K. Annamalai: ರಾಜ್ಯಸಭೆಗೆ ಕೆ. ಅಣ್ಣಾಮಲೈ, ಮೋದಿ ಸಂಪುಟದಲ್ಲಿ ಸಚಿವ ಸ್ಥಾನ?
ಚೆನ್ನೈ, ಏಪ್ರಿಲ್ 23: 2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಡಿಎಂಕೆ ಸೋಲಿಸಲು ಬಿಜೆಪಿ ಹಾಗೂ ಎಐಎಡಿಎಂಕೆ ಮತ್ತೆ ಮೈತ್ರಿಮಾಡಿಕೊಂಡಿವೆ. ಬಿಜೆಪಿ ಅಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಅವರನ್ನು ಬದಲಾವಣೆ ಮಾಡಲಾಗಿದ್ದು, ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅಧಿಕಾರವಹಿಸಿಕೊಂಡಿದ್ದಾರೆ. ಕೆ. ಅಣ್ಣಾಮಲೈಗೆ ಪಕ್ಷ ಯಾವ ಅಧಿಕಾರ ನೀಡಲಿದೆ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಕೆ. ಅಣ್ಣಾಮಲೈಗೆ ರಾಷ್ಟ್ರಮಟ್ಟದ ಹುದ್ದೆಯನ್ನು ನೀಡಲಾಗುತ್ತದೆ ಎಂಬ ವರದಿಗಳ ನಡುವೆಯೇ ಅವರು ರಾಜ್ಯಸಭೆ ಚುನಾವಣೆಗೆ ಆಂಧ್ರ ಪ್ರದೇಶದಿಂದ ಸ್ಪರ್ಧೆ ಮಾಡಲಿದ್ದಾರೆ? ಎಂಬ ಸುದ್ದಿಗಳು ಹಬ್ಬಿದೆ. ಆಂಧ್ರ ಪ್ರದೇಶದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 29 ಕೊನೆಯ ದಿನವಾಗಿದೆ.

ಎನ್ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಟಿಡಿಪಿ-ಜನಸೇನಾ ಒಂದು ಸ್ಥಾನವನ್ನು ಬಿಜೆಪಿಗೆ ನೀಡಿವೆ. ಈ ಒಂದು ಟಿಕೆಟ್ಗಾಗಿ ಕೆ. ಅಣ್ಣಾಮಲೈ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಹೆಸರು ಕೇಳಿ ಬರುತ್ತಿದೆ. ಕೆ. ಅಣ್ಣಾಮಲೈ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.
ರಾಜ್ಯಸಭಾ ಸದಸ್ಯರಾಗಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿಜಯಸಾಯಿ ರೆಡ್ಡಿ ಜನವರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವದ ಅವಧಿ 2028ರ ತನಕ ಇದೆ. ಆದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ. ಈ ಸೀಟನ್ನು ಆಂಧ್ರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಟಿಡಿಪಿ-ಜನಸೇನಾ ಪಕ್ಷ ಬಿಜೆಪಿಗೆ ಬಿಟ್ಟುಕೊಡಲಿವೆ.
ವೈಎಸ್ಆರ್ ಕಾಂಗ್ರೆಸ್ನ ಇಬ್ಬರು ಸದಸ್ಯರು ಈ ಹಿಂದೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಆಂಧ್ರ ಪ್ರದೇಶ ರಾಜ್ಯದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ ಟಿಡಿಪಿ ಸರಳ ಬಹುಮತ ಹೊಂದಿದೆ. ಆದ್ದರಿಂದ ಎರಡು ಸೀಟುಗಳನ್ನು ಪಕ್ಷ ನಿರಾಯಾಸವಾಗಿ ಗೆಲ್ಲಲಿದೆ.
ಅಮೇಥಿಯಲ್ಲಿ ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೋಲಿಸಿದ್ದ ಸ್ಮೃತಿ ಇರಾನಿ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ಅವರು ದೆಹಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಈಗ ಸ್ಮೃತಿ ಇರಾನಿ ಆಂಧ್ರ ಪ್ರದೇಶದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತಮಿಳುನಾಡಿನ ಪ್ರಭಾವಿ ನಾಯಕ. ರಾಜ್ಯದಲ್ಲಿ ಬಿಜೆಪಿಯ ಸಂಘಟನೆಯಲ್ಲಿ ಸಕ್ರಿಯವಾಗಿದ್ದಾರೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದಾರೆ. ಈಗ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯ ಕಾರಣ ಅಣ್ಣಾಮಲೈ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದು, ಅವರಿಗೆ ಬೇರೆ ಸ್ಥಾನ ನೀಡಲು ಪಕ್ಷ ಚಿಂತನೆ ನಡೆಸಿದೆ.
2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅರಾವಕುರಿಚಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. 68,000ಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಅವರು ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಸಹ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.
ರಾಜ್ಯದಲ್ಲಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ಹಲವು ಹೋರಾಟಗಳನ್ನು ನಡೆಸಿದ್ದಾರೆ. ಆದರೆ ಈಗ ಬಿಜೆಪಿ ಹಾಗೂ ಎಐಎಡಿಎಂಕೆ ಮತ್ತೆ ಮೈತ್ರಿಯ ಕಾರಣ ಎಐಎಡಿಎಂಕೆ ಪಕ್ಷದ ಬೇಡಿಕೆಯಂತೆ ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications