ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯು ಉತ್ತರಾಖಂಡ ಜನತೆಗೆ ದ್ರೋಹ ಬಗೆದಿದೆ: ಕಾಂಗ್ರೆಸ್

|
Google Oneindia Kannada News

ನವದೆಹಲಿ,ಜುಲೈ 03: ಬಿಜೆಪಿಯು ಉತ್ತರಾಖಂಡ ಜನತೆಗೆ ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಉತ್ತರಾಖಂಡದ ದೇವಭೂಮಿಯನ್ನು ಬಿಜೆಪಿ ಅವಮಾನಗೊಳಿಸಿದ್ದು, ಈಗಿನ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹೊಣೆ ಎಂದು ಕಾಂಗ್ರೆಸ್ ದೂರಿದೆ.

ಉತ್ತರಾಖಂಡ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆಉತ್ತರಾಖಂಡ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

ಪದೇ ಪದೇ ಮುಖ್ಯಮಂತ್ರಿಯನ್ನು ಬದಲಾಯಿಸುವ ಮೂಲಕ ಬಿಜೆಪಿ ಜನರಿಗೆ ದ್ರೋಹ ಮಾಡುತ್ತಿದೆ, ಶುಕ್ರವಾರದಂದು ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ತೀರಥ್ ಸಿಂಗ್ ರಾಜೀನಾಮೆ ನೀಡಿದ್ದರು. ಇದರೊಂದಿಗೆ ನಾಲ್ಕು ತಿಂಗಳ ಅವಧಿಯೊಳಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯಾಗಿದೆ.

BJP Has Thrown Uttarakhand Into Political Instability, Betrayed People: Congress

2017ರಲ್ಲಿ ಉತ್ತರಾಖಂಡದ ಜನರು ಬಿಜೆಪಿಯನ್ನು ಆಯ್ಕೆ ಮಾಡಿದರು, ಆದರೆ ಅಭಿವೃದ್ಧಿಯತ್ತ ಗಮನ ಹರಿಸುವುದನ್ನು ಬಿಟ್ಟು ಸಂಪನ್ಮೂಲವನ್ನು ದೋಚಿದೆ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿದ್ದಾರೆ.

ಪದೇ ಪದೇ ಮುಖ್ಯಮಂತ್ರಿಯನ್ನು ಬದಲಿಸುತ್ತಿರುವ ಬಿಜೆಪಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಏನನ್ನೂ ಮಾಡಿಲ್ಲ. ಈ ಮೂಲಕ ಇಡೀ ರಾಜ್ಯವನ್ನು ಅವಮಾನಿಸಿದೆ. ಜನರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಅಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇವಭೂಮಿಯನ್ನು ಅವಲಾಮನಿಸಲಾಗಿದ್ದು, ಬಿಜೆಪಿ ರಾಜಕೀಯ ಅರಾಜಕತೆ ಸೃಷ್ಟಿಸಿದೆ ಎಂದು ಹೇಳಲಾಗಿದೆ.

ಉತ್ತರಾಖಂಡದಲ್ಲಿ ಈಗಿನ ರಾಜಕೀಯ ಅಸ್ಥಿರತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೊಣೆಗಾರರು ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

English summary
The Congress on Saturday hit out at the BJP leadership, saying instead of ushering in development, it has thrown Uttarakhand into political instability and betrayed its people by repeatedly changing chief ministers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X