ದೆಹಲಿ ಸೋಲಿನ ಬೆನ್ನಲ್ಲೇ ಮೋದಿ ಬಗ್ಗೆ ಉಮಾ ಭಾರತಿ ಮಾಡಿದ ವಿಚಿತ್ರ ಟ್ವೀಟ್: ನಂತರ ಸ್ಪಷ್ಟನೆ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಆತ್ಮಾವಲೋಕನ ಮಾಡಿಕೊಳ್ಳುವಂತೆ ಮಾಡಿದೆ.
ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಉಮಾ ಭಾರತಿ ಮಾಡಿರುವ ಟ್ವೀಟ್ ಮತ್ತು ಪ್ರಧಾನಿ ಮೋದಿಯವರನ್ನು ಅವರು ಸಂಭೋದಿಸಿದ ರೀತಿ, ಪಕ್ಷದೊಳಗೆ ಹೊಸ ಚರ್ಚೆಗೆ ಕಾರಣವಾಗಿದೆ.
ತಾನು ಮಾಡಿರುವ ಟ್ವೀಟ್ ಪ್ರಧಾನಿಯನ್ನು ಅಣಕಿಸುವಂತೆ ಇರುವುದನ್ನು ಅರಿತ, ಉಮಾ ಭಾರತಿ, ಅದಕ್ಕೆ ಸ್ಪಷ್ಟನೆಯನ್ನು ಇನ್ನೊಂದು ಟ್ವೀಟ್ ಮೂಲಕ ನೀಡಿದ್ದಾರೆ.
ಇತ್ತೀಚಿನ ವಿಧಾನಸಭಾ ಚುನಾವಣೆಯ ಫಲಿತಾಂಶ, "ಮೋದಿ ಒಬ್ಬರು ಅಸಾಧಾರಣ ನಾಯಕ ಎನ್ನುವುದು ಸಾಬೀತಾಗಿದೆ, ಛತ್ರಪತಿ ಮೋದಿ ಜಿಂದಾಬಾದ್" ಎಂದು ಉಮಾ ಭಾರತಿ ಟ್ವೀಟ್ ಮಾಡಿದ್ದರು. ಆದರೆ, ಇತ್ತೀಚಿನ ಎಲ್ಲಾ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿತ್ತು. ಉಮಾ ಭಾರತಿ ಹಿಂದಿಯಲ್ಲಿ ಮಾಡಿದ್ದ ಟ್ವೀಟ್ ಹೀಗಿತ್ತು:

ದೆಹಲಿ ವಿಧಾನಸಭಾ ಚುನಾವಣೆಯ ಸಂದೇಶ
"ದೆಹಲಿ ವಿಧಾನಸಭಾ ಚುನಾವಣೆಯ ಸಂದೇಶ. ಕಳೆದ ಒಂದೂವರೆ ವರ್ಷಗಳಲ್ಲಿ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆ, ಇದಾದ ನಂತರದ ಲೋಕಸಭಾ ಚುನಾವಣೆ, ಪಾರ್ಲಿಮೆಂಟ್ ಚುನಾವಣೆಯ ನಂತರ ಮತ್ತೆ ಕೆಲವು ರಾಜ್ಯಗಳಲ್ಲಿನ ಚುನಾವಣೆಯ ಫಲಿತಾಂಶದಿಂದ ಒಂದಂತೂ ಸ್ಪಷ್ಟ. ಬಿಜೆಪಿ ಮತ್ತು ಭಾರತದಲ್ಲಿ ಮೋದಿಗೆ ಸರಿಸಾಟಿಯಾಗುವವರು ಯಾರೂ ಇಲ್ಲ" - ಉಮಾ ಭಾರತಿ ಟ್ವೀಟ್.

ಮೋದಿಜಿ ದೇಶಕ್ಕೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ
"ಇಡೀ ದೇಶ ಮೋದಿಜಿಗೆ ಮತ್ತು ಮೋದಿಜಿ ದೇಶಕ್ಕೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಛತ್ರಪತಿ ಮೋದಿ ಜಿಂದಾಬಾದ್" ಇದು ಉಮಾಭಾರತಿ ಮಾಡಿದ್ದ ಟ್ವೀಟ್. ಇತ್ತೀಚೆಗೆ, ಅಂದರೆ ಕಳೆದೆರಡು ವರ್ಷಗಳಲ್ಲಿ ನಡೆದ ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇನ್ನು, ದೆಹಲಿಯಲ್ಲೂ ಕಮಲ ಅರಳಲಿಲ್ಲ. ಹಾಗಾಗಿ, ಉಮಾ ಭಾರತಿ ಟ್ವೀಟ್ ವಿಢಂಬನೆ ರೀತಿಯಲ್ಲಿತ್ತು.

ಉಮಾ ಭಾರತಿ ಟ್ವೀಟ್ ಮೂಲಕ ಸ್ಪಷ್ಟನೆ
ತಮ್ಮ ಟ್ವೀಟ್ ಬೇರೆ ಸಂದೇಶ ರವಾನಿಸುತ್ತಿದೆ ಎನ್ನುವುದನ್ನು ಅರಿತ ಉಮಾ ಭಾರತಿ ಇದಕ್ಕೆ ಟ್ವೀಟ್ ಮೂಲಕ ಸ್ಪಷ್ಟನೆಯನ್ನು ನೀಡಿದ್ದಾರೆ. "ನಿನ್ನೆ ದೆಹಲಿ ಚುನಾವಣೆಯ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ದೇಶದ ಪ್ರತಿಷ್ಠಿತ ಪತ್ರಿಕೆಯೊಂದು ನಾನು ಮೋದಿಜಿಯ ಬಗ್ಗೆ ವ್ಯಂಗ್ಯವಾಡಿದ್ದೇನೆ ಎಂದು ಬರೆದಿದೆ. ವರದಿ ಪ್ರಕಟ ಮಾಡುವ ಮೊದಲು, ನನ್ನ ಟ್ವೀಟ್ ಅನ್ನು ಆ ಪತ್ರಿಕೆಯವರು ಓದಲಿಲ್ಲವೇನೋ" - ಉಮಾ ಭಾರತಿ ಸ್ಪಷ್ಟನೆ.

ದೇಶದಲ್ಲಿ ಮೋದಿಗೆ ಸರಿಸಾಟಿಯಾಗುವ ಇನ್ನೊಬ್ಬ ನಾಯಕರಿಲ್ಲ
"2014ರಿಂದ ಇದುವರೆಗೆ ಒಂದಂತೂ ಸ್ಪಷ್ಟ. ಇಡೀ ದೇಶದಲ್ಲಿ ಮೋದಿಗೆ ಸರಿಸಾಟಿಯಾಗುವ ಇನ್ನೊಬ್ಬ ನಾಯಕರಿಲ್ಲ. ಹೀಗಾಗಿಯೇ, ಕೆಲವು ರಾಜ್ಯಗಳ ಅಸೆಂಬ್ಲಿ ಚುನಾವಣೆಯಲ್ಲಿ ನಾವು ಸೋತರೂ, ಲೋಕಸಭಾ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ದೇಶದಲ್ಲಿ ಮೋದಿ ಅಲೆಯಿದೆ ಎನ್ನುವುದು ಸಾಬೀತಾಗಿದೆ. ಇದು ಇನ್ನೂ ಹತ್ತಿಪ್ಪತ್ತು ವರ್ಷ ಹೀಗೇ ಸಾಗಲಿದೆ" ಎಂದು ಉಮಾ ಭಾರತಿ ಸ್ಪಷ್ಟನೆಯನ್ನು ನೀಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications