Rekha Gupta: ಕೆಲವೇ ಕ್ಷಣಗಳಲ್ಲಿ 4ನೇ ಮಹಿಳಾ ಸಿಎಂ ಆಗಿ ರೇಖಾ ಗುಪ್ತಾ ಅಧಿಕಾರ ಸ್ವೀಕಾರ!
ದೆಹಲಿ, ಫೆಬ್ರವರಿ 20: ದೆಹಲಿಯಲ್ಲಿ 27 ವರ್ಷದ ಬಳಿಕ ಗೆದ್ದು ಬೀಗಿದ ಬಿಜೆಪಿಯು ಅಚ್ಚರಿಯ ರೀತಿಯಲ್ಲಿ ಮಹಿಳಾ ಶಾಸಕಿಯನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ. ಎಬಿವಿಬಿಯಿಂದ ಮುನ್ನೆಲೆಗೆ ಬಂದು ರಾಜಕೀಯದಲ್ಲಿ ನೆಲೆ ಕಂಡು ಕೊಂಡು ಮಹಿಳೆ ರೇಖಾ ಗುಪ್ತಾ ಅವರಿಗೆ ಮುಖ್ಯಮಂತ್ರಿ ಪಟ್ಟಿ ನೀಡಿದೆ. ಇವರು ಇಂದು ಗುರುವಾರ (ಫೆಬ್ರವರಿ 20) ದೆಹಲಿ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹೌದು, ಈ ಹಿಂದೆಯು ಎಎಪಿಯಿಂದ ಅತಿಶಿ ಮರ್ಲೆನಾ ಅವರು ಮುಖ್ಯಮಂತ್ರಿ ಆಗಿದ್ದರು. ಅದರ ನಂತರ ಅಧಿಕಾರಕ್ಕೆ ಬಂದ ಬಿಜೆಪಿಯು ನಾಯಕಿ ರೇಖಾ ಗುಪ್ತಾ ಅವರಿಗೆ ಸಿಎಂ ಸ್ಥಾನ ನೀಡಿದೆ. ಇದು ಕೆಲವರಿಗೆ ಭಾರಿ ಅಚ್ಚರಿಸಿದೆ. ಇಂದು ಸಿಎಂ ಪ್ರಮಾಣ ವಚನ ಜೊತೆಗೆ ಇಬ್ಬರು ಉಪಮುಖ್ಯಮಂತ್ರಿಗಳು ಹಾಗೂ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ.

27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಆಡಳಿತ ಆರಂಭಕ್ಕೆ ಅಧಿಕೃತ ಮುದ್ರೆ ಇಂದು ಬೀಳಲಿದೆ. ರೇಖಾ ಗುಪ್ತಾ ಅವರ ಬೆಂಬಲಿಗರ ಸಂತೋಷ, ಸಂಭ್ರಮ ಮುಗಿಲು ಮುಟ್ಟಿದೆ. ಇನ್ನೂ ಈ ಕಾರ್ಯಕ್ರಮ, ಕೇಂದ್ರ ಬಿಜೆಪಿ ಪ್ರಮುಖ ನಾಯಕರು, ಗಣ್ಯರು, ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ಮಹಿಳಾ ಸಿಎಂ ಆಡಳಿತ ಬಗ್ಗೆ ಕೂತುಹಲದಲ್ಲಿದ್ದಾರೆ. ಅಲ್ಲದೇ ಈ ಹಿಂದೆ ಕಾಂಗ್ರೆಸ್, ಎಎಪಿಯಿಂದ ಮಹಿಳಾ ಸಿಎಂಗಳು ಇಲ್ಲಿ ಅಧಿಕಾರ ನಡೆಸಿದ್ದಾರೆ. ಬಿಜೆಪಿಯಿಂದ ಮೊದಲ ಬಾರಿಗೆ ಮಹಿಳಾ ಸಿಎಂ ಅಧಿಕಾರ ನಡೆಸಲಿದ್ದಾರೆ. ಚುನಾವಣೆ ಮೊದಲು ನೀಡಿದ್ದ ಹಲವು ಭರವಸೆಗಳು ಸಾಕಾರಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 70 ಸೀಟುಗಳಿಗೆ 48 ಬಿಜೆಪಿ ಪಾಲಾದರೆ, 20 ಆಮ್ ಆದ್ಮಿ ಪಕ್ಷದ ಪಾಲಾಗಿವೆ. ಕಾಂಗ್ರೆಸ್ ಗೆ ಹ್ಯಾಟ್ರಿಕ್ ಸೋಲಾಗಿದೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications