ಮಮತಾ ಸರ್ಕಾರ ಬುಡಮೇಲು ಮಾಡಿಯೇ ತೀರುತ್ತೇನೆ: ಅಮಿತ್ ಶಾ ಅಬ್ಬರ
ಕೊಲ್ಕತ್ತ, ಆಗಸ್ಟ್ 11: ಇತ್ತೀಚೆಗಿನ ಎನ್ಸಿಆರ್ (ರಾಷ್ಟ್ರೀಯ ಪೌರತ್ವ ನೊಂದಾವಣಿ) ಸೇರಿದಂತೆ ಹಲವು ಕಾರಣಗಳಿಗಾಗಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಟೀಕಿಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ ವಿರುದ್ಧ ಇಂದು ಅಮಿತ್ ಶಾ ಶಕ್ತಿ ಪ್ರದರ್ಶಿಸಿದರು.
ಮಮತಾ ಬ್ಯಾನರ್ಜಿ ಅವರ ಆಡಳಿತದ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತದಲ್ಲಿ ಭಾರಿ ಬಿಜೆಪಿ rally ನಡೆಸಿದ ಅವರು, ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟುವಂತೆ ಮಾಡಿದರು.
ಯುವ ಬಿಜೆಪಿ ಆಯೋಜಿಸಿದ್ದ ಯುವ ಸ್ವಾಭಿಮಾನಿ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಸಿದ್ದರು. ಬಿಜೆಪಿ ಸಮಾವೇಶವೊಂದಕ್ಕೆ ಈ ಮಟ್ಟಿಗಿನ ಜನ ಸೇರಿದ್ದು ಪ.ಬಂಗಾಳದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ.

ನಾವು ಬಾಂಗ್ಲಾ ವಿರುದ್ಧ ಇಲ್ಲ
ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, 'ನಾವು ಬಂಗ್ಲಾದೇಶದ ವಿರುದ್ಧ ಅಲ್ಲ ನಾವು ಬಂಗಾಳದ ಮಮತಾ ಬ್ಯಾನರ್ಜಿ ವಿರುದ್ಧ' ಎಂದು ಹೇಳಿದರು.

ಎನ್ಸಿಆರ್ ಪ್ರಕ್ರಿಯೆ ನಿಲ್ಲದು: ಶಾ
ಎನ್ಸಿಆರ್ ಪ್ರಕ್ರಿಯೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದ ಅವರು, ನಾವು ಅದನ್ನು ಶಾಂತಿಯುತವಾಗಿ ನಡೆಸಿಯೇ ಸಿದ್ಧ ಮಮತಾ ಬ್ಯಾನರ್ಜಿ ಆಗಲಿ ರಾಹುಲ್ ಗಾಂಧಿ ಆಗಲಿ ಅದನ್ನು ತಡೆಯಲು ಸಾಧ್ಯವಿಲ್ಲ ಎಂದರು.

ಎನ್ಸಿಆರ್ಗೆ ಮಮತಾ ವಿರೋಧ
ಅಸ್ಸಾಂನಲ್ಲಿ ನಡೆಯುತ್ತಿರುವ ಎನ್ಸಿಆರ್ ಪ್ರಕ್ರಿಯೆಗೆ ಮಮತಾ ಬ್ಯಾನರ್ಜಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿಯು ಇದು ಅತ್ಯಂತ ಅವಶ್ಯಕವಾಗಿದ್ದು, ಅಕ್ರಮ ವಲಸಿಗರನ್ನು ಭಾರತದಿಂದ ಹೊರಗಟ್ಟಲು ಇದು ಅವಶ್ಯಕ ಎಂದು ಹೇಳಿದೆ.

ಮತಗಳಿಗಿಂತಲೂ ದೇಶ ಮುಖ್ಯ
'ನಮಗೆ ಮತಗಳಿಗಿಂತಲೂ ದೇಶವೇ ಮುಖ್ಯ ಎಂದ ಅಮಿತ್ ಶಾ, ಬಾಂಗ್ಲಾದ ಅಕ್ರಮ ವಲಸಿಗರನ್ನು ಮಮತಾ ಬ್ಯಾನರ್ಜಿ ಏಕೆ ಪೋಷಿಸುತ್ತಿದ್ದಾರೆ ಮತ್ತು ಅವರ ಬೆಂಬಲ ಏಕೆ ಮಾಡುತ್ತಿದ್ದಾರೆ, ರಾಹಲ್ ಗಾಂಧಿ ಕೂಡ ಈ ಬಗ್ಗೆ ಸ್ಪಷ್ಟ ನಿಲವು ತೆದಿಲ್ಲ ಅವರೂ ಈ ವಿಷಯವನ್ನು ರಾಜಕೀಯಕ್ಕೆ ಬಳಸಲು ಚಿಂತಿಸಿದ್ದಾರೆ ಎಂದರು.

ಅಮಿತ್ ಶಾಗೆ ಕಪ್ಪು ಬಾವುಟ ಪ್ರದರ್ಶನ
ಅಮಿತ್ ಶಾ ಭಾಷಣದ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಈ ಬಗ್ಗೆ ಮಾತನಾಡಿದ ಅವರು ಬಿಜೆಪಿ ಪಕ್ಷದ ಸ್ಥಾಪಕ ಶ್ಯಾಮ್ ಪ್ರಸಾದ್ ಸಹ ಬಗಾಳದವರು ಹಾಗಿದ್ದಮೇಲೆ ನಾನು ಬಂಗಾಳ ವಿರುದ್ಧ ಹೇಗೆ ಆಗುತ್ತೇನೆ ಎಂದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications