ಮಧ್ಯಪ್ರದೇಶದಲ್ಲಿ 7 ಸಂಸದರು, 3 ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್: ಪಟ್ಟಿಯಲ್ಲಿ ಸಿಎಂ ಚೌಹಾಣ್ ಹೆಸರೇ ಇಲ್ಲ
ಭೋಪಾಲ್, ಸೆಪ್ಟೆಂಬರ್ 26: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಕೆಲ ತಿಂಗಳಲ್ಲಿ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆಗೆ ತಯಾರಿ ನಡೆಸಿವೆ. ಬಿಜೆಪಿಯು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲೂ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಸರು ಕಂಡುಬಂದಿಲ್ಲ. ಇದು ರಾಜಕೀಯದಲ್ಲಿ ಹಲವು ಬಗೆಯ ಚರ್ಚೆಗಳನ್ನು ಹುಟ್ಟುಹಾಕಿದೆ.
ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪ್ರಬಲ ಪ್ರಾದೇಶಿಕ ನಾಯಕರ ( ಶಿವರಾಜ್ ಸಿಂಗ್ ಚೌಹಾನ್ ಹೊರತುಪಡಿಸಿ ) ಮೊರೆಹೋಗಿದೆ. ಚೌಹಾಣ್ ಜನಪ್ರಿಯತೆ ದಿನೇದಿನೇ ಕುಸಿಯುತ್ತಿದೆ ಎಂಬುದು ಬಿಜೆಪಿ ಹೈಕಮಾಂಡ್ ತಲೆನೋವಾಗಿ ಪರಿಣಮಿಸಿದೆ.

ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇರುವುದು ಬಿಜೆಪಿ ಉನ್ನತ ನಾಯಕರ ಗಮನಕ್ಕೆ ಬಂದಿದೆ. ಪ್ರಧಾನಿ ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಂಡರೂ, ಪಕ್ಷಕ್ಕೆ ಹೆಚ್ಚು ಲಾಭವಾಗದು ಎಂಬ ಮಾತುಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಮುನ್ನೆಲೆಗೆ ತರಲು ಬಿಜೆಪಿ ನಾಯಕರು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.
ಕರ್ನಾಟಕ ಹಾಗೂ ಗುಜರಾತ್ ಪ್ರಯೋಗವನ್ನೇ ಪುನರಾವರ್ತಿಸಲು ಬಿಜೆಪಿ ಮುಂದಾಗಿದೆ. ಒಟ್ಟು 230 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ ಹೊಸಬರಿಗೂ ಆಧ್ಯತೆ ನೀಡಲಾಗಿದೆ. ಆದರೆ, ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರದ ಕೇಂದ್ರಬಿಂದು ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ಪ್ರಧಾನಿ ಮೋದಿಯವರು ಭೋಪಾಲ್ಗೆ ಭೇಟಿ ನೀಡಿದ ಕೆಲವೇ ಗಂಟೆಗಳ ನಂತರ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅಚ್ಚರಿಕರ ಸಂಗತಿಯೆಂದರೆ, ಈ ಪಟ್ಟಿಯಲ್ಲಿ ಏಳು ಲೋಕಸಭಾ ಸದಸ್ಯರನ್ನು ಬಿಜೆಪಿ ಕಣಕ್ಕಿಳಿಸಿದೆ. ಈ ಏಳು ಸಂಸದರಲ್ಲಿ ಮೂವರು ಕೇಂದ್ರ ಮಂತ್ರಿಗಳಾಗಿದ್ದಾರೆ. ಈ ಪಟ್ಟಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಹೆಸರೂ ಇದೆ.
ಮೂವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಸ್ಪರ್ಧೆಯಲ್ಲಿದ್ದಾರೆ.
ಆಡಳಿತ ಪಕ್ಷವಾಗಿರುವ ಬಿಜೆಪಿ ಹಿರಿಯ ಪ್ರಾದೇಶಿಕ ನಾಯಕರ ನಡುವೆ ಸಮತೋಲನವನ್ನು ಸಾಧಿಸಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ನಿರ್ದಿಷ್ಟ ಪ್ರದೇಶಗಳು ಮತ್ತು ಜಾತಿಗಳ ಜೊತೆಗೆ ಗುರುತಿಸಿಕೊಂಡಿರುವ ನಾಯಕರಿಗೆ ಮಣೆ ಹಾಕಲು ಯತ್ನಿಸುತ್ತಿದೆ.

ಏಳು ಹಾಲಿ ಸಂಸದರನ್ನು ಕಣಕ್ಕಿಳಿಸುವ ಮೂಲಕ, ಪಕ್ಷವು ದುರ್ಬಲ ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರಬಲ ನಾಯಕರ ಉಪಸ್ಥಿತಿಯು ಅಕ್ಕಪಕ್ಕದ ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರುವ ನಿರೀಕ್ಷೆಯನ್ನು ಬಿಜೆಪಿ ನಾಯಕರು ಇಟ್ಟುಕೊಂಡಿದ್ದಾರೆ.
ಕಾಂಗ್ರೆಸ್ ನಾಯಕ ಕಮಲ್ ನಾಥ್ ಹೇಳಿದ್ದೇನು?
ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು, 'ಬಿಜೆಪಿ ಈಗಾಗಲೇ ಸೋಲನ್ನು ಒಪ್ಪಿಕೊಂಡಿದೆ' ಎಂದು ಹೇಳಿದ್ದಾರೆ.
ಹದಿನೈದು ವರ್ಷಗಳ ಕಾಲ ಶಿವರಾಜ್ ಸಿಂಗ್ ಚೌಹಾನ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾರೆ. ಅವರ ಆಡಳಿತವು ಮಧ್ಯಪ್ರದೇಶದ ಕೋಟ್ಯಂತರ ಜನರಿಗೆ ಬೇಸರ ತರಿಸಿದೆ. ಅವರು ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಬಿಜೆಪಿಗೆ ಸೋಲು ಖಚಿತವಾಗಿದೆ. ಇದು ಆ ಪಕ್ಷದ ಆಂತರಿಕ ಸಮೀಕ್ಷೆಯಲ್ಲೂ ಬಹಿರಂಗಗೊಂಡಿದೆ ಎಂದು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications