BJP: ಬಿಜೆಪಿ ಆಡಳಿತ ರಾಜ್ಯಗಳ ಏಕೈಕ ಮಹಿಳಾ ಸಿ.ಎಂ, ಆಯ್ಕೆಯ ಲೆಕ್ಕಾಚಾರವೇನು ?!
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ (50) ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಮಹಿಳಾ ಶಾಸಕಿಗೆ ಮಣೆ ಹಾಕಿದ್ದು. ಬಿಜೆಪಿ ಹೈಕಮಾಂಡ್ನ ಲೆಕ್ಕಾಚಾರ ಹಲವು ಕಾರಣಗಳಿಗೆ ಅಚ್ಚರಿ ಮೂಡಿಸಿದೆ. ಇನ್ನು ಇದೀಗ ದೆಹಲಿಯಲ್ಲಿ ರೇಖಾ ಗುಪ್ತಾ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಮೂಲಕ ದೇಶದಲ್ಲಿ ಇಬ್ಬರು ಮಹಿಳಾ ಮುಖ್ಯಮಂತ್ರಿಗಳು ಆಡಳಿತ ನಡೆಸುವಂತೆ ಆಗಿದೆ. ಹೌದು ಇಲ್ಲಿಯ ವರೆಗೆ ದೇಶದಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿ ಪಶ್ಚಿಮ ಬಂಗಾಳದಲ್ಲಿ ಇದ್ದರು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಹೊಸ ರಾಜಕೀಯ ಚೆಕ್ಮೆಟ್ ಇರಿಸಿದೆ. ಅದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ದೆಹಲಿಯಲ್ಲಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರು ಸಿಎಂ ಆಗಿದ್ದಾರೆ. ಮಹಿಳಾ ಸಿಎಂ ಆಯ್ಕೆಯ ಹಿಂದೆ ಹಲವು ಲೆಕ್ಕಾಚಾರಗಳು ಇವೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ರೇಖಾ ಗುಪ್ತಾ ಅವರು ಮಹಿಳಾ ಮುಖ್ಯಮಂತ್ರಿಯಾಗಿದ್ದು. ಇದು ಬಿಜೆಪಿಯ ಹೊಸ ಲೆಕ್ಕಾಚಾರ ಎಂದೇ ಹೇಳಲಾಗುತ್ತಿದೆ. ಅಲ್ಲದೆ ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿಗಳಿಗೆ ದೊಡ್ಡ ಇತಿಹಾಸವೇ ಇದೆ.

27 ವರ್ಷಗಳ ನಂತರ ಇಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯು ಮುಂದಿನ ದಿನಗಳಲ್ಲಿ ಇಲ್ಲಿ ಉತ್ತಮ ಆಡಳಿತವನ್ನು ನೀಡುವ ಮೂಲಕ ದೆಹಲಿಯನ್ನು ಭದ್ರಕೋಟೆ ಮಾಡಿಕೊಳ್ಳುವ ಲೆಕ್ಕಾಚಾರವೂ ಇದೆ ಎನ್ನಲಾಗುತ್ತಿದೆ. ಅಲ್ಲದೆ ಮುಂದಿನ ಎರಡು ವರ್ಷದಲ್ಲಿ ಬಿಹಾರ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಸೇರಿದಂತೆ ಹಲವು ಪ್ರಮುಖ ರಾಜ್ಯಗಳ ಚುನಾವಣೆ ಎದುರಾಗಲಿದೆ. ಬಿಜೆಪಿ ಇದೀಗ ಮಹಿಳಾ ಮತದಾರರನ್ನು ಸೆಳೆಯುವುದಕ್ಕೆ ಹೊಸ ಹೆಜ್ಜೆಯನ್ನು ಇರಿಸಿದೆ.
ಹಲವು ರಾಜ್ಯಗಳ ಚುನಾವಣೆಯಲ್ಲಿ ಮಹಿಳಾ ಮತದಾರರ ಮತ ಸಹ ನಿರ್ಣಾಯಕ ಪಾತ್ರ ವಹಿಸಿದೆ. ಇದೇ ಕಾರಣಕ್ಕೆ ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ಸೆಳೆಯುವುದಕ್ಕೆ ವಿಶೇಷ ಯೋಜನೆಗಳನ್ನು ಪರಿಚಯಿಸಿವೆ. ಆ ಯೋಜನೆಗಳು ಸಕ್ಸಸ್ ಸಹ ಆಗಿವೆ.
ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿ ಇತಿಹಾಸ!
ದೆಹಲಿಯಲ್ಲಿ ಮಹಿಳಾ ಮುಖ್ಯಮಂತ್ರಿಗಳ ವಿಷಯದಲ್ಲಿ ದೊಡ್ಡ ಇತಿಹಾಸವೇ ಇದೆ. ರೇಖಾ ಗುಪ್ತಾ ಅವರು ನಾಲ್ಕನೇ ದೆಹಲಿ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ದೆಹಲಿಯಲ್ಲಿ ಮೊದಲ ಬಾರಿ ಬಿಜೆಪಿಯ ದಿ. ಸುಷ್ಮಾ ಸ್ವರಾಜ್ ಅವರು ಮಹಿಳಾ ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್ನ ಶೀಲಾ ದೀಕ್ಷಿತ್ ಹಾಗೂ ಆಮ್ ಆದ್ಮಿ ಪಾರ್ಟಿಯ ಅತಿಶಿ ಅವರು ಸಹ ಮಹಿಳಾ ಮುಖ್ಯಮಂತ್ರಿಯಾಗಿದ್ದರು.

ರೇಖಾ ಗುಪ್ತಾ ಅವರ ಆಯ್ಕೆಯ ಹಿನ್ನೆಲೆ: ರೇಖಾ ಗುಪ್ತಾ ಅವರ ಆಯ್ಕೆಗೆ ಹಲವು ಕಾರಣಗಳಿವೆ. ರೇಖಾ ಗುಪ್ತಾ ಅವರು ವೃತ್ತಿಯಲ್ಲಿ ವಕೀಲೆಯಾಗಿದ್ದು. 30 ವರ್ಷಗಳಿಂದ ಬಿಜೆಪಿಯಲ್ಲಿ ವಿವಿಧ ಹುದ್ದೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಈ ಸುದೀರ್ಘ ಅವಧಿಯ ರಾಜಕೀಯದಲ್ಲಿ ಅವರು ಯಾವುದೇ ವಿವಾದಕ್ಕೆ ಸಿಲುಕಿಲ್ಲ. ಬಿಜೆಪಿ ಮಹಿಳೆಯರಿಗೆ ಪ್ರಾಧಾನ್ಯತೆ ಕೊಡುತ್ತಿದೆ ಎಂದು ತೋರಿಸುವ ಲೆಕ್ಕಾಚಾರವೂ ಇದರ ಹಿಂದೆ ಇದೆ ಎಂದು ಹೇಳಲಾಗುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications