Get Updates
Get notified of breaking news, exclusive insights, and must-see stories!

ಪ್ರಶ್ನೆ ಪರೀಕ್ಷೆಯ ಪತ್ರಿಕೆ ಸೋರಿಕೆ: ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಜೈಪುರ, ಜೂನ್. 13: ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜೈಪುರದಲ್ಲಿ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ಬೃಹತ್ ಪ್ರತಿಭಟನೆ ನಡೆಸಿದೆ. ಈ ತಿಂಗಳ ಆರಂಭದಲ್ಲಿ, ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಜಸ್ಥಾನದ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಪ್ರತಿಭಟನಾಕಾರರು ಸೆಕ್ರೆಟರಿಯೇಟ್‌ಗೆ ತೆರಳದಂತೆ ತಡೆಯಲು ಪೊಲೀಸರು ಜಲಫಿರಂಗಿ ಮತ್ತು ತಡೆಗೋಡೆಗಳನ್ನು ಬಳಸಿದರು. ಪ್ರತಿಭಟನಾ ಸ್ಥಳದ ವೀಡಿಯೊಗಳು ಪೊಲೀಸರು ಪ್ರತಿಭಟನಾಕಾರರನ್ನು ಜಲ ಫಿರಂಗಿಗಳೊಂದಿಗೆ ಚದುರಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

BJP Launched Protest Against Ashok Gehlot Government Over Alleged Paper Leak

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಬಿಜೆಪಿ ರಾಜ್ಯಸಭಾ ಸಂಸದರಾದ ಕಿರೋಡಿ ಮೀನಾ ಅವರು, ಸಚಿವ ಶಾಂತಿ ಧರಿವಾಲ್ ಅವರ ಭ್ರಷ್ಟಾಚಾರ ಮತ್ತು ರಾಜ್ಯದಲ್ಲಿನ ಗಣಿ ಮತ್ತು ಜಲ ಜೀವನ್ ಮಿಷನ್‌ಗೆ ಸಂಬಂಧಿಸಿದ ಹಗರಣಗಳನ್ನು ತಮ್ಮ ಪಕ್ಷವು ಬಹಿರಂಗಪಡಿಸುತ್ತದೆ ಎಂದು ಹೇಳಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ದಾಳಿಯನ್ನು ಖಂಡಿಸಿ ಕೇಂದ್ರ ಸರ್ಕಾರವು ತನ್ನ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗ ಇಂತಹ ಜಾರಿ ನಿರ್ದೇಶನಾಲಯದ ಹುಡುಕಾಟಗಳನ್ನು "ನಿರೀಕ್ಷಿಸಲಾಗಿದೆ" ಎಂದು ವ್ಯಂಗ್ಯವಾಡಿದ್ದರು.

ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸರ್ಕಾರದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆಗಳ ಸೋರಿಕೆ ಕುರಿತು ತನಿಖೆ ನಡೆಸುತ್ತಿರುವಾಗ ಜಾರಿ ನಿರ್ದೇಶನಾಲಯ ಮಧ್ಯಪ್ರವೇಶಿಸುತ್ತಿರುವುದು ಏಕೆ ಎಂದು ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದರು.

ಪ್ರತಿಭಟನೆಗೂ ಮುನ್ನ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸಂಸದರಾದ ಕಿರೋಡಿ ಮೀನಾ ಅವರು, 'ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯಲ್ಲಿ (ಡಿಒಐಟಿ) 5,000 ಕೋಟಿ ರೂಪಾಯಿ ಹಗರಣ ನಡೆದಿದೆ, ಆದರೆ ಭ್ರಷ್ಟಾಚಾರ ನಿಗ್ರಹ ದಳ ತನಿಖೆಗೆ ಅನುಮತಿ ಬಯಸಿದಾಗ ಮುಖ್ಯಮಂತ್ರಿ ನಿರಾಕರಿಸಿದರು' ಎಂದು ಆರೋಪಿಸಿದ್ದಾರೆ.

"ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಕಟ್ಟಡದಲ್ಲಿನ ಖಜಾನೆಯಿಂದ 2.31 ಕೋಟಿ ನಗದು ಮತ್ತು ಚಿನ್ನ ಪತ್ತೆಯಾಗಿದೆ ಎಂದು ಮೀನಾ ಹೇಳಿಕೊಂಡಿದ್ದಾರೆ. ಕಳೆದ ತಿಂಗಳು ಯೋಜನಾ ಭವನದ ನೆಲಮಾಳಿಗೆಯಲ್ಲಿ ಬೀಗ ಹಾಕಿದ ಅಲ್ಮೇರಾದಿಂದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಜೈಪುರ ಪೊಲೀಸರು ಡಿಒಐಟಿಯ ಜಂಟಿ ನಿರ್ದೇಶಕರನ್ನು ಬಂಧಿಸಿದ್ದರು.

"ಗೆಹ್ಲೋಟ್ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ರಾಜಸ್ಥಾನದಲ್ಲಿ ಒಂದು ವರ್ಷದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಹದಿನಾರು ಪರೀಕ್ಷೆಗಳು ನಡೆದಿವೆ ಮತ್ತು ಅವೆಲ್ಲವೂ ಸೋರಿಕೆಯಾಗಿದೆ. ಈಗ, ಜಾರಿ ನಿರ್ದೇಶನಾಲಯವು ಬಂದು ತನಿಖೆಯನ್ನು ಪ್ರಾರಂಭಿಸಿದೆ, ಆದ್ದರಿಂದ ಅಶೋಕ್ ಗೆಹ್ಲೋಟ್ ಭಯಗೊಂಡಿದ್ದಾರೆ" ಎಂದು ಸಂಸದರು ಆರೋಪಿಸಿದ್ದಾರೆ.

2021 ರಲ್ಲಿ ರಾಜ್ಯ ಶಿಕ್ಷಣ ಮಂಡಳಿಯಿಂದ ಶಿಕ್ಷಕರ ನೇಮಕಾತಿ ಸಮಯದಲ್ಲಿ ಮತ್ತು ಕಳೆದ ವರ್ಷ ರಾಜಸ್ಥಾನ ಸಾರ್ವಜನಿಕ ಸೇವೆ ನಡೆಸಿದ ಪರೀಕ್ಷೆ ಸೇರಿದಂತೆ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಆಕಾಂಕ್ಷಿಗಳಿಗೆ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ. ಅಂದಿನಿಂದ ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ರಾಜಸ್ಥಾನ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಪೇಪರ್ ಸೋರಿಕೆ ಕುರಿತು ತನಿಖೆ ನಡೆಸುತ್ತಿರುವ ರಾಜಸ್ಥಾನ ಪೊಲೀಸ್‌ನ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) 2022 ರ ಹಿರಿಯ ಶಿಕ್ಷಕರ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆರ್‌ಪಿಎಸ್‌ಸಿ ಸದಸ್ಯ ಬಾಬುಲಾಲ್ ಕತಾರ, ಅವರ ಸೋದರಳಿಯ ಮತ್ತು ಚಾಲಕನನ್ನು ಏಪ್ರಿಲ್‌ನಲ್ಲಿ ಬಂಧಿಸಿತ್ತು. ಪರೀಕ್ಷೆ ಆರಂಭಕ್ಕೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಪತ್ರಿಕೆ ವ್ಯಾಪಕವಾಗಿ ಹರಿದಾಡಿದ್ದರಿಂದ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+