ಬಿಜೆಪಿ ಚುನಾವಣಾ ಪ್ರಣಾಳಿಕೆ ಮುಖ್ಯಾಂಶಗಳು
ನವದೆಹಲಿ, ಏ.7: ಭಾರತೀಯ ಜನತಾ ಪಕ್ಷ ಕೊನೆಗೂ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಪ್ರಕಟ ಮಾಡಿದೆ. 'ಏಕ್ ಭಾರತ್, ಶ್ರೇಷ್ಠ ಭಾರತ್'' ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ಹತ್ತು ಹಲವು ಭರವಸೆಗಳನ್ನು ಮತದಾರರ ಮುಂದಿಟ್ಟಿದೆ.
ಲೋಕಸಭೆ ಚುನಾವಣೆಗೆ ಸೋಮವಾರದಿಂದ ಮತದಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸದ್ಯಕ್ಕೆ ಸಾಧ್ಯವಿಲ್ಲ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಮೊದಲ ಹಂತದ ಮತದಾನ ನಡೆಯುತ್ತಿರುವ ಅಸ್ಸಾಂ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಪ್ರಣಾಳಿಕೆಯ ಅಂಶಗಳನ್ನು ಪ್ರಸಾರ ಮಾಡಬಾರದು ಎಂಬ ಚುನಾವಣಾ ಆಯೋಗ ಷರತ್ತಿನೊಂದಿಗೆ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. [ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ]

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು, ಉತ್ತಮ ಆಡಳಿತ, ದೇಶದ ಅಭಿವೃದ್ಧಿ ನಮ್ಮ ಗುರಿ.ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದ್ದು, ದೇಶದ ಭವಿಷ್ಯ ಪ್ರಣಾಳಿಕೆಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದ್ದಾರೆ
ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಶಿ, ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. [ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಮುಖ್ಯಾಂಶ]
ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು:
* ಕಾಶ್ಮೀರದಲ್ಲಿರುವ ಪಂಡಿತರಿಗೆ ಸೂಕ್ತವಾದ ಭದ್ರತೆ, ನೆಲೆ ಒದಗಿಸುವುದು
* ಕಪ್ಪು ಹಣ ವಾಪಸ್ ತರಲು ಟಾಸ್ಕ್ ಪೋರ್ಸ್ ರಚನೆ
* ಸಂವಿಧಾನದ ಅಡಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ
* ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು, ಪ್ರತಿ ರಾಜ್ಯದಲ್ಲಿ ಮಹಿಳೆಯರಿಗಾಗಿ ವಿಶೇಷ ಪೊಲೀಸ್ ಪಡೆ ರಚನೆ
* ಪ್ರತಿ ಗ್ರಾಮದಲ್ಲೂ ಕುಡಿಯುವ ನೀರು ಒದಗಿಸಲಾಗುವುದು.
* ಮಲ ಹೊರುವ ಪದ್ಧತಿ ಸಂಪೂರ್ಣ ನಿರ್ಮೂಲನೆ.
* ದೇಶದಲ್ಲಿ ಹೊಸದಾಗಿ ನೂರು ನಗರಗಳ ನಿರ್ಮಾಣ.
* ಮದರಾಸಗಳ ಆಧುನೀಕರಣ, ಗಳಲ್ಲಿ ಗಣಿತ ಹಾಗೂ ವಿಜ್ಞಾನ ಪಾಠಕ್ಕೆ ಒತ್ತು,
* ಪ್ರತಿ ರಾಜ್ಯದಲ್ಲೂ AIIMS ಸ್ಥಾಪನೆ, ಹೊಸ ಆರೋಗ್ಯ ನೀತಿ
* ಸಾಗರ ಮಾಲ ಯೋಜನೆ ಅಡಿಯಲ್ಲಿ ಕರಾವಳಿ ಬಂದರುಗಳ ಜಾಲ ಸ್ಥಾಪನೆ.
* ತೆರಿಗೆ ಪದ್ಧತಿ ಸುಧಾರಣೆ, ತೆರಿಗೆ ಭಯೋತ್ಪಾದನೆ ನಿರ್ಮೂಲನೆ
* ಅಲ್ಪಸಂಖ್ಯಾತರಿಗೆ ಶಿಕ್ಷಣ ಹಾಗೂ ಕೈಗಾರಿಕೆಗಳಲ್ಲಿ ವಿಶೇಷ ಅವಕಾಶ.
* ಮಲ್ಟಿ ಬ್ರ್ಯಾಂಡ್ ರೀಟೈಲ್ ನಲ್ಲಿ ವಿದೇಶಿ ನೇರ ಬಂಡವಾಳ(ಎಫ್ ಡಿಐ) ಹೂಡಿಕೆಗೆ ಅವಕಾಶ ನೀಡುವುದಿಲ್ಲ.
* ಕೈಗಾರಿಕೆ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು
ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಸಂಪೂರ್ಣ ವಿವರ ಕೆಳಗಿದೆ :
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications