ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿಗೆ ಕೊವಿಡ್ 19ಸೋಂಕು
ನವದೆಹಲಿ, ಸೆ. 27: ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಅವರಿಗೆ ಕೊವಿಡ್ 19ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತಂತೆ ಉಮಾಭಾರತಿ ಅವರು ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ತಡರಾತ್ರಿ ತಿಳಿಸಿದ್ದಾರೆ.
ಉಮಾಭಾರತಿ ಅವರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಜ್ವರಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೊವಿಡ್ ವಿರುದ್ಧ ಸುರಕ್ಷಿತಾ ಕ್ರಮಗಳನ್ನು ಅನುಸರಿಸುತ್ತಾ ಬಂದಿದ್ದರು. ಶನಿವಾರದಂದು ಕೊವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಪಾಸಿಟಿವ್ ಎಂದು ವರದಿ ಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿ, ''ನಾನು ವಂದೇ ಮಾತರಂ ಕುಂಜ್ ನಲ್ಲಿ ಕ್ವಾರಂಟೈನ್ ನಲ್ಲಿದ್ದೇನೆ. ಹರಿದ್ವಾರ ಹಾಗೂ ಋಷಿಕೇಶದ ನಡುವೆ ಇರುವ ತಾಣ ಇದಾಗಿದೆ. ಇನ್ನು ನಾಲ್ಕು ದಿನಗಳ ನಂತರ ಮತ್ತೊಮ್ಮೆ ಕೊವಿಡ್ 19 ಪರೀಕ್ಷೆಗೆ ಒಳಪಡುತ್ತೇನೆ. ಪರಿಸ್ಥಿತಿ ಹೀಗೆ ಮುಂದುವರೆದರೆ ವೈದ್ಯರ ಸಲಹೆಯಂತೆ ಮುಂದುವರೆಯುತ್ತೇನೆ'' ಎಂಬರ್ಥದಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ.
१) मै आपकी जानकारी मै यह डाल रही हू की मैंने आज अपनी पहाड़ की यात्रा के समाप्ति के अन्तिम दिन प्रशासन को आग्रह करके कोरोना टेस्ट के टीम को बुलवाया क्यूँकि मुझे ३ दिन से हलका बुख़ार था ।
— Uma Bharti (@umasribharti) September 26, 2020
1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ್ ಜೋಷಿ ಅವರ ಜೊತೆಗೆ ಉಮಾ ಭಾರತಿ ಕೂಡಾ ವಿಚಾರಣೆ ಎದುರಿಸಿದ್ದು, ಸೆಪ್ಟೆಂಬರ್ 30ರಂದು ನೀಡಲು ಲಕ್ನೋದ ಸಿಬಿಐ ಕೋರ್ಟ್ ಮುಂದಾಗಿದೆ. ತೀರ್ಪಿನ ದಿನದಂದು ಹಾಜರಿರಬೇಕಾಗಿತ್ತು. ಆದರೆ, ಈಗ ಕೋವಿಡ್ ಹಿನ್ನೆಲೆಯಲ್ಲಿ ವಿನಾಯಿತಿ ಪಡೆದುಕೊಳ್ಳಬಹುದು
-
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications