BJP Manifesto 2024: 3 ಬುಲೆಟ್ ರೈಲು, ಸಿಎಎ ಸೇರಿ ಬಿಜೆಪಿ 'ಸಂಕಲ್ಪ ಪತ್ರ'ದಲ್ಲಿ ಇರುವ ಪ್ರಮುಖಾಂಶಗಳು
ನವದೆಹಲಿ, ಏಪ್ರಿಲ್. 14: ಲೋಕ ಸಭಾ ಚುನಾವಣೆಯ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಬಿಜೆಪಿ ಭರವಸೆ ನೀಡಿದೆ. ಏಪ್ರಿಲ್ 14 ರಂದು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ 'ಸಂಕಲ್ಪ ಪತ್ರ' ಭಾರತದ ನಾಲ್ಕು ಸ್ತಂಭಗಳಾದ ಯುವಕರು, ಮಹಿಳೆಯರು, ಬಡವರು ಮತ್ತು ರೈತರನ್ನು ಸಶಕ್ತಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿರುವ ಅವರು, "ಇಡೀ ದೇಶವೇ ಬಿಜೆಪಿಯ 'ಸಂಕಲ್ಪ ಪತ್ರ'ಕ್ಕಾಗಿ ಕಾಯುತ್ತಿದೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯ ಪ್ರತಿಯೊಂದು ಅಂಶವನ್ನು ಗ್ಯಾರಂಟಿಯಾಗಿ ಜಾರಿಗೆ ತಂದಿರುವುದು ಇದರ ಹಿಂದೆಯಿರುವ ದೊಡ್ಡ ಕಾರಣವಿದೆ. ಅಭಿವೃದ್ಧಿ ಹೊಂದಿದ ಭಾರತದ 4 ಬಲವಾದ ಆಧಾರ ಸ್ತಂಭಗಳಾದ ಯುವಜನರು, ಮಹಿಳೆಯರು, ಬಡವರು ಮತ್ತು ರೈತರಿಗೆ ಈ 'ಸಂಕಲ್ಪ ಪತ್ರ' ಅಧಿಕಾರ ನೀಡುತ್ತದೆ" ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಉತ್ತರಾಖಂಡದ ಬಿಜೆಪಿ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿದೆ. ಇದು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಇತರ ನಾಗರಿಕ ಸಮಸ್ಯೆಗಳನ್ನು ನಿಯಂತ್ರಿಸುವ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಬದಲಾಸಲಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಬಹುಪತ್ನಿತ್ವವನ್ನು ನಿಷೇಧಿಸುವುದಾಗಿ ಮತ್ತು ಯುಸಿಸಿಯನ್ನು ಜಾರಿಗೆ ತರುವುದಾಗಿ ಭರವಸೆ ನೀಡುತ್ತಿದ್ದಾರೆ.
ಬಿಜೆಪಿಯ ಪ್ರಣಾಳಿಕೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಹೇಳಿದ್ದು ಏನು?
75 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರನ್ನು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ವಯೋವೃದ್ಧರ ದೊಡ್ಡ ಚಿಂತೆ ಎಂದರೆ ಅವರು ತಮ್ಮ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವುದು, ಮಧ್ಯಮ ವರ್ಗದವರಿಗೆ ಇದು ಇನ್ನು ಗಂಭೀರ ಸಮಸ್ಯೆ. 75 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯನ್ನು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ತರಲಾಗುವುದು ಎಂದಿದ್ದಾರೆ.
ಉಚಿತ ಪಡಿತರ ಯೋಜನೆ ಮುಂದಿನ ಐದು ವರ್ಷಗಳವರೆಗೆ ಮುಂದುವರಿಯುತ್ತದೆ. ಬಿಜೆಪಿ ಮುದ್ರಾ ಯೋಜನೆಯಡಿ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಿದೆ. ಉದ್ಯಮ 4.0 ಯುಗಕ್ಕೆ ಅಗತ್ಯವಿರುವ ರೀತಿಯ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಇದು ಹೊಸ ಶಕ್ತಿಯಾಗಿ ಬಳಸಲ್ಪಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

3 ಬುಲೆಟ್ ರೈಲುಗಳ ಪ್ರಾರಂಭ
ಕೋಟಿಗಟ್ಟಲೆ ಕುಟುಂಬಗಳ ವಿದ್ಯುತ್ ಬಿಲ್ಗಳನ್ನು ಶೂನ್ಯಕ್ಕೆ ಇಳಿಸಲು ಬಿಜೆಪಿ ಕೆಲಸ ಮಾಡುತ್ತದೆ. ದೇಶದಲ್ಲಿ ಇನ್ನೂ 3 ಬುಲೆಟ್ ರೈಲುಗಳು ಪ್ರಾರಂಭವಾಗಲಿವೆ. ಮೂರು ರೀತಿಯ ವಂದೇ ಭಾರತ್ ರೈಲು ಪರಿಚಯಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
"ಬಿಜೆಪಿಯು ದೇಶದ ಮೂಲೆ ಮೂಲೆಗೆ ವಂದೇ ಭಾರತ್ ರೈಲುಗಳನ್ನು ವಿಸ್ತರಿಸಲಿದೆ. ವಂದೇ ಭಾರತ್ 3 ಮಾದರಿಗಳು ದೇಶದಲ್ಲಿ ಓಡಲಿವೆ ವಂದೇ ಭಾರತ್ ಸ್ಲೀಪರ್, ವಂದೇ ಭಾರತ್ ಚೇರ್ಕಾರ್ ಮತ್ತು ವಂದೇ ಭಾರತ್ ಮೆಟ್ರೋ. ಇಂದು ಅಹಮದಾಬಾದ್ ಮುಂಬೈ ಬುಲೆಟ್ ರೈಲಿನ ಕೆಲಸ ನಡೆಯುತ್ತಿದೆ. ಅದೇ ರೀತಿಯಲ್ಲಿ, ಉತ್ತರ ಭಾರತದಲ್ಲಿ ಒಂದು ಬುಲೆಟ್ ರೈಲು, ದಕ್ಷಿಣ ಭಾರತದಲ್ಲಿ ಒಂದು ಬುಲೆಟ್ ರೈಲು ಮತ್ತು ಪೂರ್ವ ಭಾರತದಲ್ಲಿ ಒಂದು ಬುಲೆಟ್ ರೈಲು ಓಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
"ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಸಾಕಾರಗೊಳಿಸುವ ಸಂಕಲ್ಪದೊಂದಿಗೆ ನಾವು ಮುನ್ನಡೆಯುತ್ತೇವೆ. ಬಿಜೆಪಿಯು ದೇಶದ ಹಿತದೃಷ್ಟಿಯಿಂದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅಗತ್ಯವೆಂದು ಪರಿಗಣಿಸುತ್ತದೆ" ಎಂದು ಹೇಳಿದ್ದಾರೆ.
"ಬಿಜೆಪಿ ಮೂರು ರೀತಿಯ ಮೂಲಸೌಕರ್ಯಗಳ ಮೂಲಕ 21 ನೇ ಶತಮಾನದ ಭಾರತದ ಅಡಿಪಾಯವನ್ನು ಬಲಪಡಿಸಲು ಹೊರಟಿದೆ. 1. ಸಾಮಾಜಿಕ ಮೂಲಸೌಕರ್ಯ, 2. ಡಿಜಿಟಲ್ ಮೂಲಸೌಕರ್ಯ, 3. ಭೌತಿಕ ಮೂಲಸೌಕರ್ಯ. ನಾವು ಸಾಮಾಜಿಕ ಮೂಲಸೌಕರ್ಯಕ್ಕಾಗಿ ಹೊಸ ಶಿಕ್ಷಣ ಸಂಸ್ಥೆಗಳನ್ನು ತೆರೆಯುತ್ತಿದ್ದೇವೆ. ಭೌತಿಕ ಮೂಲಸೌಕರ್ಯಗಳ ಅಡಿಯಲ್ಲಿ ನಾವು ದೇಶದಾದ್ಯಂತ ಹೆದ್ದಾರಿಗಳು, ರೈಲ್ವೆಗಳು, ವಾಯುಮಾರ್ಗಗಳು ಮತ್ತು ಜಲಮಾರ್ಗಗಳನ್ನು ಆಧುನೀಕರಿಸುತ್ತಿದ್ದೇವೆ. 5G ನೆಟ್ವರ್ಕ್ ಅನ್ನು ವಿಸ್ತರಿಸುತ್ತಿದ್ದೇವೆ, 6G ಯಲ್ಲಿ ಕೆಲಸ ಮಾಡುತ್ತಿದ್ದೇವೆ ಮತ್ತು ಉದ್ಯಮ 4.0 ಅನ್ನು ಗಮನದಲ್ಲಿಟ್ಟುಕೊಂಡು ನಾವು ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸುತ್ತಿದ್ದೇವೆ" ಎಂದು ಭರವಸೆ ನೀಡಿದ್ದಾರೆ.
ಬುಡಕಟ್ಟು ಪಾರಂಪರಿಕ ಸಂಶೋಧನೆಗೂ ಬಿಜೆಪಿ ಪ್ರೋತ್ಸಾಹ ನೀಡಲಿದೆ. ಡಿಜಿಟಲ್ ಜಂಜಾಟಿಯ ಕಲಾ ಅಕಾಡೆಮಿ ಸ್ಥಾಪಿಸಲಾಗುವುದು. ತೃತೀಯಲಿಂಗಿ ಸಮುದಾಯವನ್ನೂ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ತರಲು ಬಿಜೆಪಿ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications