ನಿರ್ಮಲಾ ಸೀತಾರಾಮನ್ಗೆ ಹಣಕಾಸು ಖಾತೆ ನೀಡದಂತೆ ಬಿಜೆಪಿ ಬೆಂಬಲಿಗರಿಂದಲೇ ಆಗ್ರಹ
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಸಜ್ಜಾಗಿದ್ದಾರೆ. ಭಾನುವಾರ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಜೊತೆಗೆ ಕನಿಷ್ಠ 30 ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ನಿರ್ಮಲಾ ಸೀತಾರಾಮನ್ ಕೂಡ ಸಚಿವ ಸ್ಥಾನ ಪಡೆಯಲಿದ್ದು, ಹಣಕಾಸು ಸಚಿವೆಯಾಗಿ ಮುಂದುವರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಲು ಬಿಜೆಪಿ ಬೆಂಬಲಿಗರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ತೆರಿಗೆ, ಬೆಲೆ ಏರಿಕೆ, ಜನರ ಕೋಪಕ್ಕೆ ಕಾರಣವಾಗಿದೆ. ಹಲವು ಕಾರಣಗಳಿಂದ ಬಿಜೆಪಿ ಈ ಬಾರಿ ಬಹುಮತ ಕಳೆದುಕೊಂಡಿದ್ದು, ಮಿತ್ರ ಪಕ್ಷಗಳ ಬೆಂಬಲದಿಂದ ಸರ್ಕಾರ ರಚನೆ ಮಾಡುತ್ತಿದೆ.
ವಿರೋಧ ಏಕೆ?
ನಿರ್ಮಲಾ ಸೀತಾರಾಮನ್ ನೀಡುತ್ತಿದ್ದ ಹೇಳಿಕೆಗಳು ದೇಶದ ಮಧ್ಯಮ ವರ್ಗದ ಜನರನ್ನು ಕೆರಳಿಸಿವೆ. ಬೆಲೆ ಏರಿಕೆ ಬಗ್ಗೆ ಮಾಧ್ಯಮಗಳು ಕೇಳುತ್ತಿದ್ದ ಪ್ರಶ್ನೆಗಳಿಗೆ ನಿರ್ಮಲಾ ಸೀತಾರಾಮನ್ ಹಲವು ಬಾರಿ ಉದ್ಧಟತನದಿಂದ ಉತ್ತರ ನೀಡುತ್ತಿದ್ದರು.
I don't care who gets which ministries but Nirmala Sitharaman should not become finance minister again or get ready to another 28% GST on your seats.She was unable to answer even one question and said the sleeping partner couldn't answer that's your accountability
— Manjeet Singh Khatana Shahpura (@Manjeet79367960) June 9, 2024
#ModiCabinet pic.twitter.com/SMw7V3TWOK
ಕರ್ನಾಟಕದ ವಿಚಾರಕ್ಕೆ ಬಂದರೆ ಸ್ವತಃ ಹಣಕಾಸು ಸಚಿವೆಯೇ ಬರಪರಿಹಾರ ಬಿಡುಗಡೆ ವಿಚಾರದಲ್ಲಿ ಸುಳ್ಳು ಹೇಳಿ ಬಳಿಕ ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡಿದ್ದರು.
ಬಿಜೆಪಿಗೆ ಹಿನ್ನಡೆಯಾಗಲು ನಿರ್ಮಲಾ ಕೂಡ ಕಾರಣ!
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ನಿರ್ಮಲಾ ಸೀತಾರಾಮನ್ ಕೂಡ ಕಾರಣ ಎಂದು ಬಿಜೆಪಿ ಬೆಂಬಲಿಗರು ಅಭಿಪ್ರಾಯಪಟ್ಟಿದ್ದಾರೆ. ಕೆಲಸ ಮಾಡುವ ಮಧ್ಯಮ ವರ್ಗವನ್ನು ಕಡೆಗಣಿಸಿದ್ದೇ ಈ ಸೋಲಿಗೆ ಪ್ರಮುಖ ಕಾರಣಗಳಲ್ಲಿ ಒಂದು ಎನ್ನುವ ವಾದ ಕೂಡ ಇದೆ.
Ashwini Vaishnaw and Nirmala Sitharaman need to be sacked from Railway and Finance Ministry asap in new government cabinet distribution or so called Modi 3.0
— Bruce Wayne (@_Bruce__007) June 9, 2024
Two of the worst cabinet ministers in the history of Indian Politics👎🏻#ModiCabinet pic.twitter.com/ulVXRRnOKZ
ಈರುಳ್ಳಿ ಬೆಲೆ ಗಗನಕ್ಕೇರಿದ್ದಾಗ ನಾನು ಈರುಳ್ಳಿ ತಿನ್ನುವುದಿಲ್ಲ ಎನ್ನುವಂತಹ ಬಾಲಿಶ ಹೇಳಿಕೆಗಳನ್ನು ನೀಡಿ ಜನರ ಸಿಟ್ಟಿಗೆ ತುತ್ತಾಗಿದ್ದರು. ಕರ್ನಾಟಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಹೇಳಿ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಕೂಡ ಹಾಕಿದ್ದರು. ಆದರೆ ನಿರ್ಮಲಾ ಸೀತಾರಾಮನ್ ಮಾತ್ರ ಜನರ ಕಷ್ಟವನ್ನು, ದುಡಿಯುವ ವರ್ಗದ ಸಿಟ್ಟನ್ನು ಅರ್ಥ ಮಾಡಿಕೊಳ್ಳಲಿಲ್ಲ ಎಂದು ಸ್ವತಃ ಬಿಜೆಪಿ ಬೆಂಬಲಿಗರೇ ಹೇಳುತ್ತಿದ್ದಾರೆ.
Narendra Modi has once again appointed #ModiCabinet chief Nirmala Sitharaman as Finance Minister.
— Choudhary3 (@kavya_choudhar3) June 9, 2024
This place should be made better by Piyush Goyal.
18% tax was imposed on education in the previous tenure.
Don't know how much it will cost this time
I totally disagree with this. pic.twitter.com/fwErHYKVd8
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications