ಸದನಕ್ಕೆ ಅವಮಾನ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಹಕ್ಕುಚ್ಯುತಿ ನಿರ್ಣಯ
ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಲೋಕಸಭೆಯಲ್ಲಿ ಶುಕ್ರವಾರ ರಾತ್ರಿ ಬಿಜೆಪಿಯ ಕೆಲವು ಸಂಸದರು ಹಕ್ಕುಚ್ಯುತಿ ಉಲ್ಲಂಘನೆ ನಿರ್ಣಯಕ್ಕೆ ಮುಂದಾಗಿದ್ದಾರೆ.
ಬಿಜೆಪಿ ಸಂಸದರಾದ ಸಂಜಯ್ ಜೈಸ್ವಾಲ್, ನಿಶಿಕಾಂತ್ ದುಬೆ, ಪಿಪಿ ಚೌಧರಿ ಮತ್ತು ಮೀನಾಕ್ಷಿ ಲೇಖಿ ಅವರು ಫೆಬ್ರವರಿ 11ರಂದು ಗಂಭೀರ ಹಕ್ಕುಚ್ಯುತಿ ಉಲ್ಲಂಘನೆ ಮತ್ತು ಸದನದ ನಿಂದನೆ ಮಾಡಲಾಗಿದೆ ಎಂದು ನೋಟಿಸ್ ನೀಡಿದ್ದು, ಅದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವೀಕರಿಸಿದ್ದಾರೆ.
ಕೇಂದ್ರ ಸರ್ಕಾರದ ಮೂರು ಕಠಿಣ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯ ವೇಳೆ ಜೀವ ಕಳೆದುಕೊಂಡ ರೈತರಿಗೆ ಸಂತಾಪ ಸೂಚಿಸಲು ಕೆಳ ಸದನದಲ್ಲಿ ಗುರುವಾರ ಬಜೆಟ್ ಕುರಿತಾದ ಚರ್ಚೆಯ ತಮ್ಮ ಭಾಷಣದ ವೇಳೆ ರಾಹುಲ್ ಗಾಂಧಿ ಎರಡು ನಿಮಿಷದ ಮೌನಕ್ಕೆ ಕರೆ ನೀಡಿದ್ದರು. ಈ ಕುರಿತು ಹಕ್ಕುಚ್ಯುತಿ ನಿರ್ಣಯಕ್ಕೆ ಬಿಜೆಪಿ ಮುಂದಾಗಿದೆ.

ಎದ್ದು ನಿಂತಿದ್ದ ವಿಪಕ್ಷ ಸಂಸದರು
ರಾಹುಲ್ ಗಾಂಧಿ ಅವರು ಕರೆ ನೀಡಿದಾಗ ಎನ್ಸಿಪಿ, ಡಿಎಂಕೆ ಮತ್ತು ಟಿಎಂಸಿ ಸೇರಿದಂತೆ ವಿರೋಧಪಕ್ಷಗಳ ಸಂಸದರು ಎದ್ದು ನಿಂತಿದ್ದರೆ ಆಡಳಿತ ಪಕ್ಷದ ಸದಸ್ಯರು ಅದಕ್ಕೆ ಸ್ಪಂದಿಸಿರಲಲ್ಲ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸ್ಪೀಕರ್ ಬಿರ್ಲಾ, ಸೀಟುಗಳಲ್ಲಿ ಕುಳಿತುಗೊಳ್ಳುವಂತೆ ಸದಸ್ಯರಿಗೆ ಸೂಚಿಸಿದ್ದರು.

ಲಿಖಿತ ರೂಪದಲ್ಲಿ ನೀಡಿ
'ನೀವು ಏನನ್ನಾದರೂ ಚರ್ಚಿಸಲು ಬಯಸಿದ್ದರೆ ನನಗೆ ಲಿಖಿತ ರೂಪದಲ್ಲಿ ನೀಡಿ. ನಾನು ಸಮಯ ನೀಡುತ್ತೇನೆ. ಆದರೆ ಈಗ ನನಗೆ ಸದನ ನಡೆಸಲು ಬಿಡಿ. ಎಲ್ಲರೂ ರೈತರ ಬಗ್ಗೆ ಗೌರವ ಹೊಂದಿದ್ದಾರೆ. ಆದರೆ ನನಗೆ ನಿಯಮ ಮತ್ತು ಶಿಷ್ಟಾಚಾರಗಳಿಗೆ ಅನುಗುಣವಾಗಿ ಸದನ ನಡೆಸುವ ಜವಾಬ್ದಾರಿ ಇದೆ' ಎಂದು ಬಿರ್ಲಾ ಹೇಳಿದ್ದರು.

ಸದನಕ್ಕೆ ಅವಮಾನ
'ಇದೇ ಮೊದಲ ಬಾರಿಗೆ ಸಂಸದರೊಬ್ಬರು ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡುವಂತೆ ಆದೇಶಿಸಿದ್ದಾರೆ. ಕೆಲವು ಸಂಸದರು ಅದನ್ನು ಅನುಸರಿಸಿದ್ದಾರೆ ಕೂಡ. ಲೋಕಸಭೆಯು ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಆದೇಶ ನೀಡಿದ ರಾಹುಲ್ ಗಾಂಧಿ ಮತ್ತು ಅದನ್ನು ಅನುಸರಿಸಿದ ಎಲ್ಲ ಸಂಸದರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ನೋಟಿಸ್ ನೀಡಲಾಗುವುದು. ಅವರು ಸದನವನ್ನು ಅವಮಾನಿಸಿದ್ದಾರೆ' ಎಂದು ಸಂಸದ ಸಂಜಯ್ ಜೈಸ್ವಾಲ್ ತಿಳಿಸಿದ್ದಾರೆ.

ಮಹುವಾ ವಿರುದ್ಧ ಹಕ್ಕುಚ್ಯುತಿ
ಲೋಕಸಭೆಯಲ್ಲಿ ಸೋಮವಾರ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ವಿರುದ್ಧ ಬಿಜೆಪಿ ಸಂಸದರಾದ ದುಬೆ ಮತ್ತು ಚೌಧರಿ ಅವರು ಹಕ್ಕುಚ್ಯುತಿ ನಿರ್ಣಯಕ್ಕೆ ಮುಂದಾಗಿದ್ದರು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications