ಪ್ರಶ್ನೆ ಪರೀಕ್ಷೆಯ ಪತ್ರಿಕೆ ಸೋರಿಕೆ: ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಜೈಪುರ, ಜೂನ್. 13: ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜೈಪುರದಲ್ಲಿ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ಬೃಹತ್ ಪ್ರತಿಭಟನೆ ನಡೆಸಿದೆ. ಈ ತಿಂಗಳ ಆರಂಭದಲ್ಲಿ, ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಜಸ್ಥಾನದ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತ್ತು.
ಪ್ರತಿಭಟನಾಕಾರರು ಸೆಕ್ರೆಟರಿಯೇಟ್ಗೆ ತೆರಳದಂತೆ ತಡೆಯಲು ಪೊಲೀಸರು ಜಲಫಿರಂಗಿ ಮತ್ತು ತಡೆಗೋಡೆಗಳನ್ನು ಬಳಸಿದರು. ಪ್ರತಿಭಟನಾ ಸ್ಥಳದ ವೀಡಿಯೊಗಳು ಪೊಲೀಸರು ಪ್ರತಿಭಟನಾಕಾರರನ್ನು ಜಲ ಫಿರಂಗಿಗಳೊಂದಿಗೆ ಚದುರಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಬಿಜೆಪಿ ರಾಜ್ಯಸಭಾ ಸಂಸದರಾದ ಕಿರೋಡಿ ಮೀನಾ ಅವರು, ಸಚಿವ ಶಾಂತಿ ಧರಿವಾಲ್ ಅವರ ಭ್ರಷ್ಟಾಚಾರ ಮತ್ತು ರಾಜ್ಯದಲ್ಲಿನ ಗಣಿ ಮತ್ತು ಜಲ ಜೀವನ್ ಮಿಷನ್ಗೆ ಸಂಬಂಧಿಸಿದ ಹಗರಣಗಳನ್ನು ತಮ್ಮ ಪಕ್ಷವು ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.
#WATCH | Police use water cannon to disperse BJP workers protesting against Ashok Gehlot government in Jaipur over alleged paper leak pic.twitter.com/20zqe297kQ
— ANI MP/CG/Rajasthan (@ANI_MP_CG_RJ) June 13, 2023
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ದಾಳಿಯನ್ನು ಖಂಡಿಸಿ ಕೇಂದ್ರ ಸರ್ಕಾರವು ತನ್ನ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಇಂತಹ ಜಾರಿ ನಿರ್ದೇಶನಾಲಯದ ಹುಡುಕಾಟಗಳನ್ನು "ನಿರೀಕ್ಷಿಸಲಾಗಿದೆ" ಎಂದು ವ್ಯಂಗ್ಯವಾಡಿದ್ದರು.
ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸರ್ಕಾರದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆಗಳ ಸೋರಿಕೆ ಕುರಿತು ತನಿಖೆ ನಡೆಸುತ್ತಿರುವಾಗ ಜಾರಿ ನಿರ್ದೇಶನಾಲಯ ಮಧ್ಯಪ್ರವೇಶಿಸುತ್ತಿರುವುದು ಏಕೆ ಎಂದು ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದರು.
ಪ್ರತಿಭಟನೆಗೂ ಮುನ್ನ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸಂಸದರಾದ ಕಿರೋಡಿ ಮೀನಾ ಅವರು, 'ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯಲ್ಲಿ (ಡಿಒಐಟಿ) 5,000 ಕೋಟಿ ರೂಪಾಯಿ ಹಗರಣ ನಡೆದಿದೆ, ಆದರೆ ಭ್ರಷ್ಟಾಚಾರ ನಿಗ್ರಹ ದಳ ತನಿಖೆಗೆ ಅನುಮತಿ ಬಯಸಿದಾಗ ಮುಖ್ಯಮಂತ್ರಿ ನಿರಾಕರಿಸಿದರು' ಎಂದು ಆರೋಪಿಸಿದ್ದಾರೆ.
"ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಕಟ್ಟಡದಲ್ಲಿನ ಖಜಾನೆಯಿಂದ 2.31 ಕೋಟಿ ನಗದು ಮತ್ತು ಚಿನ್ನ ಪತ್ತೆಯಾಗಿದೆ ಎಂದು ಮೀನಾ ಹೇಳಿಕೊಂಡಿದ್ದಾರೆ. ಕಳೆದ ತಿಂಗಳು ಯೋಜನಾ ಭವನದ ನೆಲಮಾಳಿಗೆಯಲ್ಲಿ ಬೀಗ ಹಾಕಿದ ಅಲ್ಮೇರಾದಿಂದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಜೈಪುರ ಪೊಲೀಸರು ಡಿಒಐಟಿಯ ಜಂಟಿ ನಿರ್ದೇಶಕರನ್ನು ಬಂಧಿಸಿದ್ದರು.
"ಗೆಹ್ಲೋಟ್ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ರಾಜಸ್ಥಾನದಲ್ಲಿ ಒಂದು ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಹದಿನಾರು ಪರೀಕ್ಷೆಗಳು ನಡೆದಿವೆ ಮತ್ತು ಅವೆಲ್ಲವೂ ಸೋರಿಕೆಯಾಗಿದೆ. ಈಗ, ಜಾರಿ ನಿರ್ದೇಶನಾಲಯವು ಬಂದು ತನಿಖೆಯನ್ನು ಪ್ರಾರಂಭಿಸಿದೆ, ಆದ್ದರಿಂದ ಅಶೋಕ್ ಗೆಹ್ಲೋಟ್ ಭಯಗೊಂಡಿದ್ದಾರೆ" ಎಂದು ಸಂಸದರು ಆರೋಪಿಸಿದ್ದಾರೆ.
2021 ರಲ್ಲಿ ರಾಜ್ಯ ಶಿಕ್ಷಣ ಮಂಡಳಿಯಿಂದ ಶಿಕ್ಷಕರ ನೇಮಕಾತಿ ಸಮಯದಲ್ಲಿ ಮತ್ತು ಕಳೆದ ವರ್ಷ ರಾಜಸ್ಥಾನ ಸಾರ್ವಜನಿಕ ಸೇವೆ ನಡೆಸಿದ ಪರೀಕ್ಷೆ ಸೇರಿದಂತೆ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಆಕಾಂಕ್ಷಿಗಳಿಗೆ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ. ಅಂದಿನಿಂದ ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ರಾಜಸ್ಥಾನ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಪೇಪರ್ ಸೋರಿಕೆ ಕುರಿತು ತನಿಖೆ ನಡೆಸುತ್ತಿರುವ ರಾಜಸ್ಥಾನ ಪೊಲೀಸ್ನ ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) 2022 ರ ಹಿರಿಯ ಶಿಕ್ಷಕರ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆರ್ಪಿಎಸ್ಸಿ ಸದಸ್ಯ ಬಾಬುಲಾಲ್ ಕತಾರ, ಅವರ ಸೋದರಳಿಯ ಮತ್ತು ಚಾಲಕನನ್ನು ಏಪ್ರಿಲ್ನಲ್ಲಿ ಬಂಧಿಸಿತ್ತು. ಪರೀಕ್ಷೆ ಆರಂಭಕ್ಕೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಪತ್ರಿಕೆ ವ್ಯಾಪಕವಾಗಿ ಹರಿದಾಡಿದ್ದರಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications