ಕೇರಳದ ಬಿಜೆಪಿ ಕಾರ್ಯಕರ್ತನನ್ನು ಕೊಚ್ಚಿ ಕೊಲೆ
ಕೇರಳದ ತ್ರಿಸ್ಸೂರು ಜಿಲ್ಲೆಯಲ್ಲಿ 20 ವರ್ಷ ವಯಸ್ಸಿನ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಭಾನುವಾರ ತಡರಾತ್ರಿ ಮುಕ್ಕತ್ತುಕಾರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ
ತ್ರಿಸ್ಸೂರು, ಫೆಬ್ರವರಿ 13: ತ್ರಿಸ್ಸೂರು ಜಿಲ್ಲೆಯಲ್ಲಿ 20 ವರ್ಷ ವಯಸ್ಸಿನ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಭಾನುವಾರ ತಡ ರಾತ್ರಿ ಮುಕ್ಕತ್ತುಕಾರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ಕಾರ್ಯಕರ್ತರನ್ನು ನಿರ್ಮಲ್ ಎಂದು ಗುರುತಿಸಲಾಗಿದೆ. ರಾಜಕೀಯ ದ್ವೇಷಕ್ಕೆ ಬಲಿಯಾಗುವವರ ಸಂಖ್ಯೆ ಏರುತ್ತಲೇ ಇದೆ.
ಕೊಲೆ ಹಿಂದಿನ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.[ಬಿಜೆಪಿ ಕಾರ್ಯಕರ್ತ ಕೊಲೆ: ಆರು ಸಿಪಿಎಂ ಕಾರ್ಯಕರ್ತರ ಬಂಧನ]

ರಾಜಕೀಯ ದ್ವೇಷದಿಂದ ನಡೆದಿರುವ ಕೊಲೆಗಳ ಸರಣಿಗೂ ಈ ಕೊಲೆ ಸೇರಲಿದೆಯೇ ಎಂಬ ನಿರೀಕ್ಷಿತ ಪ್ರಶ್ನೆಯನ್ನು ಪೊಲೀಸರು ತಳ್ಳಿ ಹಾಕಿಲ್ಲ. ಕೊಲೆಗಾರರ ಪತ್ತೆಗೆ ವಿಶೇಷ ತಂಡ ರೂಪಿಸಲಾಗಿದ್ದು, ಇನ್ನಷ್ಟು ವಿಷಯ ತಿಳಿಯ ಬೇಕಿದೆ ಎಂದಿದ್ದಾರೆ.
ಕೇರಳದ ಆಂದಾಲೂರ್ ಎಂಬಲ್ಲಿ ಸಿ ಸಂತೋಷ್ ಎಂಬ 52 ವರ್ಷ ವಯಸ್ಸಿನ ಬಿಜೆಪಿ ಕಾರ್ಯಕರ್ತನ ಹತ್ಯೆಯಾದ ಒಂದು ತಿಂಗಳೊಳಗೆ ನಿರ್ಮಲ್ ಅವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲ್ಲಲಾಗಿದೆ. ಸಿಪಿಐಎಂ ಹಾಗೂ ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ ಕಾರ್ಯಕರ್ತರು ಬಲಿಯಾಗುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications