ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿಯಿಂದ ಮುರಳಿ ಮನೋಹರ್ ಜೋಶಿ ಅಭ್ಯರ್ಥಿ?
ನವದೆಹಲಿ, ಜೂನ್ 14: ಬಿಜೆಪಿಯ ಹಿರಿಯ ನಾಯಕ ಡಾ. ಮುರಳಿ ಮನೋಹರ್ ಜೋಶಿ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಮುಂದಿನ ವರ್ಷ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.
ಈ ಬಗ್ಗೆ ಇಂಡಿಯಾ ಟುಡೇ ವರದಿ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವಥ್ ಹಾಗೂ ಇತರೆ ಹಿರಿಯ ನಾಯಕರ ಜೊತೆ 82 ವರ್ಷ ವಯಸ್ಸಿನ ಜೋಶಿ ಅವರು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. [ರಾಷ್ಟ್ರಪತಿ ಸ್ಥಾನಕ್ಕೆ ಜೋಶಿ ಅಲ್ಲದೆ ಬಿಗ್ ಬಿ, ವೆಂಕಯ್ಯ?]
ಮೇ 22ರಂದು ನಂ 7, ರೇಸ್ ಕೋರ್ಸ್ ರಸ್ತೆಯಲ್ಲಿ ಭೋಜನ ಕೂಟದಲ್ಲಿ ಪ್ರಧಾನಿ ಮೋದಿ ಅವರ ಜೊತೆ ಜೋಶಿ ಅವರು ಈ ವಿಷಯದ ಬಗ್ಗೆ ಚರ್ಚಿಸಿದ್ದಾರೆ.

ಇದಾದ ಬಳಿಕ ನಾಗ್ಪುರದಲ್ಲಿರುವ ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ಈ ಬಗ್ಗೆ ಮೋಹನ್ ಭಾಗ್ವಥ್ ಅವರೊಟ್ಟಿಗೆ ಮಾತುಕತೆ ನಡೆಸಿದ್ದಾರೆ. ನಂತರ ಜೂನ್ 6 ಹಾಗೂ 7ರಂದು ಮುಂಬೈನ ಆರೆಸ್ಸೆಸ್ ನಾಯಕರೊಂಡಿಗೆ ಚರ್ಚೆ ನಡೆಸಲಾಗಿದೆ. [ಅಧಿಕಾರ ಇದ್ರೂ ನಿರುದ್ಯೋಗಿಯಂತಾದ ಅಡ್ವಾಣಿ, ಎಂಎಂ ಜೋಶಿ]
ಜೋಶಿ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೇರಿಸಲು ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಇಚ್ಛಿಸಿದ್ದು, ಇದಕ್ಕೆ ಆರೆಸ್ಸೆಸ್ ನಾಯಕರ ಸಂಪೂರ್ಣ ಬೆಂಬಲ ಸಿಕ್ಕಿದೆ.
ಮುಂದಿನ ವರ್ಷ ಉತ್ತರಪ್ರದೇಶದ ಅಸೆಂಬ್ಲಿ ಚುನಾವಣೆ ನಡೆಯಲಿದ್ದು, ಬ್ರಾಹ್ಮಣ ಪರಿವಾರದ ಮತಗಳನ್ನು ಸೆಳೆಯಲು ಇದರಿಂದ ಅನುಕೂಲವಾಗಲಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರ ಅವಧಿ 2017ರ ಅಂತ್ಯಕ್ಕೆ ಕೊನೆಗೊಳ್ಳಲಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications