ಗುಜರಾತ್ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಸಂಸದ, ಶಾಸಕರ ಜೊತೆಗೆ ಬಿಲ್ಕಿಸ್ ಬಾನೋ ಅತ್ಯಾಚಾರಿ!
ಅಹಮದಾಬಾದ್, ಮಾರ್ಚ್. 27: 2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಉತ್ತಮ ವರ್ನೆ ಆಧಾರದಲ್ಲಿ ಬಿಡುಗಡೆಗೊಂಡ 11 ಮಂದಿಯಲ್ಲಿ ಒಬ್ಬ ವ್ಯಕ್ತಿ ಗುಜರಾತ್ನಲ್ಲಿ ನಡೆದ ಅಧಿಕೃತ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ದಾಹೋಡ್ ಜಿಲ್ಲೆಯ ಕರ್ಮಾಡಿ ಗ್ರಾಮದಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಬಿಜೆಪಿ ಸಂಸದ ಮತ್ತು ಶಾಸಕರ ಜೊತೆ ವೇದಿಕೆ ಹಂಚಿಕೊಂಡಿರುವುದು ಕಂಡುಬಂದಿದೆ. ಇವರ ಬಿಡುಗಡೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ಪ್ರಕರಣದ ವಿಚಾರಣೆ ನಡೆಯಲಿದೆ. ಮನವಿಯನ್ನು ಆಲಿಸಲು ವಿಶೇಷ ಪೀಠವನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಮಾರ್ಚ್ 25 ರಂದು ದಾಹೋಡ್ ಜಿಲ್ಲೆಯ ಕರ್ಮಾಡಿ ಗ್ರಾಮದಲ್ಲಿ ನೀರು ಸರಬರಾಜು ಯೋಜನೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ವಿಡಿಯೋಗಳು ಮತ್ತು ಫೋಟೋಗಳು ಶೈಲೇಶ್ ಚಿಮನ್ಲಾಲ್ ಭಟ್ ಅವರು ದಾಹೋದ್ ಸಂಸದ ಜಸ್ವಂತ್ ಸಿನ್ ಭಭೋರ್ ಮತ್ತು ಅವರ ಸಹೋದರ, ಲಿಮ್ಖೇಡಾ ಶಾಸಕ ಸೈಲೇಶ್ ಭಭೋರ್ ಹಂಚಿಕೊಂಡಿದ್ದು, ಇದರಲ್ಲಿ ಅಪರಾಧಿಯೂ ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕರು ಮತ್ತು ಸಂಸದರೊಂದಿಗೆ ಫೋಟೊಗಳಿಗೆ ಪೋಸ್ ನೀಡಿದ್ದು, ಪೂಜೆಯಲ್ಲಿ ಪಾಲ್ಗೊಂಡಿದ್ದರು. ಚಿತ್ರಗಳು ಮತ್ತು ವಿಡಿಯೋಗಳನ್ನು ಟ್ವೀಟ್ ಮಾಡಿರುವ ಉಭಯ ನಾಯಕರು ಈ ಬಗ್ಗೆ ಎನ್ಡಿಟಿವಿಯ ಪ್ರಶ್ನಿಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿತ್ತು. ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. 2008 ರಲ್ಲಿ ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಂದ ಆರೋಪದಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಹತ್ಯೆಯಾದವರಲ್ಲಿ ಆಕೆಯ ಮೂರು ವರ್ಷದ ಕಂದಮಮ್ಮ ಕೂಡ ಇತ್ತು.
ಶೈಲೇಶ್ ಚಿಮನ್ಲಾಲ್ ಭಟ್, ದಾಹೋಡ್ ಸಂಸದ ಜಸ್ವಂತ್ ಸಿನ್ಹ್ ಭಭೋರ್ ಮತ್ತು ಲಿಮ್ಖೇಡಾ ಶಾಸಕ ಸೈಲೇಶ್ ಭಭೋರ್ ಅವರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸಬರಮತಿ ಎಕ್ಸ್ಪ್ರೆಸ್ನಲ್ಲಿ 59 "ಕರ ಸೇವಕರು" ಸಾವನ್ನಪ್ಪಿದ ನಂತರ ಗುಜರಾತ್ನಲ್ಲಿ ಹಿಂಸಾಚಾರ ನಡೆದಾಗ ಬಿಲ್ಕಿಸ್ ಬಾನೊ ಕುಟುಂಬದ ಮೇಲೆ ಈ ದೌರ್ಜನ್ಯ ನಡೆದಿತ್ತು.

ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸರಣಿ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿದಾರರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಸಿಪಿಎಂ ಪಾಲಿಟ್ಬ್ಯೂರೊ ಸದಸ್ಯೆ ಸುಭಾಷಿಣಿ ಅಲಿ ಮತ್ತು ಇತರರು ಸೇರಿದ್ದಾರೆ. ಬಿಲ್ಕಿಸ್ ಬಾನೋ ಅವರು ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅವುಗಳಲ್ಲಿ ಒಂದು ಮೇ 2022 ರ ಆದೇಶವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿ, ಅಪರಾಧಿಯ ಬಿಡುಗಡೆ ಮನವಿಯನ್ನು ಪರಿಗಣಿಸವಂತೆ ಗುಜರಾತ್ ಸರ್ಕಾರಕ್ಕೆ ನಿರ್ದೇಶಿಸಿತು. ಅದನ್ನು ನ್ಯಾಯಾಲಯ ವಜಾಗೊಳಿಸಿತ್ತು.
ನ್ಯಾಯಾಲಯದ ನಿರ್ದೇಶನ ಮತ್ತು ಅಪರಾಧಿಯ ಬಿಡುಗಡೆ ಅರ್ಜಿಗೆ ಪ್ರತಿಕ್ರಿಯೆಯಾಗಿ, ಗುಜರಾತ್ ಸರ್ಕಾರವು ಹಳತಾದ ನೀತಿಯ ಆಧಾರದ ಮೇಲೆ ಎಲ್ಲಾ ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಆಡಳಿತಾರೂಢ ಬಿಜೆಪಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳನ್ನು ಒಳಗೊಂಡ ಸಮಿತಿಯನ್ನು ಈ ಪ್ರಸ್ತಾವನೆ ಸಲ್ಲಿಸಿತ್ತು. ಸಮಾಲೋಚಿಸಿದೆ. ಈಗಾಗಲೇ 14 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿರುವ ಮತ್ತು ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ ಅಪರಾಧಿಗಳು "ಸಂಸ್ಕಾರವಿರುವ" ಬ್ರಾಹ್ಮಣರು ಎಂದು ಸಮಿತಿಯ ಸದಸ್ಯರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಕಳೆದ ತಿಂಗಳು, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಬಿಲ್ಕಿಸ್ ಬಾನೊ ಅವರ ಅರ್ಜಿಗಳ ವಿಚಾರಣೆಗೆ ಹೊಸ ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿದೆ. ಸೋಮವಾರ ವಿಚಾರಣೆ ನಡೆಯಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications