ಕಾಂಗ್ರೆಸ್ ಕದ ತಟ್ಟುತ್ತಿರುವ ಬಿಜೆಪಿ ಸಂಸದ ವರುಣ್ ಗಾಂಧಿ?
ನವದೆಹಲಿ, ನವೆಂಬರ್ 28: ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಬಳಿಕ ಅವರ ಕಸಿನ್ ಬ್ರದರ್ ಬಿಜೆಪಿ ಸಂಸದ, ವರುಣ್ ಗಾಂಧಿ ಅವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ನೆಹರೂ ಹಾಗೂ ಗಾಂಧಿ ಕುಟುಂಬದ ವೈಮನಸ್ಯ ದೂರಾಗಿಸಲು ವರುಣ್ ಗಾಂಧಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ರಾಹುಲ್ ಮುಂದಾಗಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಆದರೆ, ರಾಜಕೀಯ ವಿಶ್ಲೇಷಕರ ಪ್ರಕಾರ ಒಂದು ವೇಳೆ ರಾಹುಲ್ ಹಾಗೂ ವರುಣ್ ಒಂದಾದರೂ ಸೋನಿಯಾ ಹಾಗೂ ಮನೇಕಾ ಗಾಂಧಿ ನಡುವಿನ ಮುಸುಕಿನ ಗುದ್ದಾಟ ಮುಂದುವರೆಯಲಿದೆ. ಮನೇಕಾ ಎಂದಿಗೂ ಮಗನ ಈ ನಡೆಗೆ ಸಮ್ಮತಿ ಸೂಚಿಸುವುದಿಲ್ಲ ಎಂದಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪ್ರೀತಿಯ ಪುತ್ರ ಸಂಜಯ್ ಗಾಂಧಿ ಅವರ ಮಗ ವರುಣ್ ಅವರ ತಾಯಿ ಮನೇಕಾ ಗಾಂಧಿ ಅವರು ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್ಪುರ್ ಲೋಕಸಭಾ ಕ್ಷೇತ್ರವನ್ನು ವರುಣ್ ಪ್ರತಿನಿಧಿಸುತ್ತಿದ್ದಾರೆ.
ಗಾಳಿಸುದ್ದಿ ಹಬ್ಬಿದ್ದು ಹೀಗೆ: ನವೆಂಬರ್ 11ರಂದು ಅಸ್ಸೋಂ ರಾಜಧಾನಿ ಗುವಾಹತಿಯಲ್ಲಿ ಮಾತನಾಡಿದ್ದ ವರುಣ್ ಗಾಂಧಿ, 'ತಾವು ಗಾಂಧಿ ಕುಟುಂಬಕ್ಕೆ ಸೇರದೆ ಹೋಗಿದ್ದರೆ 29ನೇ ವಯಸ್ಸಿಗೆ ಲೋಕಸಭಾ ಸದಸ್ಯರೇ ಆಗುತ್ತಿರಲಿಲ್ಲ' ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ನಾನು ಫಿರೋಜ್ ವರುಣ್ ಗಾಂಧಿ. ಆದರೆ, ವರುಣ್ ದತ್ತ ಅಥವಾ ವರುಣ್ ಘೋಷ್ ಅಥವಾ ವರುಣ್ ಖಾನ್ ಯಾವುದೇ ಇರಲಿ. ಇದು ಮುಖ್ಯವಲ್ಲ. ಎಲ್ಲರಿಗೂ ಸಮಾನಾದ ಅವಕಾಶಗಳು ಸಿಗಬೇಕು. ಇಂತಹ ಭಾರತವನ್ನು ನಾನು ನೋಡಲು ಇಚ್ಛಿಸುತ್ತೇನೆ' ಎಂದು ವರುಣ್ ಹೇಳಿದ್ದರು.
ಇದಕ್ಕೆ ಪೂರಕವಾಗಿ...'ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಥವಾ ಪಕ್ಷದ ಕಚೇರಿ ಮೂಲಕವೇ ವರುಣ್ ಗಾಂಧಿ ಪಕ್ಷ ಸೇರಬಹುದು ಅಥವಾ ಸೋದರಿ ಪ್ರಿಯಾಂಕಾ ಗಾಂಧಿ ಅವರ ಮೂಲಕವಾದರೂ ವರುಣ್ ಗಾಂಧಿ ಅವರು ಕಾಂಗ್ರೆಸ್ಗೆ ಸೇರಬಹುದು' ಎಂದು ಕಾಂಗ್ರೆಸ್ನ ಹಿರಿಯ ನಾಯಕ ಹಾಜಿ ಮಂಜೂರ್ ಅಹಮದ್ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications