ಲೋಕಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಖರ್ಚು ಮಾಡಿದ ಹಣದ ಲೆಕ್ಕ
Recommended Video
ನವದೆಹಲಿ, ಜನವರಿ 16: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಖರ್ಚು ಮಾಡಿರುವ ಹಣದ ಲೆಕ್ಕವನ್ನು ಆಯೋಗವು ಬಹಿರಂಗಪಡಿಸಿದೆ.
ಲೋಕಸಭೆ ಚುನಾವಣೆಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗಿಂತಲೂ ಬಿಜೆಪಿ ಅತಿ ಹೆಚ್ಚು ಹಣವನ್ನು ಖರ್ಚು ಮಾಡಿದೆ. ಎರಡನೇ ಸ್ಥಾನ ಕಾಂಗ್ರೆಸ್ಗೆ.
2019 ರ ಲೋಕಸಭೆ ಚುನಾವಣೆ ಮತ್ತು ಏಪ್ರಿಲ್-ಮೇ ನಲ್ಲಿ ನಡೆದ ನಾಲ್ಕು ವಿಧಾನಸಭೆ ಚುನಾವಣೆಗೆ ಬಿಜೆಪಿ ಬರೋಬ್ಬರಿ 1284 ಕೋಟಿ ರೂಪಾಯಿ ಹಣ ಖರ್ಚು ಮಾಡಿದೆ. ಎರಡನೇ ಸ್ಥಾನದಲ್ಲಿರುವ ಕಾಂಗ್ರೆಸ್ ಖರ್ಚು ಮಾಡಿರುವುದು 820 ಕೋಟಿ.

ಹಣಕಾಸು ವೆಚ್ಚದ ಖರ್ಚನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆ ಆಯೋಗಕ್ಕೆ ನೀಡಿದ್ದು, ಈ ಮಾಹಿತಿ ಪ್ರಕಾರ ಬಿಜೆಪಿಯು ಚುನಾವಣೆ ಸಮಯ ಪ್ರಚಾರಕ್ಕೆ 1078 ಕೋಟಿ. ಅಭ್ಯರ್ಥಿಗಳಿಗೆಂದು 180.5 ಕೋಟಿ, ಮಾಧ್ಯಮಗಳಿಗೆ 6.33 ಲಕ್ಷ, ಪ್ರಚಾರ ಸಾಮಗ್ರಿಗಳಿಗೆ 46 ಲಕ್ಷ, ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳಿಗೆ 9.91 ಕೋಟಿ, ಇತರೆ ಖರ್ಚು 2.52 ಕೋಟಿ ಮತ್ತು ಅಭ್ಯರ್ಥಿಗಳ ಮೇಲಿನ ಅಪರಾಧ ಪ್ರಕರಣಗಳ ಜಾಹೀರಾತಿಗೆ 48.96 ಲಕ್ಷ ಖರ್ಚು ಮಾಡಲಾಗಿದೆ.
2014 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಯು 714 ಕೋಟಿಖರ್ಚು ಮಾಡಿತ್ತು. ಅದು ಈ ಬಾರಿ 77 % ಹೆಚ್ಚಾಗಿದೆ. ಬಿಜೆಪಿಯ ಆದಾಯವೂ ಸಹ 137% ಹೆಚ್ಚಾಗಿದೆ.ಸ
ಲೋಕಸಭೆ ಚುನಾವಣೆ ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಸಾ, ಸಿಕ್ಕಿಂ ವಿಧಾನಸಭೆ ಚುನಾವಣೆಗೆ ಬಿಜೆಪಿಯ ಕೇಂದ್ರ ಕಚೇರಿಯಿಂದಲೇ 755 ಕೋಟಿ ಹಣ ಖರ್ಚು ಮಾಡಲಾಗಿದೆ. 175 ಕೋಟಿಯನ್ನು ಸ್ಟಾರ್ ಪ್ರಚಾರಕರಿಗಾಗಿ, ಮಾಧ್ಯಮಗಳ ಜಾಹೀರಾತಿಗಾಗಿ 325 ಕೋಟಿ, ಪ್ರಚಾರ ವಸ್ತುಗಳಿಗಾಗಿ 25.40 ಕೋಟಿ, 15.91 ಕೋಟಿ ಹಣ ಸಭೆಗಳಿಗಾಗಿ ಮತ್ತು 212.72 ಕೋಟಿಯನ್ನು 'ಇತರೆ' ಕಾರಣಗಳಿಗಾಗಿ ಖರ್ಚು ಮಾಡಲಾಗಿದೆ. ಈ ಖರ್ಚು ಬಿಜೆಪಿ ಕೇಂದ್ರ ಕಚೇರಿಯಿಂದ ಆಗಿದೆ.
ಇನ್ನು ಕಾಂಗ್ರೆಸ್ ಪಕ್ಷವು 2014 ರ ಲೋಕಸಭೆ ಚುನಾವಣೆಯಲ್ಲಿ 516 ಕೋಟಿ ಖರ್ಚು ಮಾಡಿತ್ತು. 2019 ರ ಚುನಾವಣೆಯಲ್ಲಿ 820 ಕೋಟಿ ಖರ್ಚು ಮಾಡಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications