'X' ನಲ್ಲಿ 'ಬ್ಲೂ ಟಿಕ್' ಕಳೆದುಕೊಂಡ ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್ ಖಟ್ಟರ್- ಏಕೆ ಗೊತ್ತೇ?
ನವದೆಹಲಿ, ಆಗಸ್ಟ್ 16: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ನಾಯಕ ಸಂಬಿತ್ ಪಾತ್ರ ಸೇರಿದಂತೆ ಹಲವಾರು ಬಿಜೆಪಿ ನಾಯಕರು 'X' ಸಾಮಾಜಿಕ ಮಾಧ್ಯಮದಲ್ಲಿ 'ಬ್ಲೂ ಟಿಕ್' ಮಾರ್ಕ್ ಅನ್ನು ಕಳೆದುಕೊಂಡಿದ್ದಾರೆ.
'ಹರ್ ಘರ್ ತಿರಂಗಾ' ಅಭಿಯಾನದ ಭಾಗವಾಗಿ ಅವರು ತಮ್ಮ ಪ್ರೊಪೈಲ್ ಚಿತ್ರವನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಬ್ಲೂ ಟಿಕ್ ಮಾರ್ಕ್ ಅನ್ನು ಅವರ ಖಾತೆಯಿಂದ ತೆಗೆದುಹಾಕಲಾಗಿದೆ.

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಹ 'X' ನಲ್ಲಿ ಬ್ಲೂ ಟಿಕ್ ಕಳೆದುಕೊಂಡಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಹ ತನ್ನ ಪ್ರೊಪೈಲ್ ಫೋಟೊವನ್ನು ಬದಲಿಸಿದ ಬಳಿಕ 'ಬ್ಲೂ ಟಿಕ್' ಅನ್ನು ಕಳೆದುಕೊಂಡಿದೆ. ಬಿಸಿಸಿಐ ಸಹ ತನ್ನ ಡಿಪಿಯನ್ನು ಬದಲಿಸಿ ರಾಷ್ಟ್ರ ಧ್ವಜವನ್ನು ಹಾಕಿಕೊಂಡಿತ್ತು.
ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳು ತಮ್ಮದೇ ಆದ ನಿಯಮಗಳು ಮತ್ತು ನೀತಿಗಳನ್ನು ಹೊಂದಿವೆ. 'X' ನ ನೀತಿ ನಿಯಮಗಳ ಪ್ರಕಾರ, ಖಾತೆಗಳು ತಮ್ಮ ನೈಜ ಹೆಸರುಗಳು ಮತ್ತು ಚಿತ್ರಗಳನ್ನು ಬಳಸುವ ಅಗತ್ಯವಿದೆ. ಆದ್ದರಿಂದ, ಈ ರಾಜಕೀಯ ನಾಯಕರು ತಮ್ಮ ಪ್ರೊಫೈಲ್ ಚಿತ್ರಗಳನ್ನು ಬದಲಾಯಿಸಿದಾಗ, ಅವರು ಟ್ವಿಟರ್ನ ಪ್ರಮುಖ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಪರಿಣಾಮವಾಗಿ, ಅವರು ಬ್ಲೂ ಟಿಕ್ ಮಾರ್ಕ್ ಅನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ನ ನಿರ್ವಾಹಕರು ಈ ಖಾತೆಗಳನ್ನು ಮತ್ತೊಮ್ಮೆ ಪರಿಶೀಲಿಸುತ್ತಾರೆ. ಅವು ನೀತಿಗಳಿಗೆ ಅನುಸಾರವಾಗಿರುವುದು ಕಂಡುಬಂದರೆ, ಅವುಗಳಿಗೆ ಬ್ಲೂ ಟಿಕ್ ಅನ್ನು ಮರಳಿ ನೀಡಲಾಗುತ್ತದೆ.
'ಹರ್ ಘರ್ ತಿರಂಗ' ಅಭಿಯಾನ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಟ್ವಿಟ್ಟರ್ ಪ್ರೊಪೈಲ್ ಚಿತ್ರವನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬಳಕೆದಾರರಲ್ಲಿ ಕೇಳಿಕೊಂಡಿದ್ದರು. ಅವರ ವಿನಂತಿಯನ್ನು ಅನುಸರಿಸಿ, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಪ್ರೊಪೈಲ್ ಚಿತ್ರವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದರು.

ಮೋದಿ ಅವರು ಸಹ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರಗಳನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದ್ದಾರೆ. ಮೋದಿಯವರ ಟ್ವಿಟ್ಟರ್ ಪ್ರೊಫೈಲ್ನಿಂದ ಗ್ರೇ ವೆರಿಫಿಕೇಶನ್ ಟಿಕ್ ಅನ್ನು ತೆಗೆದುಹಾಕಲಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.
-
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ












Click it and Unblock the Notifications