ಬಿಜೆಪಿ ಚುನಾವಣಾ ಪ್ರಣಾಳಿಕೆ ಮುಖ್ಯಾಂಶಗಳು
ನವದೆಹಲಿ, ಏ.7: ಭಾರತೀಯ ಜನತಾ ಪಕ್ಷ ಕೊನೆಗೂ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಪ್ರಕಟ ಮಾಡಿದೆ. 'ಏಕ್ ಭಾರತ್, ಶ್ರೇಷ್ಠ ಭಾರತ್'' ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ಹತ್ತು ಹಲವು ಭರವಸೆಗಳನ್ನು ಮತದಾರರ ಮುಂದಿಟ್ಟಿದೆ.
ಲೋಕಸಭೆ ಚುನಾವಣೆಗೆ ಸೋಮವಾರದಿಂದ ಮತದಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಸದ್ಯಕ್ಕೆ ಸಾಧ್ಯವಿಲ್ಲ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಮೊದಲ ಹಂತದ ಮತದಾನ ನಡೆಯುತ್ತಿರುವ ಅಸ್ಸಾಂ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಪ್ರಣಾಳಿಕೆಯ ಅಂಶಗಳನ್ನು ಪ್ರಸಾರ ಮಾಡಬಾರದು ಎಂಬ ಚುನಾವಣಾ ಆಯೋಗ ಷರತ್ತಿನೊಂದಿಗೆ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. [ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ]

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು, ಉತ್ತಮ ಆಡಳಿತ, ದೇಶದ ಅಭಿವೃದ್ಧಿ ನಮ್ಮ ಗುರಿ.ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗಿದ್ದು, ದೇಶದ ಭವಿಷ್ಯ ಪ್ರಣಾಳಿಕೆಯಲ್ಲಿ ಬಿಂಬಿತವಾಗಿದೆ ಎಂದು ಹೇಳಿದ್ದಾರೆ
ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಶಿ, ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. [ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಮುಖ್ಯಾಂಶ]
ಬಿಜೆಪಿ ಪ್ರಣಾಳಿಕೆಯ ಮುಖ್ಯಾಂಶಗಳು:
* ಕಾಶ್ಮೀರದಲ್ಲಿರುವ ಪಂಡಿತರಿಗೆ ಸೂಕ್ತವಾದ ಭದ್ರತೆ, ನೆಲೆ ಒದಗಿಸುವುದು
* ಕಪ್ಪು ಹಣ ವಾಪಸ್ ತರಲು ಟಾಸ್ಕ್ ಪೋರ್ಸ್ ರಚನೆ
* ಸಂವಿಧಾನದ ಅಡಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ
* ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು, ಪ್ರತಿ ರಾಜ್ಯದಲ್ಲಿ ಮಹಿಳೆಯರಿಗಾಗಿ ವಿಶೇಷ ಪೊಲೀಸ್ ಪಡೆ ರಚನೆ
* ಪ್ರತಿ ಗ್ರಾಮದಲ್ಲೂ ಕುಡಿಯುವ ನೀರು ಒದಗಿಸಲಾಗುವುದು.
* ಮಲ ಹೊರುವ ಪದ್ಧತಿ ಸಂಪೂರ್ಣ ನಿರ್ಮೂಲನೆ.
* ದೇಶದಲ್ಲಿ ಹೊಸದಾಗಿ ನೂರು ನಗರಗಳ ನಿರ್ಮಾಣ.
* ಮದರಾಸಗಳ ಆಧುನೀಕರಣ, ಗಳಲ್ಲಿ ಗಣಿತ ಹಾಗೂ ವಿಜ್ಞಾನ ಪಾಠಕ್ಕೆ ಒತ್ತು,
* ಪ್ರತಿ ರಾಜ್ಯದಲ್ಲೂ AIIMS ಸ್ಥಾಪನೆ, ಹೊಸ ಆರೋಗ್ಯ ನೀತಿ
* ಸಾಗರ ಮಾಲ ಯೋಜನೆ ಅಡಿಯಲ್ಲಿ ಕರಾವಳಿ ಬಂದರುಗಳ ಜಾಲ ಸ್ಥಾಪನೆ.
* ತೆರಿಗೆ ಪದ್ಧತಿ ಸುಧಾರಣೆ, ತೆರಿಗೆ ಭಯೋತ್ಪಾದನೆ ನಿರ್ಮೂಲನೆ
* ಅಲ್ಪಸಂಖ್ಯಾತರಿಗೆ ಶಿಕ್ಷಣ ಹಾಗೂ ಕೈಗಾರಿಕೆಗಳಲ್ಲಿ ವಿಶೇಷ ಅವಕಾಶ.
* ಮಲ್ಟಿ ಬ್ರ್ಯಾಂಡ್ ರೀಟೈಲ್ ನಲ್ಲಿ ವಿದೇಶಿ ನೇರ ಬಂಡವಾಳ(ಎಫ್ ಡಿಐ) ಹೂಡಿಕೆಗೆ ಅವಕಾಶ ನೀಡುವುದಿಲ್ಲ.
* ಕೈಗಾರಿಕೆ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು
ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಸಂಪೂರ್ಣ ವಿವರ ಕೆಳಗಿದೆ :
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications