಕ್ಕೆ ಈ ಎಲೆಕ್ಷನ್ ಬಾಂಡ್ ಮೂಲಕ ದೇಣಿಗೆ ನೀಡಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆಯ್ದ ಬ್ರಾಂಚ್ ಗಳಲ್ಲಿ ಈ ಎಲೆಕ್ಷನ್ ಬಾಂಡ್ ಗಳನ್ನು ನೀಡಲಾಗುತ್ತದೆ. 1 ಸಾವಿರದಿಂದ 10 ಸಾವಿರ, 1 ಲಕ್ಷ ದಿಂದ 10 ಲಕ್ಷ ರೂಪಾಯಿ ಹಾಗೂ 1 ಕೋಟಿ ರೂಪಾಯಿವರೆಗೂ ಬಾಂಡ್ ಗಳನ್ನು ಖರೀದಿಸಬಹುದು. ಮೂರು ತಿಂಗಳಿನಲ್ಲಿ 10 ದಿನ ಬ್ಯಾಂಕ್ ನಲ್ಲಿ ಈ ರೀತಿಯ ಚುನಾವಣಾ ಬಾಂಡ್ ಗಳನ್ನು ವಿತರಿಸಲಾಗುತ್ತದೆ.
15 ದಿನಗಳವರೆಗೂ ಈ ಬಾಂಡ್ ಗಳನ್ನು ನಗದೀಕರಿಸಿಕೊಳ್ಳುವ ಅವಕಾಶ ರಾಜಕೀಯ ಪಕ್ಷಗಳಿಗೆ ಇರುತ್ತದೆ. ಆದರೆ, ಇದಕ್ಕೂ ಮೊದಲು ಬಾಂಡ್ ಖರೀದಿಸುವ ವ್ಯಕ್ತಿ ಅಥವಾ ಕಂಪನಿ ತಮ್ಮ ಸ್ವವಿವರವನ್ನು ಬ್ಯಾಂಕ್ ನಲ್ಲಿ ನೀಡಬೇಕಾಗಿರುತ್ತದೆ.

ಬಾಂಡ್ ಬಗ್ಗೆ ಕಾಂಗ್ರೆಸ್ ಆರೋಪ ಮತ್ತು ಬಿಜೆಪಿಗರ ಉತ್ತರ
ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಕೆಲವು ಕಂಪನಿಗಳು ಚುನಾವಣಾ ಬಾಂಡ್ ಗಳನ್ನು ಖರೀದಿಸುತ್ತವೆ. ಹೀಗೆ ಬಾಂಡ್ ಮೂಲಕ ದೇಣಿಗೆ ನೀಡಿದ ದೇಣಿಗೆದಾರರ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗುತ್ತದೆ. ಇದರಿಂದ ಕಪ್ಪುಹಣವೆಲ್ಲ ಚುನಾವಣಾ ಬಾಂಡ್ ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಸಂದಾಯವಾಗುತ್ತಿದೆ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ, ಕೆಲವು ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶದ ಶೇ.90ರಷ್ಟು ಉದ್ಯಮಗಳು ಕೆಲವೇ ಕೆಲವು ಕಂಪನಿಗಳ ಮೂಲಕ ನಡೆಯುತ್ತಿದೆ ಎಂದು ಈ ಹಿಂದೆಯೇ ಕಾಂಗ್ರೆಸ್ ಮುಖಂಡ ಗಲಾಮ್ ನಬಿ ಆಜಾದ್ ಆರೋಪಿಸಿದ್ದರು.
ಚುನಾವಣಾ ಬಾಂಡ್ ಭ್ರಷ್ಟಾಚಾರದ ಕೂಪವಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. 2018ರ ಜನವರಿ 2ರಂದು ಕೇಂದ್ರ ಸರ್ಕಾರ ಘೋಷಿಸಿದ ಎಲೆಕ್ಷನ್ ಬಾಂಡ್, ಜಾಗೃತ ಚುನಾವಣಾ ನೀತಿಗೆ ಹಿಡಿದ ಕೈಗನ್ನಡಿಯಾಗಿದೆ. ದೇಶದ ಚುನಾವಣೆಗಳಲ್ಲಿ ನ್ಯಾಯಸಮ್ಮತ ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಈ ನೀತಿಯಿಂದ ಸಾಧ್ಯವಾಗುತ್ತದೆ. ದಾನಿಗಳ ಹೆಸರು ಹಾಗೂ ಸಂಪೂರ್ಣ ವಿವರ ಬ್ಯಾಂಕ್ ನಲ್ಲಿ ಸಂಗ್ರಹಿಸಲಾಗುತ್ತದೆ. ಇದರಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಕೇಂದ್ರ ಸರ್ಕಾರ ವಾದಿಸುತ್ತಿದೆ.

ಬಾಂಡ್ ಬಗ್ಗೆ ಚುನಾವಣಾ ಆಯೋಗ ಹೇಳೋದೇನು?
ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 29ಎ ಅಡಿ ನೊಂದಣಿಯಾದ ರಾಜಕೀಯ ಪಕ್ಷಗಳಷ್ಟೇ ಈ ಚುನಾವಣಾ ಬಾಂಡ್ ಪಡೆದುಕೊಳ್ಳಬಹುದು. ಇಂಥ ಪಕ್ಷಗಳು ತಮ್ಮ ಅಧಿಕೃತ ಖಾತೆಗಳ ಮೂಲಕ ಬಾಂಡ್ ನಗದೀಕರಣಗೊಳಿಸಬಹುದು. ದಾನಿಗಳಿಂದ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಗಳ ಮೂಲಕ ದೇಣಿಗೆ ಪಡೆಯಬಹುದು. ಆದರೆ, ಬಾಂಡ್ ಗಳ ಮೂಲಕ ಪಡೆದ ಮಾಹಿತಿಯನ್ನು ಬಹಿರಂಗಪಡಿಸುವ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಇದೇ ವೇಳೆ ಸರ್ಕಾರಿ ಸಂಸ್ಥೆಗಳು ಹಾಗೂ ವಿದೇಶಿ ಮೂಲಗಳಿಂದ ದೇಣಿಗೆ ಪಡೆಯುವುದನ್ನು ಆಯೋಗ ನಿಷೇಧಿಸಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications