ದೆಹಲಿ ಸೋಲಿನ ಬೆನ್ನಲ್ಲೇ ಮೋದಿ ಬಗ್ಗೆ ಉಮಾ ಭಾರತಿ ಮಾಡಿದ ವಿಚಿತ್ರ ಟ್ವೀಟ್: ನಂತರ ಸ್ಪಷ್ಟನೆ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಆತ್ಮಾವಲೋಕನ ಮಾಡಿಕೊಳ್ಳುವಂತೆ ಮಾಡಿದೆ.
ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಉಮಾ ಭಾರತಿ ಮಾಡಿರುವ ಟ್ವೀಟ್ ಮತ್ತು ಪ್ರಧಾನಿ ಮೋದಿಯವರನ್ನು ಅವರು ಸಂಭೋದಿಸಿದ ರೀತಿ, ಪಕ್ಷದೊಳಗೆ ಹೊಸ ಚರ್ಚೆಗೆ ಕಾರಣವಾಗಿದೆ.
ತಾನು ಮಾಡಿರುವ ಟ್ವೀಟ್ ಪ್ರಧಾನಿಯನ್ನು ಅಣಕಿಸುವಂತೆ ಇರುವುದನ್ನು ಅರಿತ, ಉಮಾ ಭಾರತಿ, ಅದಕ್ಕೆ ಸ್ಪಷ್ಟನೆಯನ್ನು ಇನ್ನೊಂದು ಟ್ವೀಟ್ ಮೂಲಕ ನೀಡಿದ್ದಾರೆ.
ಇತ್ತೀಚಿನ ವಿಧಾನಸಭಾ ಚುನಾವಣೆಯ ಫಲಿತಾಂಶ, "ಮೋದಿ ಒಬ್ಬರು ಅಸಾಧಾರಣ ನಾಯಕ ಎನ್ನುವುದು ಸಾಬೀತಾಗಿದೆ, ಛತ್ರಪತಿ ಮೋದಿ ಜಿಂದಾಬಾದ್" ಎಂದು ಉಮಾ ಭಾರತಿ ಟ್ವೀಟ್ ಮಾಡಿದ್ದರು. ಆದರೆ, ಇತ್ತೀಚಿನ ಎಲ್ಲಾ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿತ್ತು. ಉಮಾ ಭಾರತಿ ಹಿಂದಿಯಲ್ಲಿ ಮಾಡಿದ್ದ ಟ್ವೀಟ್ ಹೀಗಿತ್ತು:

ದೆಹಲಿ ವಿಧಾನಸಭಾ ಚುನಾವಣೆಯ ಸಂದೇಶ
"ದೆಹಲಿ ವಿಧಾನಸಭಾ ಚುನಾವಣೆಯ ಸಂದೇಶ. ಕಳೆದ ಒಂದೂವರೆ ವರ್ಷಗಳಲ್ಲಿ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆ, ಇದಾದ ನಂತರದ ಲೋಕಸಭಾ ಚುನಾವಣೆ, ಪಾರ್ಲಿಮೆಂಟ್ ಚುನಾವಣೆಯ ನಂತರ ಮತ್ತೆ ಕೆಲವು ರಾಜ್ಯಗಳಲ್ಲಿನ ಚುನಾವಣೆಯ ಫಲಿತಾಂಶದಿಂದ ಒಂದಂತೂ ಸ್ಪಷ್ಟ. ಬಿಜೆಪಿ ಮತ್ತು ಭಾರತದಲ್ಲಿ ಮೋದಿಗೆ ಸರಿಸಾಟಿಯಾಗುವವರು ಯಾರೂ ಇಲ್ಲ" - ಉಮಾ ಭಾರತಿ ಟ್ವೀಟ್.

ಮೋದಿಜಿ ದೇಶಕ್ಕೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ
"ಇಡೀ ದೇಶ ಮೋದಿಜಿಗೆ ಮತ್ತು ಮೋದಿಜಿ ದೇಶಕ್ಕೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಛತ್ರಪತಿ ಮೋದಿ ಜಿಂದಾಬಾದ್" ಇದು ಉಮಾಭಾರತಿ ಮಾಡಿದ್ದ ಟ್ವೀಟ್. ಇತ್ತೀಚೆಗೆ, ಅಂದರೆ ಕಳೆದೆರಡು ವರ್ಷಗಳಲ್ಲಿ ನಡೆದ ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇನ್ನು, ದೆಹಲಿಯಲ್ಲೂ ಕಮಲ ಅರಳಲಿಲ್ಲ. ಹಾಗಾಗಿ, ಉಮಾ ಭಾರತಿ ಟ್ವೀಟ್ ವಿಢಂಬನೆ ರೀತಿಯಲ್ಲಿತ್ತು.

ಉಮಾ ಭಾರತಿ ಟ್ವೀಟ್ ಮೂಲಕ ಸ್ಪಷ್ಟನೆ
ತಮ್ಮ ಟ್ವೀಟ್ ಬೇರೆ ಸಂದೇಶ ರವಾನಿಸುತ್ತಿದೆ ಎನ್ನುವುದನ್ನು ಅರಿತ ಉಮಾ ಭಾರತಿ ಇದಕ್ಕೆ ಟ್ವೀಟ್ ಮೂಲಕ ಸ್ಪಷ್ಟನೆಯನ್ನು ನೀಡಿದ್ದಾರೆ. "ನಿನ್ನೆ ದೆಹಲಿ ಚುನಾವಣೆಯ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ದೇಶದ ಪ್ರತಿಷ್ಠಿತ ಪತ್ರಿಕೆಯೊಂದು ನಾನು ಮೋದಿಜಿಯ ಬಗ್ಗೆ ವ್ಯಂಗ್ಯವಾಡಿದ್ದೇನೆ ಎಂದು ಬರೆದಿದೆ. ವರದಿ ಪ್ರಕಟ ಮಾಡುವ ಮೊದಲು, ನನ್ನ ಟ್ವೀಟ್ ಅನ್ನು ಆ ಪತ್ರಿಕೆಯವರು ಓದಲಿಲ್ಲವೇನೋ" - ಉಮಾ ಭಾರತಿ ಸ್ಪಷ್ಟನೆ.

ದೇಶದಲ್ಲಿ ಮೋದಿಗೆ ಸರಿಸಾಟಿಯಾಗುವ ಇನ್ನೊಬ್ಬ ನಾಯಕರಿಲ್ಲ
"2014ರಿಂದ ಇದುವರೆಗೆ ಒಂದಂತೂ ಸ್ಪಷ್ಟ. ಇಡೀ ದೇಶದಲ್ಲಿ ಮೋದಿಗೆ ಸರಿಸಾಟಿಯಾಗುವ ಇನ್ನೊಬ್ಬ ನಾಯಕರಿಲ್ಲ. ಹೀಗಾಗಿಯೇ, ಕೆಲವು ರಾಜ್ಯಗಳ ಅಸೆಂಬ್ಲಿ ಚುನಾವಣೆಯಲ್ಲಿ ನಾವು ಸೋತರೂ, ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ದೇಶದಲ್ಲಿ ಮೋದಿ ಅಲೆಯಿದೆ ಎನ್ನುವುದು ಸಾಬೀತಾಗಿದೆ. ಇದು ಇನ್ನೂ ಹತ್ತಿಪ್ಪತ್ತು ವರ್ಷ ಹೀಗೇ ಸಾಗಲಿದೆ" ಎಂದು ಉಮಾ ಭಾರತಿ ಸ್ಪಷ್ಟನೆಯನ್ನು ನೀಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications