ರಾಜಸ್ಥಾನ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ, ಅಚ್ಚರಿಯ ಅಭ್ಯರ್ಥಿ ಘೋಷಣೆ
ಬೆಂಗಳೂರು, ಡಿಸೆಂಬರ್ 12: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಒಂಬತ್ತು ದಿನಗಳ ಬಳಿಕ ಅಳೆದು ತೂಗಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬಿಜೆಪಿ ಹೈಕಮಾಂಡ್ ಸಿಎಂ ಅಭ್ಯರ್ಥಿಯಾಗಿ ಭಜನ್ಲಾಲ್ ಶರ್ಮಾ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭಜನ್ ಲಾಲ್ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಇಂದು ನಡೆದ ಶಾಸಕಾಂಗ ಸಭೆಯ ಬಳಿಕ ಈ ಅಚ್ಚರಿಯ ಹೆಸರು ಘೋಷಣೆಯಾಗಿದೆ. ರಾಜಸ್ಥಾನದ ಬಿಜೆಪಿ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ವಿನೋದ್ ತಾವ್ಡೆ ಮತ್ತು ಸರೋಜ್ ಪಾಂಡೆ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೈಪುರದ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸಿಪಿ ಜೋಶಿ ಅವರು ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಅಂತಿಮ ಘೋಷಣೆ ಮಾಡಲು ಶಾಸಕಾಂಗ ಪಕ್ಷವು ಸಭೆ ಸೇರಲಿದೆ. ಈ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ ಎಂದು ಹೇಳಿಕೆ ನೀಡಿದ್ದರು. ಜೋಶಿ ಅವರು ಸಿಎಂ ಕುರ್ಚಿಯ ಸ್ಪರ್ಧೆಯಿಂದ ದೂರ ಉಳಿದಿದ್ದರು.
ರಾಜ್ಯದಲ್ಲಿನ ಬೆಳವಣಿಗೆಗಳನ್ನು ಮೇಲ್ವಿಚಾರಣೆ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ವೀಕ್ಷಕರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಹೊಸದಾಗಿ ಚುನಾಯಿತ ಶಾಸಕರಿಂದ ಪ್ರತಿಕ್ರಿಯೆಯನ್ನು ಕೇಳಿದರು. ಮುಂದಿನ ಮುಖ್ಯಮಂತ್ರಿಗೆ ಶಾಸಕರ ಆಯ್ಕೆಯನ್ನು ಪರಿಗಣಿಸುವಂತೆ ವೀಕ್ಷಕರಿಗೆ ಸೂಚಿಸಿದ್ದರು. ಮುಖ್ಯಮಂತ್ರಿಗಳ ಪ್ರಸ್ತಾವನೆಯನ್ನು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮಂಡಿಸಿದ್ದರು.
2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ರಾಜಸ್ಥಾನದಲ್ಲಿ ನಡೆದ ಚುನಾವಣೆಯಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ರಾಜ್ಯ ವಿಧಾನಸಭೆಯ 199 ಸ್ಥಾನಗಳಲ್ಲಿ 115 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಕೆಳಗಿಳಿಸಿದೆ. 2018 ರಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದಿತು. ಬಿಷಪ್ ಮಾಲುಸ್ ಮತ್ತು ಪಕ್ಷೇತರರ ಬೆಂಬಲದೊಂದಿಗೆ ಗೆಹ್ಲೋಟ್ ಅದೇ ಸ್ಥಾನವನ್ನು ಪಡೆದರು.
ಈ ಮೂಲಕ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಗೆದ್ದ ಮೂರು ರಾಜ್ಯಗಳಿಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಮುಗಿಸಿದೆ. ಈ ಮೂರು ರಾಜ್ಯಗಳಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಛತ್ತೀಸ್ಗಢದಲ್ಲಿ ವಿಷ್ಣು ದೇವ್ ಸಾಯಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ, ಸೋಮವಾರ ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ಹೊಸ ಸಿಎಂ ಆಗಿ ಆಯ್ಕೆಯಾಗಿದ್ದಾರೆ, ಇಂದು ಮಂಗಳವಾರ ಬಹುನಿರೀಕ್ಷಿತ ರಾಜ್ಯವಾಗಿದ್ದ ರಾಜಸ್ಥಾನಕ್ಕೆ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
ಮಂಗಳವಾರ ಬೆಳಗ್ಗೆ ಕೆಲವು ಶಾಸಕರು ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕಿ ವಸುಂಧರಾ ರಾಜೇ ಅವರ ಮನೆಯಲ್ಲಿ ಬೀಡು ಬಿಟ್ಟಿದ್ದರು, ಆದರೆ ಹೈಕಮಾಂಡ್ ಹೊಸ ಮುಖ, ಅದೂ ಮೊದಲ ಬಾರಿ ಶಾಸಕರಾದ ಭಜನ್ ಲಾಲ್ ಶರ್ಮಾ ಅವರನ್ನು ಅಂತಿಮಗೊಳಿಸಿದೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ಅವರು ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸ್ಥಾನದ ಮುಂಚೂಣಿಯಲ್ಲಿದ್ದರು. ಕೊನೆಯವರೆಗೂ ಭಜನ್ ಲಾಲ್ ಶರ್ಮಾ ಅವರ ಹೆಸರು ಯಾರಿಗೂ ಗೊತ್ತಿರಲಿಲ್ಲ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಭಜನಲಾಲ್ ಶರ್ಮಾ ಅವರೇ ಹೆಸರನ್ನು ಪ್ರಸ್ತಾಪಿಸಿದರು ಮತ್ತು ಅದನ್ನು ಉಳಿದ ಸದಸ್ಯರು ಸರ್ವಾನುಮತದಿಂದ ಅನುಮೋದಿಸಿದರು.












Click it and Unblock the Notifications