ಯುವಕರು ಮಹಿಳಾ ಮಣಿಗಳೇ ಬಿಜೆಪಿ ಟಾರ್ಗೆಟ್; ದಕ್ಷಿಣದಲ್ಲಿ ಪಕ್ಷ ಬಲವರ್ಧನೆಗೆ ಬ್ಲ್ಯೂ ಪ್ರಿಂಟ್ ರೆಡಿ
ನವದೆಹಲಿ, ಏಪ್ರಿಲ್ 14: ಲೋಕಸಭೆ ಚುನಾವಣೆಗೆ ಇನ್ನೂ ಕೆಲವೇ ದಿನಗಳಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಮಹಿಳೆಯರಿಗೆ ವಿಶೇಷ ಗ್ಯಾರಂಟಿ ಯೋಜನೆ ಘೋಷಿಸಿ ಅಧಿಕಾರ ಪಡೆದಿದೆ. ಇದೀಗ ಲೋಕಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸಲು ಹೊಸ ಯೋಜನೆಗಳನ್ನು ಘೋಷಿಸಲು ರಾಜಕೀಯ ಪಕ್ಷಗಳು ಮುಂದಾಗಿವೆ.
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು 'ನಾರಿ ನ್ಯಾಯ' ಗ್ಯಾರಂಟಿ ಘೋಷಣೆ ಮಾಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆ ಬಿಡುಗಡೆಗೊಳಿಸಿ ನಾರಿ ನ್ಯಾಯ ಗ್ಯಾರಂಟಿಯನ್ನು ಘೋಷಿಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಉದ್ಯೋಗಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದು, ಇದೀಗ ಮೂರನೇ ಬಾರಿ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಎರುವ ಕನಸು ಕಂಡ ಬಿಜೆಪಿಯೂ ಸಹ ಗ್ಯಾರಂಟಿ ಅಸ್ತ್ರಗಳಿಗೆ ಮೊರೆ ಹೋಗಿದೆ.

ಮೊದಲು ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಘೋಷಣೆ, ಇಲ್ಲಿ ರಾಜ್ಯದ ಮತದಾರ ಫುಲ್ ಮಾರ್ಕ್ಸ್ ನೀಡಿದ್ದಾನೆ. ಈ ಒಂದು ತಂತ್ರದಿಂದಲೇ ಈ ಬಾರಿ ಕಾಂಗ್ರೆಸ್ ಮತ್ತೊಂದು ರಣ ತಂತ್ರವನ್ನು ಹೆಣೆದುಕೊಂಡಿದೆ. ಇತ್ತ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದನ್ನು ನೋಡಿದರೆ ಕರ್ನಾಟಕದ ಚುನಾವಣೆ ಈ ಪಕ್ಷದ ಮೇಲೆ ಎಷ್ಟು ಪ್ರಭಾವ ಬೀರಿದೆ ಎಂದು ತಿಳಿಯುತ್ತದೆ.
ಕರ್ನಾಟಕದಲ್ಲಿ ಪಂಚ ಗ್ಯಾರಂಟಿಗಳನ್ನ ನೀಡಿರುವ ಕಾಂಗ್ರೆಸ್ವ, ಮಹಿಳೆಯರು ಹಾಗೂ ಯುವಕರನ್ನೇ ಟಾರ್ಗೆಟ್ ಮಾಡಿಕೊಂಡು ಯೋಜನೆಗಳನ್ನ ತರುವ ಭರವಸೆ ನೀಡಿ ಬರೋಬ್ಬರಿ 135 ಸ್ಥಾನಗಳನ್ನ ಗೆದ್ದಿರುವ ಕಾಂಗ್ರೆಸ್ ದಾರಿಯಲ್ಲೇ ಬಿಜೆಪಿ ಹೈಕಮಾಂಡ್ ಮೋದಿ ಗ್ಯಾರಂಟಿ ಅಸ್ತ್ರವನ್ನ ಪ್ರಯೋಗಿಸಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ದು, ಈ ಪ್ರಣಾಳಿಕೆಯಲ್ಲಿ ಹೆಚ್ಚಾಗಿ ಮಹಿಳಾ ಮಣಿಗಳು ಹಾಗೂ ಯುವ ಸಮುದಾಯವನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ ನೀಡುವ ಭರವಸೆಯನ್ನ ನೀಡಿದ್ದು, ಮೂರು ಕೋಟಿ ಮಹಿಳೆಯರಿಗೆ ಲಕ್ಪತಿ ದೀದಿ ಯೋಜನೆಯ ಗ್ಯಾರಂಟಿ ನೀಡಲಾಗಿದೆ. ಅಲ್ಲದೇ ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆಯನ್ನ ನೀಡಿದ್ದು, ಈ ಭರವಸೆಯ ಮೂಲಕ ಮಹಿಳಾ ಮತದಾರರ ಸೆಳೆಯುವ ತಂತ್ರಗಾರಿಕೆಯನ್ನ ಬಿಜೆಪಿ ಹೈಕಮಾಂಡ್ ಹಾಕಿಕೊಂಡಿದ್ದು, ಈ ಮೂಲಕ ಮೋದಿ ಅವರು ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಹೆಚ್ಚಿನದಾಗಿ ಮಹಿಳೆಯರು ಹಾಗೂ ಯುವಕರನೇ ಟಾರ್ಗೆಟ್ ಮಾಡಲಾಗಿದೆ.
ಇನ್ನೂ ಬಿಜೆಪಿ ಪ್ರಣಾಳಿಕೆಗೆ ಮೋದಿಯವರ ಗ್ಯಾರಂಟಿ ಅಸ್ತ್ರ ಎಂದು ಕರೆಯಲಾಗಿದೆ. ಇದು 14 ಭರವಸೆಗಳನ್ನು ಒಳಗೊಂಡಿದ್ದು, ಅವುಗಳಲ್ಲಿ ಮಹಿಳಾ ಸಬಲೀಕರಣ, ಯುವಕರು ಮತ್ತು ಬಡವರ ಉನ್ನತಿಗೆ ಗಮನಹರಿಸುತ್ತದೆ. ಅಂದರೆ, ಪ್ರಣಾಳಿಕೆಯು GYAN ಅನ್ನು ಕೇಂದ್ರೀಕರಿಸುತ್ತದೆ. ಇದು 'ಗರೀಬ್' (ಬಡವರು), ಯುವ (ಯುವಕರು), ಅನ್ನದಾತ (ರೈತರು) ಮತ್ತು ನಾರಿ (ಮಹಿಳೆಯರು) ಯರನ್ನು ಒಳಗೊಂಡ ಯೋಜನೆಗಳಾಗಿವೆ.
ಇತ್ತ ದಕ್ಷಿಣ ರಾಜ್ಯಗಳ ಫೈಕಿ ಈಗಾಗಲೇ ಕರ್ನಾಟಕದಲ್ಲಿ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ಹೀಗಾಗಿ ಮೋದಿ ಗ್ಯಾರಂಟಿ ಅಸ್ತ್ರಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್ ಪಕ್ಷದಂತೆ ಮಹಿಳಾ ಮಣಿಯರನ್ನ ಹಾಗೂ ಯುವಕರನ್ನ ಹೆಚ್ಚಿನ ಆದ್ಯತೆ ನೀಡುವ ಮೂಲಕ ದಕ್ಷಿಣದಲ್ಲಿ ಪಕ್ಷ ಬಲವರ್ಧನೆಗೆ ಬ್ಲ್ಯೂ ಪ್ರಿಂಟ್ ಯನ್ನ ಬಿಜೆಪಿ ಹೈಕಮಾಂಡ್ ನಾಯಕರು ರೆಡಿ ಮಾಡಿಕೊಂಡಿದ್ದಾರೆ.
ಈಗಾಗಲೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಕಾಂಗ್ರೆಸ್ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಗ್ಯಾರಂಟಿಗಳನ್ನ ನೀಡಿದ್ದು, ಇದೀಗ ಯಶಸ್ವಿಯಾಗಿದೆ. ಹೀಗಾಗಿ ಬಿಜೆಪಿಯೂ ಸಹ ಕಾಂಗ್ರೆಸ್ ನಂತೆ ಮಹಿಳೆಯಗಾಗಿ ಹೆಚ್ಚಿನ ಟಾರ್ಗೆಟ್ ಮಾಡಿ ಗ್ಯಾರಂಟಿಗಳನ್ನ ನೀಡುವ ಮೂಲಕ ದಕ್ಷಿಣ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದಲ್ಲಿ ತಮ್ಮ ವರ್ಚಸ್ಸನ್ನ ಹೆಚ್ಚಿಸಿಕೊಳ್ಳುವ ತಂತ್ರಗಾರಿಕೆಯನ್ನ ಬಿಜೆಪಿ ಹೈಕಮಾಂಡ್ ನಾಯಕರು ಹೆಣೆದಿದ್ದಾರೆ ಎನ್ನಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications