ಬಿಜೆಪಿಯಿಂದ ಸ್ಪರ್ಧಿಸುವಂತೆ 36 ಕೋಟಿ ರುಪಾಯಿ ಆಮಿಷ: ಶರ್ಮಿಳಾ
ಮಣಿಪುರ ವಿಧಾನಸಬೆ ಚುನಾವಣೆಗೆ ಕೇಸರಿ ಪಕ್ಷದಿಂದ ಸ್ಪರ್ಧಿಸುವಂತೆ ಬಿಜೆಪಿ ನಾಯಕರು 36 ಕೋಟಿ ರುಪಾಯಿ ಆಮಿಷ ಒಡ್ಡಿದ್ದರು ಎಂದು ಸಾಮಾಜಿಕ ಕಾರ್ಯಕರ್ತೆ ಐರೋಮ್ ಶರ್ಮಿಳಾ ಆರೋಪ ಮಾಡಿದ್ದಾರೆ
ಇಂಫಾಲ್, ಫೆಬ್ರವರಿ 13: ಬಿಜೆಪಿಯಿಂದ ಸ್ಪರ್ಧಿಸುವುದಕ್ಕೆ 36 ಕೋಟಿ ರುಪಾಯಿ ಆಮಿಷ ಒಡ್ಡಿತ್ತು ಎಂದು ಸಾಮಾಜಿಕ ಕಾರ್ಯಕರ್ತೆ ಐರೋಮ್ ಶರ್ಮಿಳಾ ಹೇಳಿದ್ದಾರೆ. "ನಾನು ಉಪವಾಸ ಸತ್ಯಾಗ್ರಹ ಕೊನೆ ಮಾಡಿದ ಬಳಿಕ, ನಾನು ಬಿಜೆಪಿ ಮುಖಂಡರೊಬ್ಬರನ್ನು ಭೇಟಿ ಮಾಡಿದೆ. ಚುನಾವಣೆಗೆ ಈಗಿನ ಪರಿಸ್ಥಿತಿಯಲ್ಲಿ ತುಂಬ ಹಣ ಬೇಕು" ಎಂದರು.
ಚುನಾವಣೆಯಲ್ಲಿ ಹೋರಾಡುವುದಕ್ಕೆ ಸರಾಸರಿ 36 ಕೋಟಿ ರುಪಾಯಿ ಬೇಕಾಗುತ್ತದೆ. ಒಂದು ವೇಳೆ ನನ್ನ ಹತ್ತಿರ ಇದ್ದರೆ ಅಷ್ಟು ಹಣ ಹಾಕಬಹುದು, ಇಲ್ಲದಿದ್ದರೆ ಕೇಂದ್ರ ಸರಕಾರ ಕೊಡುತ್ತದೆ" ಎಂದು ಅವರು ಹೇಳಿದ್ದಾಗಿ ಶರ್ಮಿಳಾ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಆದರೆ, ಈ ಆರೋಪವನ್ನು ಬಿಜೆಪಿ ನಾಯಕ ರಾಮ್ ಮಾಧವ್ ನಿರಾಕರಿಸಿದ್ದಾರೆ. "ಇಡೀ ಮಣಿಪುರದ ಚುನಾವಣೆ ಪ್ರಚಾರಕ್ಕೆ ಅಷ್ಟು ಖರ್ಚಾಗುವುದಿಲ್ಲ. ಚುನಾವಣೆ ಸ್ಪರ್ಧಿಸುವುದಕ್ಕೆ ಆಕೆ ಗೌರವಯುತವಾದ ಮಾರ್ಗವನ್ನು ಕಂಡುಕೊಳ್ಳಬೇಕು" ಎಂದು ಟ್ವೀಟ್ ಮಾಡಿದ್ದಾರೆ. ಮಣಿಪುರದಲ್ಲಿ ಜಾರಿಯಲ್ಲಿರುವ ವಿವಾದಾತ್ಮಕ ಶಸ್ತ್ರಾಸ್ತ್ರ ಕಾಯ್ದೆ ವಾಪಸ್ ಪಡೆಯಬೇಕು ಎಂದು ಶರ್ಮಿಳಾ ಹದಿನಾರು ವರ್ಷ ಉಪವಾಸ ಸತ್ಯಾಗ್ರಹ ನಡೆಸಿದ್ದರು.[16 ವರ್ಷದ ಉಪವಾಸ ಅಂತ್ಯಗೊಳಿಸಿದ ಉಕ್ಕಿನ ಮಹಿಳೆ ಶರ್ಮಿಳಾ]

ಕಳೆದ ವರ್ಷ ಆಗಸ್ಟ್ 9ರಂದು ತಮ್ಮ ಸತ್ಯಾಗ್ರಹ ಕೊನೆಗೊಳಿಸಿ, ಹೊಸ ಪಕ್ಷವೊಂದನ್ನು ಘೋಷಿಸಿದ್ದರು. ಶರ್ಮಿಳಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ತನ್ನ ತವರು ಕ್ಷೇತ್ರ ಕುರೈ. ಮತ್ತೊಂದು ಮುಖ್ಯಮಂತ್ರಿ ಒಕ್ರಾಂ ಇಬೋಬಿ ಸಿಂಗ್ ವಿರುದ್ಧ ತೌಬಲ್ ಕ್ಷೇತ್ರದಿಂದ.
ಮಣಿಪುರದ 60 ವಿಧಾನಸಭೆ ಕ್ಷೇತ್ರಗಳಿಗೆ ಮಾರ್ಚ್ 4, 8ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 11ರಂದು ಮತ ಎಣಿಕೆ ನಡೆಯಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications