2021-22ರಲ್ಲಿ 614.53 ಕೋಟಿ ದೇಣಿಗೆ ಪಡೆದ ಬಿಜೆಪಿ, ಕಾಂಗ್ರೆಸ್ ಪಡೆದದ್ದು ಎಷ್ಟು ಗೊತ್ತಾ?
ನವದೆಹಲಿ, ನವೆಂಬರ್ 30: 2021-22ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಬಿಜೆಪಿಯು 614.53 ಕೋಟಿ ರೂ.ಗಳನ್ನು ಕೊಡುಗೆಯಾಗಿ ಸ್ವೀಕರಿಸಿದೆ. ಇದು ಪ್ರತಿಪಕ್ಷ ಕಾಂಗ್ರೆಸ್ ಗಳಿಸಿದ ನಿಧಿಗಿಂತ ಆರು ಪಟ್ಟು ಹೆಚ್ಚಾಗಿದೆ.
ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ ಕಾಂಗ್ರೆಸ್ 95.46 ಕೋಟಿ ರೂಪಾಯಿ ಹಣವನ್ನು ಪಡೆದಿದೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ತೃಣಮೂಲ ಕಾಂಗ್ರೆಸ್ ಈ ಅವಧಿಯಲ್ಲಿ 43 ಲಕ್ಷ ರೂಪಾಯಿಗಳನ್ನು ಕೊಡುಗೆಯಾಗಿ ಸ್ವೀಕರಿಸಿದ್ದರೆ, ಕೇರಳದಲ್ಲಿ ಸರ್ಕಾರದಲ್ಲಿರುವ ಸಿಪಿಐ ಎಂ 10.05 ಕೋಟಿ ರೂಪಾಯಿಗಳನ್ನು ಪಡೆದಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು 2021 ಮಾರ್ಚ್- ಏಪ್ರಿಲ್ನಲ್ಲಿ ನಡೆಯಿತು. ಕೇರಳದಲ್ಲಿಯೂ ಸಹ ಏಪ್ರಿಲ್ 2021 ರಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸಲಾಯಿತು. ಈ ನಾಲ್ಕು ರಾಷ್ಟ್ರೀಯ ಪಕ್ಷಗಳು ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ತಮ್ಮ ಇತ್ತೀಚಿನ ಕೊಡುಗೆಗಳ ವರದಿಗಳನ್ನು ಸಲ್ಲಿಸಿದ್ದು ಅದು ಮಂಗಳವಾರ ದಾಖಲೆಗಳನ್ನು ಬಿಡುಗಡೆ ಮಾಡಿದೆ.

ವೈಯಕ್ತಿಕ ದಾನಿಗಳು ಮತ್ತು ಘಟಕಗಳಿಂದ ಪಡೆದ 20,000 ರೂ.ಗಿಂತ ಹೆಚ್ಚಿನ ಕೊಡುಗೆಗಳ ವಾರ್ಷಿಕ ವರದಿಯನ್ನು ಪಕ್ಷಗಳು ಸಲ್ಲಿಸಬೇಕೆಂದು ಜನತಾ ಪ್ರಾತಿನಿಧ್ಯ ಕಾಯಿದೆ ಷರತ್ತು ವಿಧಿಸುತ್ತದೆ. ವ್ಯಕ್ತಿಗಳು ಮತ್ತು ಘಟಕಗಳಲ್ಲದೆ ಚುನಾವಣಾ ಟ್ರಸ್ಟ್ಗಳು ಸಹ ಪಕ್ಷಗಳ ಖಜಾನೆಗೆ ಕೊಡುಗೆ ನೀಡುತ್ತವೆ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಸೇರಿದಂತೆ ಚುನಾವಣಾ ಟ್ರಸ್ಟ್ಗಳು ಬಿಜೆಪಿಯ ಖಜಾನೆಗೆ ಪ್ರಮುಖ ಕೊಡುಗೆ ನೀಡಿವೆ.

ದೆಹಲಿ ಮತ್ತು ಪಂಜಾಬ್ನಲ್ಲಿ ಅಧಿಕಾರದಲ್ಲಿರುವ ಮತ್ತು ಮೂರು ರಾಜ್ಯಗಳಲ್ಲಿ ಮಾನ್ಯತೆ ಪಡೆದ ರಾಜ್ಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು 2021-22 ರ ಆರ್ಥಿಕ ವರ್ಷದಲ್ಲಿ 44.54 ಕೋಟಿ ರೂಪಾಯಿಗಳನ್ನು ಪಡೆದಿದೆ ಎಂದು ಚುನಾವಣಾ ಸಮಿತಿಗೆ ವರದಿ ಮಾಡಿದೆ. ಈ ವರ್ಷದ ಅಕ್ಟೋಬರ್ನಲ್ಲಿ ಆಯೋಗಕ್ಕೆ ಸಲ್ಲಿಸಿದ ಇತ್ತೀಚಿನ ಲೆಕ್ಕಪರಿಶೋಧನಾ ವರದಿಯಲ್ಲಿ 30.30 ಕೋಟಿ ರೂಪಾಯಿ ವೆಚ್ಚವನ್ನು ತೋರಿಸಿದೆ. ಎಎಪಿ ದೆಹಲಿ ಮತ್ತು ಪಂಜಾಬ್ ಅಲ್ಲದೆ, ಗೋವಾದಲ್ಲಿ ಮಾನ್ಯತೆ ಪಡೆದ ರಾಜ್ಯ ಪಕ್ಷವಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications