ದೆಹಲಿ ಮುಖ್ಯಮಂತ್ರಿಯಾಗು ಎಂದಿದ್ದ ಬಿಜೆಪಿ
ಹೊಸದೆಹಲಿ, ಆ. 30 : 'ಬಿಜೆಪಿ ನನಗೆ ದೆಹಲಿ ಮುಖ್ಯಮಂತ್ರಿ ಹುದ್ದೆ ಆಮಿಷ ನೀಡಿತ್ತು' ಎನ್ನುವ ಮೂಲಕ ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಸ್ ಹೊಸ ಬಾಂಬ್ ಸಿಡಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಮೂರು ದಿನದ ತರುವಾಯ ಅಂದರೆ ಮೇ 19ರಂದು ಬಿಜೆಪಿಯ ಸಂಸದರೊಬ್ಬರು ಗಜಿಯಾಬಾದ್ ನಿವಾಸದಲ್ಲಿ ನನ್ನನ್ನು ಭೇಟಿಯಾಗಿದ್ದರು. ಮಾತುಕತೆ ನಡೆಸಿ ನನಗೆ ದೆಹಲಿ ಮುಖ್ಯಮಂತ್ರಿ ಸ್ಥಾನ ನೀಡುವ ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದಾರೆ.

ಅಂದು ಬೆಳಗ್ಗೆ ನನ್ನ ಮನೆಗೆ ಆಗಮಿಸಿದ ಬಿಜೆಪಿ ಸಂಸದ ಮಧ್ಯಾಹ್ನ 3.30ರ ವರೆಗೂ ಇದ್ದರು. ಈ ವೇಳೆ ನನಗೆ ದೆಹಲಿ ಮುಖ್ಯಮಂತ್ರಿ ಸ್ಥಾನ ನೀಡುತ್ತೇನೆ. ನೀವು ಬಿಜೆಪಿ ಬೆಂಬಲಿಸಬೇಕು. ಇದಕ್ಕೆ ನಿಮ್ಮ ಪಕ್ಷದ 12 (ಆಮ್ ಆದ್ಮಿ ) ಶಾಸಕರ ಬೆಂಬಲವೂ ಇದೆ. ಅವರೊಂದಿಗೆ ನಾನು ಮಾತನಾಡಿದ್ದೇನೆ. ಇದಕ್ಕೆ ಬಿಜೆಪಿಯ ಹಿರಿಯ ನಾಯಕರ ಬೆಂಬಲವೂ ಇದೆ ಎಂದು ನನ್ನನ್ನು ಅವರ ದಾರಿಗೆ ತರಲು ಪ್ರಯತ್ನಿಸಿದ್ದರು ಎಂದು ವಿಶ್ವಾಸ್ ಆರೋಪಿಸಿದ್ದಾರೆ.
ನನ್ನ ಪಕ್ಷಕ್ಕೆ ನಾನು ಸದಾ ನಿಷ್ಠನಾಗಿದ್ದು ಬಿಜೆಪಿ ಜತೆ ಕೈಜೋಡಿಸಲಿಲ್ಲ. ನನಗೆ ಎಂಪಿ ಆಗಬೇಕು, ಮುಖ್ಯಮಂತ್ರಿಯಾಬೇಕು, ಅದರಿಂದ ಮಾತ್ರ ಜನಸೇವೆ ಮಾಡಲು ಸಾಧ್ಯ ಎಂಬ ಯಾವ ಬಯಕೆಯೂ ಇಲ್ಲ ಎಂದು ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಎದುರು ಸೋತ ವಿಶ್ವಾಸ್ ಹೇಳಿದ್ದಾರೆ.
ಈ ಹೇಳಿಕೆ ದೆಹಲಿ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು ಬಿಜೆಪಿ ಮತ್ತು ಆಮ್ ಆದ್ಮಿ ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ. ಬಿಜೆಪಿ ಕುತಂತ್ರದ ರಾಜಕಾರಣ ಮಾಡುತ್ತಿದ್ದು ನಮ್ಮ ಪಕ್ಷದ ಸದಸಯರನ್ನು ವಾಮಮಾರ್ಗದ ಮೂಲಕ ಸೆಳೆಯುವ ಯತ್ನ ನಡೆಸುತ್ತಿದೆ ಎಂದು ಎಪಿಪಿ ಮುಖಂಡ ಸೋಮನಾಥ ಭಾರ್ತಿ ಆರೋಪಿಸಿದ್ದಾರೆ.
ಎಪಿಪಿ ಮುಖಂಡರಿಗೆ ಸದಾ ಪ್ರಚಾರದಲ್ಲಿರುವ ಹುಚ್ಚು. ಹಾಗಾಗಿ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ದೂರಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications