Get Updates
Get notified of breaking news, exclusive insights, and must-see stories!

K. Annamalai: ರಾಜ್ಯಸಭೆಗೆ ಕೆ. ಅಣ್ಣಾಮಲೈ, ಮೋದಿ ಸಂಪುಟದಲ್ಲಿ ಸಚಿವ ಸ್ಥಾನ?

ಚೆನ್ನೈ, ಏಪ್ರಿಲ್ 23: 2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಡಿಎಂಕೆ ಸೋಲಿಸಲು ಬಿಜೆಪಿ ಹಾಗೂ ಎಐಎಡಿಎಂಕೆ ಮತ್ತೆ ಮೈತ್ರಿಮಾಡಿಕೊಂಡಿವೆ. ಬಿಜೆಪಿ ಅಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಅವರನ್ನು ಬದಲಾವಣೆ ಮಾಡಲಾಗಿದ್ದು, ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅಧಿಕಾರವಹಿಸಿಕೊಂಡಿದ್ದಾರೆ. ಕೆ. ಅಣ್ಣಾಮಲೈಗೆ ಪಕ್ಷ ಯಾವ ಅಧಿಕಾರ ನೀಡಲಿದೆ? ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಕೆ. ಅಣ್ಣಾಮಲೈಗೆ ರಾಷ್ಟ್ರಮಟ್ಟದ ಹುದ್ದೆಯನ್ನು ನೀಡಲಾಗುತ್ತದೆ ಎಂಬ ವರದಿಗಳ ನಡುವೆಯೇ ಅವರು ರಾಜ್ಯಸಭೆ ಚುನಾವಣೆಗೆ ಆಂಧ್ರ ಪ್ರದೇಶದಿಂದ ಸ್ಪರ್ಧೆ ಮಾಡಲಿದ್ದಾರೆ? ಎಂಬ ಸುದ್ದಿಗಳು ಹಬ್ಬಿದೆ. ಆಂಧ್ರ ಪ್ರದೇಶದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 29 ಕೊನೆಯ ದಿನವಾಗಿದೆ.

BJP May Nominate K Annamalai For Rajya Sabha By Election

ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಟಿಡಿಪಿ-ಜನಸೇನಾ ಒಂದು ಸ್ಥಾನವನ್ನು ಬಿಜೆಪಿಗೆ ನೀಡಿವೆ. ಈ ಒಂದು ಟಿಕೆಟ್‌ಗಾಗಿ ಕೆ. ಅಣ್ಣಾಮಲೈ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಹೆಸರು ಕೇಳಿ ಬರುತ್ತಿದೆ. ಕೆ. ಅಣ್ಣಾಮಲೈ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

ರಾಜ್ಯಸಭಾ ಸದಸ್ಯರಾಗಿದ್ದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿಜಯಸಾಯಿ ರೆಡ್ಡಿ ಜನವರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವದ ಅವಧಿ 2028ರ ತನಕ ಇದೆ. ಆದ್ದರಿಂದ ಈಗ ಉಪ ಚುನಾವಣೆ ನಡೆಯುತ್ತಿದೆ. ಈ ಸೀಟನ್ನು ಆಂಧ್ರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಟಿಡಿಪಿ-ಜನಸೇನಾ ಪಕ್ಷ ಬಿಜೆಪಿಗೆ ಬಿಟ್ಟುಕೊಡಲಿವೆ.

ವೈಎಸ್‌ಆರ್ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಈ ಹಿಂದೆ ರಾಜೀನಾಮೆ ನೀಡಿದ್ದರು. ಆದ್ದರಿಂದ ಆಂಧ್ರ ಪ್ರದೇಶ ರಾಜ್ಯದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ ತಿಂಗಳಿನಲ್ಲಿ ಉಪ ಚುನಾವಣೆ ನಡೆಯಲಿದೆ. ವಿಧಾನಸಭೆಯಲ್ಲಿ ಟಿಡಿಪಿ ಸರಳ ಬಹುಮತ ಹೊಂದಿದೆ. ಆದ್ದರಿಂದ ಎರಡು ಸೀಟುಗಳನ್ನು ಪಕ್ಷ ನಿರಾಯಾಸವಾಗಿ ಗೆಲ್ಲಲಿದೆ.

ಅಮೇಥಿಯಲ್ಲಿ ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೋಲಿಸಿದ್ದ ಸ್ಮೃತಿ ಇರಾನಿ 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದಾರೆ. ಅವರು ದೆಹಲಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಈಗ ಸ್ಮೃತಿ ಇರಾನಿ ಆಂಧ್ರ ಪ್ರದೇಶದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ತಮಿಳುನಾಡಿನ ಪ್ರಭಾವಿ ನಾಯಕ. ರಾಜ್ಯದಲ್ಲಿ ಬಿಜೆಪಿಯ ಸಂಘಟನೆಯಲ್ಲಿ ಸಕ್ರಿಯವಾಗಿದ್ದಾರೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದಾರೆ. ಈಗ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯ ಕಾರಣ ಅಣ್ಣಾಮಲೈ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡಿದ್ದು, ಅವರಿಗೆ ಬೇರೆ ಸ್ಥಾನ ನೀಡಲು ಪಕ್ಷ ಚಿಂತನೆ ನಡೆಸಿದೆ.

2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅರಾವಕುರಿಚಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. 68,000ಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಅವರು ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಸಹ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿತ್ತು.

ರಾಜ್ಯದಲ್ಲಿ ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ಹಲವು ಹೋರಾಟಗಳನ್ನು ನಡೆಸಿದ್ದಾರೆ. ಆದರೆ ಈಗ ಬಿಜೆಪಿ ಹಾಗೂ ಎಐಎಡಿಎಂಕೆ ಮತ್ತೆ ಮೈತ್ರಿಯ ಕಾರಣ ಎಐಎಡಿಎಂಕೆ ಪಕ್ಷದ ಬೇಡಿಕೆಯಂತೆ ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+