ಹೇಮಾಮಾಲಿನಿ ದಿನಾ ಕುಡೀತಾರೆ, ಹಾಗಂತ... : ವಿವಾದಾತ್ಮಕ ಹೇಳಿಕೆ
ರೈತರ ಆತ್ಮಹತ್ಯೆಯ ಬಗ್ಗೆ ಮಾತನಾಡುತ್ತಿದ್ದ ಮಹಾರಾಷ್ಟ್ರದ ಪಕ್ಷೇತರ ಶಾಸಕ ಬಚ್ಚು ಕಡು ಹೇಮಾ ಮಾಲಿನಿಯವರ ಹೆಸರನ್ನು ವಿವಾದಕ್ಕೆಳೆದು ತಂದಿರುವುದು ಚರ್ಚೆಗೆ ಗ್ರಾಸವಾಗಿದೆ.
ನಾಂದೇಡ್ , ಏಪ್ರಿಲ್ 14: ರೈತರ ಆತ್ಮಹತ್ಯೆಗೆ ಕುಡಿತವೇ ಕಾರಣ ಎನ್ನುವುದಾದರೆ, ಹೇಮಾ ಮಾಲಿನಿ ದಿನಾ ಕುಡಿಯುತ್ತಾರೆ, ಅವರೇನು ಆತ್ಮಹತ್ಯೆ ಮಾಡಿಕೊಂಡಿದ್ದಾರಾ..? ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಮಹಾರಾಷ್ಟ್ರದ ಶಾಸಕರೊಬ್ಬರು ಇದೀಗ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ!
ಮಹಾರಾಷ್ಟ್ರದ ಅಚಲ್ ಪುರ ಕ್ಷೇತ್ರದ ಪಕ್ಷೇತರ ಶಾಸಕ ಓಂ ಪ್ರಕಾಶ್ ಬಾಬಾರಾವ್ ಕಡು (ಬಚ್ಚು ಕಡು) ಎಂಬುವವರು ನಾಂದೇಡ್ ನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಸಮಯದಲ್ಲಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚಿರುವ ರೈತರ ಆತ್ಮಹತ್ಯೆ ಸಮಸ್ಯೆಯ ಬಗ್ಗೆ ಮಾತನಾಡುತ್ತಿದ್ದ ಅವರು, ರೈತರ ಆತ್ಮಹತ್ಯೆಗೆ ಕುಡಿತವೂ ಕಾರಣವಲ್ಲ, ಸಾಲವೂ ಕಾರಣವಲ್ಲ ಎಂದಿದ್ದಾರೆ.[ಸಾವಿನ ಮನೆಯಲ್ಲೂ ಲಂಚಾವತಾರ, ಇದೆಂಥ ವಿಪರ್ಯಾಸ!]

"ಕುಡಿತ ಕಾರಣವಾಗಿದ್ದರೆ ಹೇಮಾ ಮಾಲಿನಿ ಸಹ ದಿನಾ ಕುಡಿಯುತ್ತಾರೆ, ಹಾಗಾದರೆ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ?, ರೈತರ ಆತ್ಮಹತ್ಯೆಗೆ ಅವರ ಅತಿಯಾದ ಖರ್ಚು ವೆಚ್ಚವೇ ಕಾರಣ ಎಂದಾದರೆ, ನಿತಿನ್ ಗಡ್ಕರಿ ತಮ್ಮ ಮಗನ ಮದುವೆಗೆಂದು 4 ಕೋಟಿ ಹಣ ವೆಚ್ಚ ಮಾಡಿದ್ದಾರೆ, ಅವರೇನು ಆತ್ಮಹತ್ಯೆ ಮಾಡಿಕೊಂಡಿದ್ದಾರಾ?" ಎಂದು ಸಹ ಪ್ರಶ್ನಿಸಿದ್ದಾರೆ.[ವಿಜಯಪುರದಲ್ಲಿ ಸಾಲಬಾಧೆಗೆ ರೈತ ಆತ್ಮಹತ್ಯೆ]
"ಬೆಳೆಗಳ ಉತ್ಪಾದನೆ ಹೆಚ್ಚಾದರೂ ಅವರ ಆದಾಯ ಮಾತ್ರ ಹೆಚ್ಚುತ್ತಿಲ್ಲ. ಇದೇ ರೈತರ ಆತ್ಮಹತ್ಯೆಗೆ ಮುಖ್ಯ ಕಾರಣ. ಬೇರೆ ಯಾವ ಕಾರಣವೂ ಅಲ್ಲ" ಎಂದು ಕಡು ಹೇಳಿದ್ದಾರೆ.
ಒಟ್ಟಿನಲ್ಲಿ ಕನಸಿನ ಕನ್ಯೆ, ಬಿಜೆಪಿ ಸಂಸದೆ ಹೇಮಾ ಮಾಲಿನಿಯವರನ್ನು ಸುಖಾಸುಮ್ಮನೆ ವಿವಾದಕ್ಕೆಳೆದು ತಂದಿರುವ ಕಡು ಬಗ್ಗೆ ಹೇಮಾ ಮಾಲಿನಿ ಅವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರ್ಷದ ಹಿಂದೆ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್, "ಬಿಹಾರದಲ್ಲಿ ಹೇಮಾ ಮಾಲಿನಿಯ ಕೆನ್ನೆಯಷ್ಟೇ ಮೃದುವಾದ ರಸ್ತೆ ಮಾಡುತ್ತೇವೆಂದು" ಹೇಳಿ ವಿವಾದ ಸೃಷ್ಟಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications