ನಿತೀಶ್ ಗಡ್ಕರಿ ಸವಾಲು ಸ್ವೀಕರಿಸಿ ಕ್ಷೇತ್ರಕ್ಕಾಗಿ 32 ಕೆಜಿ ತೂಕ ಇಳಿಸಿದ ಸಂಸದ!
ಭೋಪಾಲ್, ಅ.18: 'ಒಂದು ಕೆಜಿ ತೂಕ ಇಳಿಸಿದರೆ ಕ್ಷೇತ್ರದ ಅಭಿವೃದ್ಧಿಗೆ 1000 ಕೋಟಿ ರೂಪಾಯಿ ನೀಡುವ ನಿತಿನ್ ಗಡ್ಕರಿ ಅವರ ತೂಕ ಇಳಿಸುವ ಸವಾಲನ್ನು ಸ್ವೀಕರಿಸಿದ್ದ ಮಧ್ಯಪ್ರದೇಶದ ಉಜ್ಜಯಿನಿ ಸಂಸದ ಅನಿಲ್ ಫಿರೋಜಿಯಾ 32 ಕೆಜಿ ಇಳಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿ ಕೆಜಿ ತೂಕ ಇಳಿಕೆಗೆ 1000 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದರು. ಇದನ್ನು ಸವಾಲಾಗಿ ಸ್ವೀಕರಿಸಿದ್ದ ಸಂಸದ ಅನಿಲ್ ಫಿರೋಜಿಯಾ ಅವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿಗಾಗಿ ಸುಮಾರು 32 ಕೆಜಿ ತೂಕವನ್ನು ಇಳಿಸಿದ್ದಾರೆ.
"ನಾನು ಸವಾಲನ್ನು ಸ್ವೀಕರಿಸಿದ್ದೇನೆ. ಹೀಗಾಗಿ ನಾನು ಸುಮಾರು 32 ಕೆಜಿ ತೂಕವನ್ನು ಕಳೆದುಕೊಂಡಿದ್ದೇನೆ" ಎಂದು ಅನಿಲ್ ಫಿರೋಜಿಯಾ ಹೇಳಿದ್ದಾರೆ.

ಕಳೆದ ಜೂನ್ನಲ್ಲಿ ಕೇಂದ್ರ ಸಚಿವ ಗಡ್ಕರಿ ಅವರು ಪ್ರತಿ ಒಂದು ಕೆಜಿ ತೂಕ ಇಳಿಸಿದರೆ ಅಭಿವೃದ್ಧಿ ಕಾರ್ಯಕ್ಕೆ ₹ 1000 ಕೋಟಿ ನೀಡುವುದಾಗಿ ಬೃಹತ್ ವೇದಿಕೆಯಲ್ಲಿ ಸಂಸದರಿಗೆ ಭರವಸೆ ನೀಡಿದ್ದರು.
ಆಗ ಜೂನ್ನಲ್ಲಿ ಮಾತನಾಡಿದ್ದ ಸಂಸದ ಅನಿಲ್ ಫಿರೋಜಿಯಾ, "ಪ್ರಧಾನಿ ನರೇಂದ್ರ ಮೋದಿ ಅವರು 'ಫಿಟ್ ಇಂಡಿಯಾ' ಆಂದೋಲನವನ್ನು ಪ್ರಾರಂಭಿಸಿದ್ದಾರೆ. ನಾನು ಇಳಿಸುವ ಪ್ರತಿ ಕೆಜಿ ತೂಕಕ್ಕೆ ಉಜ್ಜಯಿನಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ₹ 1,000 ಕೋಟಿ ನೀಡುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವೇದಿಕೆಯ ಮೇಲೆ ನನಗೆ ಹೇಳಿದ್ದಾರೆ. ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದೇನೆ. ಇಲ್ಲಿಯವರೆಗೆ 15 ಕೆಜಿ ತೂಕವನ್ನು ಕಳೆದುಕೊಂಡಿದ್ದೇನೆ, ನಾನು ಅದನ್ನು ಇನ್ನೂ ಕಡಿಮೆ ಮಾಡುತ್ತೇನೆ. ನನಗೆ ಭರವಸೆ ನೀಡಿದಂತೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇನೆ" ಎಂದಿದ್ದರು.
ಈಗ ಸಂಸದ 32 ಕೆಜಿ ತೂಕ ಇಳಿಸಿಕೊಂಡಿದ್ದು, 'ತೂಕ ಕಳೆದುಕೊಂಡರೆ ಉಜ್ಜಯಿನಿ ಕ್ಷೇತ್ರಕ್ಕೆ ಹೆಚ್ಚಿನ ಬಜೆಟ್ ಮೀಸಲಿಡುವುದಾದರೇ, ಕ್ಷೇತ್ರದ ಅಭಿವೃದ್ಧಿಗೆ ನನ್ನ ಫಿಟ್ನೆಸ್ ಆಡಳಿತ ಮುಂದುವರಿಸಲು ಸಿದ್ಧ' ಎಂದಿದ್ದಾರೆ.

ಜೊತೆಗೆ ತಾವು ತೂಕ ಇಳಿಸಲು ಕಟ್ಟುನಿಟ್ಟಾದ ಡಯಟ್ ಚಾರ್ಟ್ ಅನ್ನು ಅನುಸರಿಸುತ್ತೇನೆ ಎಂದು ಬಿಜೆಪಿ ಸಂಸದರು ಹೇಳಿದ್ದಾರೆ.
ಫಿರೋಜಿಯಾ ಅವರು ತಮ್ಮ ಫಿಟ್ನೆಸ್ ಆಡಳಿತವನ್ನು ವಿವರಿಸುತ್ತಾ, "ನಾನು ಬೆಳಗ್ಗೆ 5.30 ಕ್ಕೆ ಎದ್ದು, ವಾಕಿಂಗ್ ಹೋಗುತ್ತೇನೆ. ಬೆಳಗ್ಗೆ ಓಟ, ವ್ಯಾಯಾಮ ಮತ್ತು ಯೋಗ ಮಾಡುತ್ತೇನೆ. ನಾನು ಆಯುರ್ವೇದ ಡಯಟ್ ಚಾರ್ಟ್ ಅನ್ನು ಅನುಸರಿಸುತ್ತೇನೆ. ಲಘು ಉಪಹಾರವನ್ನು ತೆಗೆದುಕೊಳ್ಳುತ್ತೇನೆ. ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ಸಲಾಡ್, ಒಂದು ಬೌಲ್ ಹಸಿರು ತರಕಾರಿಗಳು ಮತ್ತು ಒಂದು ರೊಟ್ಟಿಯನ್ನು ತೆಗೆದುಕೊಳ್ಳುತ್ತೇನೆ. ಕೆಲವೊಮ್ಮೆ ನಾನು ಕ್ಯಾರೆಟ್ ಸೂಪ್ ಅಥವಾ ಒಣ ಹಣ್ಣುಗಳನ್ನು ತೆಗೆದುಕೊಳ್ಳುತ್ತೇನೆ" ಎಂದಿದ್ದಾರೆ.
ಸೋಮವಾರ ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಿರುವ ಅವರು, "ನಾನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ 32 ಕೆಜಿ ತೂಕ ಇಳಿಸಿಕೊಂಡ ಬಗ್ಗೆ ತಿಳಿಸಿದ್ದೇನೆ. ಅದರ ಬಗ್ಗೆ ತಿಳಿದು ಅವರು ತುಂಬಾ ಸಂತೋಷಪಟ್ಟರು. ಭರವಸೆ ನೀಡಿದಂತೆ, ಅವರು ಈ ಪ್ರದೇಶಕ್ಕೆ 2,300 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಅನುಮೋದಿಸಿದ್ದಾರೆ" ಎಂದು ಅನಿಲ್ ಫಿರೋಜಿಯಾ ಹೇಳಿದ್ದಾರೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications