ಹಸುಗಳನ್ನು ಕಟುಕರಿಗೆ ಮಾರುವ 'ಇಸ್ಕಾನ್' ಭಾರತದ ಅತಿ ದೊಡ್ಡ ವಂಚಕ ಸಂಸ್ಥೆ: ಕಲ್ಲೋಲ ಸೃಷ್ಟಿಸಿದ ಮನೇಕಾ ಗಾಂಧಿ ಹೇಳಿಕೆ
ನವದೆಹಲಿ, ಸೆಪ್ಟೆಂಬರ್ 27: ಇಂಟರ್ನ್ಯಾಶನಲ್ ಸೊಸೈಟಿ ಫಾರ್ ಕೃಷ್ಣ ಕನ್ಸಿಯಸ್ನೆಸ್ (ಇಸ್ಕಾನ್) ದೇಶದ ಅತಿ ದೊಡ್ಡ ವಂಚಕ ಸಂಸ್ಥೆಯಾಗಿದೆ. ಇದು ಗೋವುಗಳನ್ನು ಕಟುಕರಿಗೆ ಮಾರುತ್ತದೆ ಎಂದು ಬಿಜೆಪಿ ನಾಯಕಿ, ಸಂಸದೆ ಮನೇಕಾ ಗಾಂಧಿ ಹೇಳಿಕೆ ನೀಡಿದ್ದಾರೆ. ಜಗತ್ತಿನಾದ್ಯಂತ ಲಕ್ಷಾಂತರ ಭಕ್ತರನ್ನು ಹೊಂದಿರುವ ಇಸ್ಕಾನ್ ಬಗೆಗಿನ ಈ ಹೇಳಿಕೆಯು ಕಲ್ಲೋಲವನ್ನೇ ಸೃಷ್ಟಿ ಮಾಡಿದೆ.
ಇಸ್ಕಾನ್ ಸಂಸ್ಥೆಯು ತನ್ನ ಗೋಶಾಲೆಗಳಿಂದ ಹಸುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಈ ಸಂದರ್ಶನದ ವಿಡಿಯೊ ಇದೀಗ ವೈರಲ್ ಆಗಿದ್ದು, ಪರ-ವಿರೋಧದ ಚರ್ಚೆಗಳಿಗೆ ಕಾರಣವಾಗಿದೆ.

'ಇಸ್ಕಾನ್ ಎನ್ನುವುದು ದೇಶದ ಅತಿದೊಡ್ಡ ವಂಚಕ ಸಂಸ್ಥೆಯಾಗಿದೆ. ಈ ಸಂಸ್ಥೆ ಗೋಶಾಲೆಗಳನ್ನು ನಡೆಸುತ್ತಿದೆ. ಈ ಕಾರಣಕ್ಕಾಗಿ ಸರ್ಕಾರದಿಂದ ಎಲ್ಲಾ ರೀತಿಯ ಸವಲತ್ತುಗಳನ್ನು ಪಡೆಯುತ್ತದೆ. ಜಮೀನುಗಳು ಮತ್ತು ಎಲ್ಲ ಸವಲತ್ತುಗಳು ಈ ಸಂಸ್ಥೆಗೆ ಸರ್ಕಾರ ಒದಗಿಸುತ್ತದೆ' ಎಂದು ಸಂದರ್ಶನವೊಂದರಲ್ಲಿ ಮನೇಕಾ ಗಾಂಧಿ ಹೇಳಿದ್ದಾರೆ.
ಆಂಧ್ರಪ್ರದೇಶದ ಅನಂತಪುರದಲ್ಲಿರುವ ಇಸ್ಕಾನ್ ಗೋಶಾಲೆಗೆ ಭೇಟಿ ನೀಡಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ಅಲ್ಲಿ ಒಂದೇ ಒಂದು ಗೊಡ್ಡು ಹಸು ಇರಲಿಲ್ಲ. ಒಂದು ಕರು ಸಹ ಇರಲಿಲ್ಲ. ಅಲ್ಲಿದ್ದ ಹಸುಗಳೆಲ್ಲವೂ ಹಾಲು ನೀಡುವ ಹಸುಗಳಾಗಿದ್ದವು. ಇದರಲ್ಲಿ ವಂಚನೆ ಇದೆ ಎಂಬುದು ನನಗೆ ಅರ್ಥವಾಯಿತು ಎಂದು ಮನೇಕಾ ಗಾಂಧಿ ಹೇಳಿದ್ದಾರೆ.
'ಇಸ್ಕಾನ್ ತನ್ನ ಎಲ್ಲಾ ಹಸುಗಳನ್ನು ಕಟುಕರಿಗೆ ಮಾರುತ್ತಿದೆ. ಅವರು ಮಾರುವಷ್ಟು ಹಸುಗಳನ್ನು ಬೇರೆ ಯಾರೂ ಮಾರುವುದಿಲ್ಲ. ಅವರು ' ಹರೇ ರಾಮ್, ಹರೇ ಕೃಷ್ಣ ' ಎಂದು ಜಪಿಸುತ್ತಾ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಅವರು ಕಟುಕರಿಗೆ ಮಾರಾಟ ಮಾಡಿದ ಹಸುಗಳ ಸಂಖ್ಯೆಯಷ್ಟು ಬಹುಶಃ ಬೇರೆ ಯಾರೂ ಮಾರಿಲ್ಲ' ಎಂದು ಅವರು ಆರೋಪಿಸಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇಸ್ಕಾನ್ ವಕ್ತಾರ ಯುಧಿಷ್ಟಿರ ಗೋವಿಂದ ದಾಸ್ ಅವರು, 'ಮನೇಕಾ ಗಾಂಧಿ ಅವರ ಹೇಳಿಕೆ ಸುಳ್ಳುಗಳಿಂದ ಕೂಡಿದೆ' ಎಂದು ಹೇಳಿದ್ದಾರೆ.
ಪ್ರಾಣಿಗಳ ಹಕ್ಕುಗಳ ಹೋರಾಟಗಾರ್ತಿ ಎಂದು ಘೋಷಿಸಿಕೊಂಡಿರುವ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರ ಹೇಳಿಕೆಯಿಂದ ದಿಗ್ಭ್ರಮೆಯಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಮನೇಕಾ ಗಾಂಧಿ ಹೇಳಿಕೆಗೆ ಕೃಷ್ಣ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೇಕಾ ಗಾಂಧಿ ಅವರ ಆರೋಪದಲ್ಲಿ ನಿಜ ಇರಬಹುದು. ಈ ಕುರಿತು ತನಿಖೆಯಾಗಬೇಕು. ಇಸ್ಕಾನ್ ಪ್ರಾಮಾಣಿಕವಾಗಿದ್ದರೆ ಹೆದರುವ ಅವಶ್ಯಕತೆ ಇಲ್ಲವೆಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ವಾದಿಸಿದ್ದಾರೆ.

'ಹರೇ ಕೃಷ್ಣ' ಆಂದೋಲನ ಎಂದು ಕರೆಯಲ್ಪಡುವ ಇಸ್ಕಾನ್ ಪ್ರಪಂಚದಾದ್ಯಂತ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದೆ. ಇಸ್ಕಾನ್ನಲ್ಲಿ ಸನ್ಯಾಸಿಗಳಾಗಿ ಸೇರುವವರು ಶ್ರೀ ಕೃಷ್ಣನ ಭಕ್ತರಾಗುತ್ತಾರೆ. ಭಗವದ್ಗೀತೆಯ ಬೋಧನೆಗಳನ್ನು ಪ್ರಚಾರ ಮಾಡಲು ತಮ್ಮ ಜೀವನವನ್ನು ಮುಡಿಪಾಗಿ ಇಡುತ್ತಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications