ಗುಜರಾತಿನಿಂದ ರಾಜ್ಯ ಸಭೆಗೆ ಅಮಿತ್ ಶಾ, ಸ್ಮೃತಿ ಇರಾನಿ ಸ್ಪರ್ಧೆ
ನವದೆಹಲಿ, ಜುಲೈ 26: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ರಾಜ್ಯಸಭೆಗೆ ಕಳುಹಿಸಲು ಬಿಜೆಪಿ ತೀರ್ಮಾನಿಸಿದೆ. ಅವರು ಗುಜರಾತಿನಿಂದ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ.
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ನಂತರ ಶಾಸನಸಭೆಗಳಿಂದ ದೂರ ಉಳಿದಿದ್ದ ಗುಜರಾತಿನ ಮಾಜಿ ಗೃಹ ಸಚಿವ ಅಮಿತ್ ಶಾ ಪಕ್ಷಾಧ್ಯಕ್ಷ ಹುದ್ದೆ ನಿಭಾಯಿಸುತ್ತಿದ್ದರು. ಇದೀಗ ಅವರು ಮತ್ತು ಕಲಾಪಗಳಲ್ಲಿ ಭಾಗವಹಿಸಲಿದ್ದಾರೆ. ಅದಕ್ಕಾಗಿ ಗುಜರಾತಿನಿಂದ ಸ್ಪರ್ಧಿಸಿ ರಾಜ್ಯಸಭೆಗೆ ಆಯ್ಕೆ ಬಯಸಿದ್ದಾರೆ.

ಅಮಿತ್ ಶಾ ಜತೆಗೆ ಸ್ಮೃತಿ ಇರಾನಿಯೂ ಗುಜರಾತಿನಿಂದ ರಾಜ್ಯಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಸಂಸತ್ ಸದಸ್ಯರ ಸಭೆ ಬಳಿಕ ಜೆಪಿ ನಡ್ಡಾ ಹೇಳಿದ್ದಾರೆ.
ಗುಜರಾತ್ ವಿಧಾನಸಭೆಯಲ್ಲಿ ಎರಡು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವಷ್ಟು ಸಂಖ್ಯಾಬಲವನ್ನು ಬಿಜೆಪಿ ಹೊಂದಿದ್ದು ಇಬ್ಬರೂ ನಾಯಕರು ರಾಜ್ಯಸಭೆ ಪ್ರವೇಶಿಸುವುದು ಬಹುತೇಕ ನಿಕ್ಕಿಯಾಗಿದೆ.












Click it and Unblock the Notifications