2021-22ರಲ್ಲಿ 614.53 ಕೋಟಿ ದೇಣಿಗೆ ಪಡೆದ ಬಿಜೆಪಿ, ಕಾಂಗ್ರೆಸ್ ಪಡೆದದ್ದು ಎಷ್ಟು ಗೊತ್ತಾ?
ನವದೆಹಲಿ, ನವೆಂಬರ್ 30: 2021-22ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಬಿಜೆಪಿಯು 614.53 ಕೋಟಿ ರೂ.ಗಳನ್ನು ಕೊಡುಗೆಯಾಗಿ ಸ್ವೀಕರಿಸಿದೆ. ಇದು ಪ್ರತಿಪಕ್ಷ ಕಾಂಗ್ರೆಸ್ ಗಳಿಸಿದ ನಿಧಿಗಿಂತ ಆರು ಪಟ್ಟು ಹೆಚ್ಚಾಗಿದೆ.
ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ ಕಾಂಗ್ರೆಸ್ 95.46 ಕೋಟಿ ರೂಪಾಯಿ ಹಣವನ್ನು ಪಡೆದಿದೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ಈ ಅವಧಿಯಲ್ಲಿ 43 ಲಕ್ಷ ರೂಪಾಯಿಗಳನ್ನು ಕೊಡುಗೆಯಾಗಿ ಸ್ವೀಕರಿಸಿದ್ದರೆ, ಕೇರಳದಲ್ಲಿ ಸರ್ಕಾರದಲ್ಲಿರುವ ಸಿಪಿಐ ಎಂ 10.05 ಕೋಟಿ ರೂಪಾಯಿಗಳನ್ನು ಪಡೆದಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು 2021 ಮಾರ್ಚ್- ಏಪ್ರಿಲ್ನಲ್ಲಿ ನಡೆಯಿತು. ಕೇರಳದಲ್ಲಿಯೂ ಸಹ ಏಪ್ರಿಲ್ 2021 ರಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸಲಾಯಿತು. ಈ ನಾಲ್ಕು ರಾಷ್ಟ್ರೀಯ ಪಕ್ಷಗಳು ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ತಮ್ಮ ಇತ್ತೀಚಿನ ಕೊಡುಗೆಗಳ ವರದಿಗಳನ್ನು ಸಲ್ಲಿಸಿದ್ದು ಅದು ಮಂಗಳವಾರ ದಾಖಲೆಗಳನ್ನು ಬಿಡುಗಡೆ ಮಾಡಿದೆ.

ವೈಯಕ್ತಿಕ ದಾನಿಗಳು ಮತ್ತು ಘಟಕಗಳಿಂದ ಪಡೆದ 20,000 ರೂ.ಗಿಂತ ಹೆಚ್ಚಿನ ಕೊಡುಗೆಗಳ ವಾರ್ಷಿಕ ವರದಿಯನ್ನು ಪಕ್ಷಗಳು ಸಲ್ಲಿಸಬೇಕೆಂದು ಜನತಾ ಪ್ರಾತಿನಿಧ್ಯ ಕಾಯಿದೆ ಷರತ್ತು ವಿಧಿಸುತ್ತದೆ. ವ್ಯಕ್ತಿಗಳು ಮತ್ತು ಘಟಕಗಳಲ್ಲದೆ ಚುನಾವಣಾ ಟ್ರಸ್ಟ್ಗಳು ಸಹ ಪಕ್ಷಗಳ ಖಜಾನೆಗೆ ಕೊಡುಗೆ ನೀಡುತ್ತವೆ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಸೇರಿದಂತೆ ಚುನಾವಣಾ ಟ್ರಸ್ಟ್ಗಳು ಬಿಜೆಪಿಯ ಖಜಾನೆಗೆ ಪ್ರಮುಖ ಕೊಡುಗೆ ನೀಡಿವೆ.

ದೆಹಲಿ ಮತ್ತು ಪಂಜಾಬ್ನಲ್ಲಿ ಅಧಿಕಾರದಲ್ಲಿರುವ ಮತ್ತು ಮೂರು ರಾಜ್ಯಗಳಲ್ಲಿ ಮಾನ್ಯತೆ ಪಡೆದ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು 2021-22 ರ ಆರ್ಥಿಕ ವರ್ಷದಲ್ಲಿ 44.54 ಕೋಟಿ ರೂಪಾಯಿಗಳನ್ನು ಪಡೆದಿದೆ ಎಂದು ಚುನಾವಣಾ ಸಮಿತಿಗೆ ವರದಿ ಮಾಡಿದೆ. ಈ ವರ್ಷದ ಅಕ್ಟೋಬರ್ನಲ್ಲಿ ಆಯೋಗಕ್ಕೆ ಸಲ್ಲಿಸಿದ ಇತ್ತೀಚಿನ ಲೆಕ್ಕಪರಿಶೋಧನಾ ವರದಿಯಲ್ಲಿ 30.30 ಕೋಟಿ ರೂಪಾಯಿ ವೆಚ್ಚವನ್ನು ತೋರಿಸಿದೆ. ಎಎಪಿ ದೆಹಲಿ ಮತ್ತು ಪಂಜಾಬ್ ಅಲ್ಲದೆ, ಗೋವಾದಲ್ಲಿ ಮಾನ್ಯತೆ ಪಡೆದ ರಾಜ್ಯ ಪಕ್ಷವಾಗಿದೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications