ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಪತ್ನಿ ಕಾರು ಕಳ್ಳತನ!
ನವದೆಹಲಿ, ಮಾರ್ಚ್ 25: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಕಾರನ್ನು ದೆಹಲಿಯಲ್ಲಿ ಕಳ್ಳತನ ಮಾಡಲಾಗಿದೆ. ಕದ್ದಕಾರನ್ನು ಗುರುಗ್ರಾಮದ ಕಡೆ ಕಳ್ಳರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ದೆಹಲಿಯ ಗೋವಿಂದಪುರ ಪ್ರದೇಶದಲ್ಲಿ ನಿಲ್ಲಿಸಿದ್ದ ಜೆ. ಪಿ. ನಡ್ಡಾ ಪತ್ನಿಯ Toyota Fortuner ಕಾರನ್ನು ಮಾರ್ಚ್ 19ರಂದು ಮಧ್ಯಾಹ್ನ 3 ರಿಂದ 4 ಗಂಟೆಯ ಅವಧಿಯಲ್ಲಿ ಕಳ್ಳತನ ಮಾಡಲಾಗಿದೆ. ಈ ಕುರಿತು ಕಾರಿನ ಚಾಲಕ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿತ್ತು. ಜೆ. ಪಿ. ನಡ್ಡಾ ಪತ್ನಿಯ ಕಾರು ಚಾಲಕ ಜೋಗಿಂದರ್ ಸರ್ವೀರ್ಸ್ಗಾಗಿ ಕಾರನ್ನು ತಂದಿದ್ದರು. ಸರ್ವೀಸ್ ಮುಗಿಸಿಕೊಂಡು ವಾಪಸ್ ಆಗುವಾಗ ಊಟಕ್ಕಾಗಿ ಗೋವಿಂದಪುರ ಪ್ರದೇಶದಲ್ಲಿ ನಿಲ್ಲಿಸಿದ್ದರು. ಅಲ್ಲಿಂದಲೇ ಕಾರನ್ನು ಕಳ್ಳತನ ಮಾಡಲಾಗಿದೆ.
ಯಾವುದೇ ಸುಳಿವು ಸಿಕ್ಕಿಲ್ಲ: ಮಾರ್ಚ್ 19ರಂದು Toyota Fortuner ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಇದುವರೆಗೂ ಕಾರಿನ ಕುರಿತು ಯಾವುದೇ ಸುಳಿವು ಸಿಕ್ಕಿಲ್ಲ.
ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗೋವಿಂದಪುರ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಆಗ ಕಾರು ಗುರುಗ್ರಾಮ ಕಡೆಗೆ ತೆರಳುತ್ತಿರುವ ದೃಶ್ಯಗಳು ಸೆರೆಯಾಗಿವೆ. ಬಳಿಕ ಯಾವುದೇ ಮಾಹಿತಿ ಸಿಕ್ಕಿಲ್ಲ.
ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಕಾರು ಹಿಮಾಚಲ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ. ಕಾರನ್ನು ಹುಡುಕಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜೆ. ಪಿ. ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಕಾರು ಕಳ್ಳತನ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಇದು ಹೈ ಪ್ರೊಫೈಲ್ ಪ್ರಕರಣವಾದ ಕಾರಣ ವಿಶೇಷ ತಂಡವನ್ನು ರಚನೆ ಮಾಡಿಕೊಂಡು ಕಾರು ಚಾಲಕ ಜೋಗಿಂದರ್ ನೀಡಿದ ಮಾಹಿತಿ ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ಕಾರನ್ನು ದೆಹಲಿ ಗಡಿ ದಾಟಿಸಿ ಬೇರೆ ರಾಜ್ಯಕ್ಕೆ ಸಾಗಣೆ ಮಾಡಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಅಂದಾಜಿಸಿದ್ದಾರೆ. ಅಲ್ಲದೇ ಕಾರು ಸರ್ವೀಸ್ ಮಾಡಿಸಿಕೊಂಡು ಬಂದ ಬಳಿಕ ಕಳ್ಳತನವಾಗಿದೆ ಎಂದರೆ ಸರ್ವೀಸ್ ಸೆಂಟರ್ ಸುತ್ತಲಿನ ಸ್ಥಳೀಯರ ಕೈವಾಡ ಇರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಮುಂದುವರೆದಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications