ಕೇವಲ ಇಬ್ಬರು ನ್ಯಾಯಾಧೀಶರು ನಿರ್ಧರಿಸಲು ಸಾಧ್ಯವಿಲ್ಲ: ಸಲಿಂಗ ವಿವಾಹದ ಕುರಿತು ಬಿಜೆಪಿ ಸಂಸದ ಹೇಳಿಕೆ
ನವದೆಹಲಿ, ಡಿಸೆಂಬರ್ 19: ಕೆಲವು ಎಡ-ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನುಬದ್ಧ ಮಾನ್ಯತೆ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಸೋಮವಾರ ಹೇಳಿದ್ದಾರೆ.
ಇಂತಹ ಯಾವುದೇ ಯತ್ನವನ್ನು ಸರ್ಕಾರ ಬಲವಾಗಿ ವಿರೋಧಿಸಬೇಕಿದೆ ಎಂದು ಒತ್ತಾಯಿಸಿದರು.
ಸಂಸತ್ ಕಲಾಪದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ದೇಶದ ಸಾಂಸ್ಕೃತಿಕ ನೀತಿಗೆ ವಿರುದ್ಧವಾದ ಯಾವುದೇ ಆದೇಶವನ್ನು ನ್ಯಾಯಾಂಗ ನೀಡದಂತೆ ಮನವಿ ಮಾಡಿದರು.
ಭಾರತದಲ್ಲಿ, ಕೆಲವು ಎಡ-ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಪಡೆಯುವ ಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಭಾರತದಲ್ಲಿ, ಮುಸ್ಲಿಮರ ವೈಯಕ್ತಿಕ ಕಾನೂನು ಸಲಿಂಗ ವಿವಾಹವನ್ನು ಅನುಮೋದಿಸುವುದಿಲ್ಲ ಅಥವಾ ಅಂಗೀಕರಿಸಲಾಗುವುದಿಲ್ಲ. ಸಲಿಂಗ ವಿವಾಹವು ದೇಶದಲ್ಲಿ ವೈಯಕ್ತಿಕ ಕಾನೂನುಗಳಿಗೆ ಹಾನಿ ಉಂಟುಮಾಡಲಿದೆ ಎಂದು ತಿಳಿಸಿದರು.
ಇಂತಹ ಮಹತ್ವದ ಸಾಮಾಜಿಕ ವಿಷಯದ ಬಗ್ಗೆ ಕೇವಲ ಇಬ್ಬರು ನ್ಯಾಯಾಧೀಶರು ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಶೀಲ್ ಕುಮಾರ್ ಮೋದಿ ಹೇಳಿದರು.
ಈ ವಿಚಾರವಾಗಿ ಸಂಸತ್ತು ಹಾಗೂ ಸಮಾಜದಲ್ಲಿ ಚರ್ಚೆಗಳು ನಡೆಯಬೇಕೆಂದು ಅವರು ಒತ್ತಾಯಿಸಿದರು.
ಸರ್ಕಾರವು ಸಲಿಂಗ ವಿವಾಹದ ವಿರುದ್ಧ ನ್ಯಾಯಾಲಯದಲ್ಲಿ ಬಲವಾಗಿ ವಾದಿಸಬೇಕು ಎಂದು ಹೇಳಿದರು.

ಡ್ರೋನ್ ಸ್ಥಾಪನೆಗೆ ಸಂಸದ ಒತ್ತಾಯ
ಇದೇ ವೇಳೆ, ವೈಎಸ್ಆರ್ ಕಾಂಗ್ರೆಸ್ ಸಂಸದ ವಿಜಯ್ ಸಾಯಿ ರೆಡ್ಡಿ ಅವರು ವಿಶಾಖಪಟ್ಟಣಂನಲ್ಲಿ ಡ್ರೋನ್ ಸಂಶೋಧನಾ ಸಂಸ್ಥೆ ಸ್ಥಾಪಿಸುವಂತೆ ಒತ್ತಾಯಿಸಿದರು.
ವಿಶೇಷವಾಗಿ ಕೃಷಿ, ರಕ್ಷಣೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರಗಳಿಗೆ ಡ್ರೋನ್ಗಳು ತುಂಬಾ ಉಪಯುಕ್ತವಾಗಿವೆ ಎಂದು ಅವರು ತಿಳಿಸಿದರು.
ಆಂಧ್ರಪ್ರದೇಶದಲ್ಲಿ ಸುಮಾರು 65 ಪ್ರತಿಶತ ಜನರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ರೆಡ್ಡಿ ಹೇಳಿದರು.
ವಿಮಾನ ಸಂಪರ್ಕಕ್ಕೆ ಚಡ್ಡಾ ಒತ್ತಾಯ
ಪಂಜಾಬ್ನ ಜನರು ಅನೇಕ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಆದರೆ, ಪಂಜಾಬ್ನಿಂದ ಆ ದೇಶಗಳಿಗೆ ವಿಮಾನ ಸಂಪರ್ಕವು ಸಮರ್ಪಕವಾಗಿಲ್ಲ ಎಂದು ಎಎಪಿಯ ರಾಘವ್ ಚಡ್ಡಾ ಹೇಳಿದರು.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications