ಗುಜರಾತ್: '6 ಮಂದಿ ಸಚಿವರಿಗೆ ಈ ಬಾರಿ ಟಿಕೆಟ್ ಇಲ್ಲ'
ಅಹಮದಾಬಾದ್, ನವೆಂಬರ್ 17: ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಮೊದಲ ಸುತ್ತಿನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 89 ಅಭ್ಯರ್ಥಿಗಳ ಪೈಕಿ 70 ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.
ಗುಜರಾತ್: 70 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಹೆಚ್ಚಿನ ಸ್ಥಾನಗಳಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಬಿ.ಜೆ.ಪಿ. ಕಾರ್ಯತಂತ್ರ ರೂಪಿಸಿದೆ. ಇದರ ಭಾಗವಾಗಿ 6 ಸಚಿವರು, 35 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗ್ತಿದೆ.

ಸತತ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿ.ಜೆ.ಪಿ. ಈ ಬಾರಿ ಹಾಲಿ 121 ಶಾಸಕರಲ್ಲಿ 35 ಮಂದಿಗೆ ಟಿಕೆಟ್ ನಿರಾಕರಿಸಲಿದೆ. ಜೊತೆಗೆ 6 ಮಂದಿ ಸಚಿವರಿಗೂ ಸ್ಪರ್ಧೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ.
ಗುಜರಾತ್ ನಲ್ಲಿ ಈ ಬಾರಿ ಚುನಾವಣೆ ಬಿ.ಜೆ.ಪಿ.ಗೆ ತ್ರಾಸದಾಯಕವಾಗಿದೆ. ಯುವ ನಾಯಕರಾದ ಹಾರ್ದಿಕ್ ಪಟೇಲ್, ಜಿಗ್ನೇಶ್ ಮೇವಾನಿ ಅಲೆ ಸವಾಲಾಗಿದೆ. ಈ ಹಿನ್ನಲೆಯಲ್ಲಿ ಚುನಾವಣೆ ಕಾರ್ಯತಂತ್ರ ಬದಲಿಸಿ ಹಾಲಿ ಸಚಿವರು, ಶಾಸಕರಲ್ಲಿ ಕೆಲವರನ್ನು ಕೈಬಿಟ್ಟು ಗೆಲ್ಲುವ ಮುಖಗಳಿಗೆ ಮಣೆ ಹಾಕಲು ತೀರ್ಮಾನಿಸಲಾಗಿದೆ.
ಜಿ.ಎಸ್.ಟಿ. ಬಳಿಕ ಮೊದಲ ಪ್ರಮುಖ ಅಗ್ನಿಪರೀಕ್ಷೆಯನ್ನು ಎದುರಿಸುತ್ತಿರುವ ಬಿ.ಜೆ.ಪಿ. ಚುನಾವಣೆ ಗೆಲುವಿಗಾಗಿ ಈ ಕ್ರಮ ಕೈಗೊಂಡಿದೆ.
ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ನಮಗೆ ಬಹುಮತಕ್ಕಿಂತ ಒಟ್ಟು 182 ಸ್ಥಾನಗಳಲ್ಲಿ 150 ಸ್ಥಾನಗಳನ್ನು ಗೆಲ್ಲುವುದು ಗುರಿಯಾಗಿದೆ ಎಂದು ಹೇಳಿದ್ದಾರೆ. ಹಾಲಿ ಕೆಲ ಶಾಸಕರು, ಸಚಿವರಿಗೆ ಟಿಕೆಟ್ ನೀಡದಿರುವ ಕುರಿತಾಗಿ ಚರ್ಚೆ ನಡೆದಿದೆ. ಸೂಕ್ತ ಸಮಯದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಕೆ.ಪಿ. ನಡ್ಡಾ ತಿಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications