Rekha Gupta: ಕೆಲವೇ ಕ್ಷಣಗಳಲ್ಲಿ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ!
ದೆಹಲಿ, ಫೆಬ್ರವರಿ 20: ದೆಹಲಿಯಲ್ಲಿ 27 ವರ್ಷದ ಬಳಿಕ ಗೆದ್ದು ಬೀಗಿದ ಬಿಜೆಪಿಯು ಅಚ್ಚರಿಯ ರೀತಿಯಲ್ಲಿ ಮಹಿಳಾ ಶಾಸಕಿಯನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ಎಬಿವಿಬಿಯಿಂದ ಮುನ್ನೆಲೆಗೆ ಬಂದು ರಾಜಕೀಯದಲ್ಲಿ ನೆಲೆ ಕಂಡು ಕೊಂಡು ಮಹಿಳೆ ರೇಖಾ ಗುಪ್ತಾ ಅವರಿಗೆ ಮುಖ್ಯಮಂತ್ರಿ ಪಟ್ಟಿ ನೀಡಿದೆ. ಇವರು ಇಂದು ಗುರುವಾರ (ಫೆಬ್ರವರಿ 20) ದೆಹಲಿ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹೌದು, ಈ ಹಿಂದೆಯು ಎಎಪಿಯಿಂದ ಅತಿಶಿ ಮರ್ಲೆನಾ ಅವರು ಮುಖ್ಯಮಂತ್ರಿ ಆಗಿದ್ದರು. ಅದರ ನಂತರ ಅಧಿಕಾರಕ್ಕೆ ಬಂದ ಬಿಜೆಪಿಯು ನಾಯಕಿ ರೇಖಾ ಗುಪ್ತಾ ಅವರಿಗೆ ಸಿಎಂ ಸ್ಥಾನ ನೀಡಿದೆ. ಇದು ಕೆಲವರಿಗೆ ಭಾರಿ ಅಚ್ಚರಿಸಿದೆ. ಇಂದು ಸಿಎಂ ಪ್ರಮಾಣ ವಚನ ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳು ಹಾಗೂ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ.

27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಆಡಳಿತ ಆರಂಭಕ್ಕೆ ಅಧಿಕೃತ ಮುದ್ರೆ ಇಂದು ಬೀಳಲಿದೆ. ರೇಖಾ ಗುಪ್ತಾ ಅವರ ಬೆಂಬಲಿಗರ ಸಂತೋಷ, ಸಂಭ್ರಮ ಮುಗಿಲು ಮುಟ್ಟಿದೆ. ಇನ್ನೂ ಈ ಕಾರ್ಯಕ್ರಮ, ಕೇಂದ್ರ ಬಿಜೆಪಿ ಪ್ರಮುಖ ನಾಯಕರು, ಗಣ್ಯರು, ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ಮಹಿಳಾ ಸಿಎಂ ಆಡಳಿತ ಬಗ್ಗೆ ಕೂತುಹಲದಲ್ಲಿದ್ದಾರೆ. ಅಲ್ಲದೇ ಈ ಹಿಂದೆ ಕಾಂಗ್ರೆಸ್, ಎಎಪಿಯಿಂದ ಮಹಿಳಾ ಸಿಎಂಗಳು ಇಲ್ಲಿ ಅಧಿಕಾರ ನಡೆಸಿದ್ದಾರೆ. ಬಿಜೆಪಿಯಿಂದ ಮೊದಲ ಬಾರಿಗೆ ಮಹಿಳಾ ಸಿಎಂ ಅಧಿಕಾರ ನಡೆಸಲಿದ್ದಾರೆ. ಚುನಾವಣೆ ಮೊದಲು ನೀಡಿದ್ದ ಹಲವು ಭರವಸೆಗಳು ಸಾಕಾರಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 70 ಸೀಟುಗಳಿಗೆ 48 ಬಿಜೆಪಿ ಪಾಲಾದರೆ, 20 ಆಮ್ ಆದ್ಮಿ ಪಕ್ಷದ ಪಾಲಾಗಿವೆ. ಕಾಂಗ್ರೆಸ್ ಗೆ ಹ್ಯಾಟ್ರಿಕ್ ಸೋಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications