ಸಾರ್ವಜನಿಕವಾಗಿ ಮೂತ್ರ ವಿಸರ್ಜಿಸಿದ ಸಂಸದನಿಗೆ ಛೀಮಾರಿ
ಪಟ್ನಾ, ಜೂನ್ 29 : ಈ ರಾಜಕಾರಣಿಯ ಹೆಸರು - ರಾಧಾ ಮೋಹನ್ ಸಿಂಗ್, ವಯಸ್ಸು - 67, ಪಕ್ಷ - ಭಾರತೀಯ ಜನತಾ ಪಕ್ಷ. ಪೂರ್ವಿ ಚಂಪಾರಣ್ ಕ್ಷೇತ್ರದ ಸಂಸದ, ಕೇಂದ್ರ ಕೃಷಿ ಸಚಿವ. ಬಿಹಾರದ ಮೋತಿಹಾರಿಯಲ್ಲಿ ಜೀವಿಸುವ ಇವರು ಇದ್ದಕ್ಕಿದ್ದಂತೆ ಸುದ್ದಿಯಲ್ಲಿದ್ದಾರೆ.
ಇವರು ಮಾಡಿರುವ ಘನಂದಾರಿ ಕೆಲಸವೆಂದರೆ, ರಸ್ತೆಯಲ್ಲಿಯೇ ತಮ್ಮ ಕಚ್ಚೆಯನ್ನೆತ್ತಿ ಮೂತ್ರ ವಿಸರ್ಜನೆ ಮಾಡಿರುವುದು. ತಮ್ಮ ವಾಹನ ನಿಲ್ಲಿಸಿ, ಕೈಯಲ್ಲಿ ಗನ್ ಹಿಡಿದಿದ್ದ ಅಂಗರಕ್ಷರು ಅತ್ತ ನೋಡುತ್ತಿದ್ದಾಗ, ಇವರು ಇತ್ತ ತಮ್ಮ ಕೆಲಸವನ್ನು ಸುಗಮವಾಗಿ ಮುಗಿಸಿದ್ದಾರೆ.

ನಿಸರ್ಗ ಕರೆಗೆ ಹೀಗೆ ಓಗೊಡುವುದು ವಿಹಿತವೇನೋ ಸರಿ. ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ ಅಭಿಯಾನದ ಬಗ್ಗೆ, ಶೌಚಾಲಯಗಳನ್ನು ಕಟ್ಟಿಸುವ ಬಗ್ಗೆ ಹೋದಲ್ಲೆಲ್ಲಾ ಭಾಷಣ ಬಿಗಿಯುತ್ತಿದ್ದರೆ, ಅವರದೇ ಪಕ್ಷದ ಹಿರಿಯ ನಾಯಕರೊಬ್ಬರು ಸಾರ್ವಜನಿಕವಾಗಿ ಇಂಥ ಮಾನಗೇಡಿ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾರೆ.
ಈ ಚಿತ್ರ ಈಗ ಸಾಮಾಜಿಕ ತಾಣದಲ್ಲೆಲ್ಲಾ ವೈರಲ್ ಆಗಿದ್ದು, ನೆಟ್ಟಿಗರು ಸನ್ಮಾನ್ಯ ರಾಧಾ ಮೋಹನ್ ಸಿಂಗ್ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. "ಅಯ್ಯೋ ದೇವರೆ, ಇನ್ನೂ ಏನೇನು ನೋಡಬೇಕೋ? ದೇವರೆ, ನಿನ್ನ ಬಳಿಗೆ ನನ್ನನ್ನು ಬೇಗನೆ ಕರೆಸಿಕೊಂಡುಬಿಡಪ್ಪಾ" ಎಂದು ಟ್ವಿಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ.
ಇನ್ನು ಕೆಲವರು, ಅದರಲ್ಲಿ ತಪ್ಪೇನಿದೆ. ಇದ್ದಕ್ಕಿದ್ದಂತೆ ಅರ್ಜೆಂಟ್ ಆದರೆ ಏನು ಮಾಡಬೇಕು? ಹೀಗೆ ನಿಸರ್ಗದಲ್ಲಿ ನೈಸರ್ಗಿಕ ಕ್ರಿಯೆಯನ್ನು ಮಾಡುವ ಮಜವೇ ಬೇರೆ... ದಯವಿಟ್ಟು ಇಲ್ಲಿ ಯಾರೂ ಬರಬೇಡಿ, ಮಂತ್ರೀಜಿ ಬಿಜಿಯಾಗಿದ್ದಾರೆ ಎಂದು ಹಲವರು ತಮಗಿಷ್ಟ ಬಂದಂತೆ ಟ್ವೀಟ್ ಮಾಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications