ಕೊರೊನಾ ನಿಯಮ ಉಲ್ಲಂಘಿಸಿದ ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ
ಡೆಹ್ರಾಡೂನ್, ಸೆ 28: ಕೊರೊನಾ ಸೋಂಕಿತರು ಅಥವಾ ಸೋಂಕಿತರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಗೆ ಒಳಪಡಬೇಕು ಎನ್ನುವ ನಿಯಮವನ್ನು, ಬಿಜೆಪಿಯ ಹಿರಿಯ ನಾಯಕಿ, ಮಾಜಿ ಸಚಿವೆ ಉಮಾ ಭಾರತಿ ಉಲ್ಲಂಘಿಸಿದ್ದಾರೆ.
ಉತ್ತರಾಖಾಂಡ ಸರಕಾರದ ಶಿಕ್ಷಣ ಸಚಿವ ಧನ್ ಸಿಂಗ್ ರಾವತ್ ಜೊತೆ ಉಮಾ ಭಾರತಿ ಕೇದಾರನಾಥಗೆ ತೆರಳಿದ್ದರು. ಸಚಿವ ರಾವತ್ ಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಕೋವಿಡ್ ನಿಯಮದ ಪ್ರಕಾರ, ಅವರ ಸಂಪರ್ಕದಲ್ಲಿದ್ದವರೂ ಕ್ವಾರಂಟೈನ್ ಗೆ ಒಳಪಡಬೇಕಿತ್ತು.
ಮುಂದಿನ ಕೆಲವು ದಿನಗಳ ಕಾಲ ಎಲ್ಲೂ ಪ್ರಯಾಣಿಸದಂತೆ, ವೈದ್ಯರು ಉಮಾ ಭಾರತಿಗೆ ಸೂಚಿಸಿದ್ದರು. ಆದರೂ, ವೈದ್ಯರ ಸಲಹೆಯನ್ನು ಮೀರಿ, ಉಮಾ ಭಾರತಿ ಬದರೀನಾಥ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಷ್ಟೇ ಅಲ್ಲದೇ, ಅಲ್ಲಿ ಹಲವು ಜನರನ್ನು, ದೇವಾಲಯದ ಆಡಳಿತ ಮಂಡಳಿ ಮತ್ತು ಅರ್ಚಕರನ್ನು ಭೇಟಿಯಾಗಿದ್ದರು.

"ಸಚಿವ ರಾವತ್ ಅವರಿಗೆ ಸೋಂಕು ತಗಲಿದ ನಂತರ, ವೈದ್ಯರ ತಂಡವನ್ನು ಕರೆಸಿಕೊಂಡು, ತನ್ನ ಮತ್ತು ತನ್ನ ಜೊತೆಗಿರುವವರ ಟೆಸ್ಟ್ ಅನ್ನು ಉಮಾ ಭಾರತಿ ಮಾಡಿಸಿಕೊಂಡಿದ್ದರು"ಎಂದು ರುದ್ರಪ್ರಯಾಗದ ವೈದ್ಯಾಧಿಕಾರಿ ಡಾ.ಡಿ.ಪಿ.ಶುಕ್ಲಾ ಹೇಳಿದ್ದಾರೆ.
ಸೆಪ್ಟಂಬರ್ ಮೂವತ್ತರಂದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನ ವಿಶೇಷ ನ್ಯಾಯಾಲಯ ಅಂತಿಮ ತೀರ್ಪನ್ನು ನೀಡಲಿದೆ. ಅಂದು, ಕೋರ್ಟಿನಲ್ಲಿ ಖುದ್ದು ಹಾಜರಿರುವಂತೆ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿಗೆ ನ್ಯಾಯಾಲಯ ಸೂಚಿಸಿದೆ.
''ನಾನು ವಂದೇ ಮಾತರಂ ಕುಂಜ್ ನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ಹರಿದ್ವಾರ ಹಾಗೂ ಋಷಿಕೇಶದ ನಡುವೆ ಇರುವ ತಾಣ ಇದಾಗಿದೆ. ಇನ್ನು ನಾಲ್ಕು ದಿನಗಳ ನಂತರ ಮತ್ತೊಮ್ಮೆ ಕೊವಿಡ್ 19 ಪರೀಕ್ಷೆಗೆ ಒಳಪಡುತ್ತೇನೆ. ಪರಿಸ್ಥಿತಿ ಹೀಗೆ ಮುಂದುವರೆದರೆ ವೈದ್ಯರ ಸಲಹೆಯಂತೆ ಮುಂದುವರೆಯುತ್ತೇನೆ'' ಎಂದು ಉಮಾ ಭಾರತಿ ಸರಣಿ ಟ್ವೀಟ್ ಮಾಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications