Jammu & Kashmir Poll: ಕಾಶ್ಮೀರದ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ; ಬಿಜೆಪಿ ಅಧಿಕೃತ ಘೋಷಣೆ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದೆ. ಮೂರನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದ್ದು, ಕಾಶ್ಮೀರ ಭಾಗದಲ್ಲಿ ಬಿಜೆಪಿ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡುವುದಾಗಿ ಸ್ಪಷ್ಟನೆ ನೀಡಿದೆ. ಬುಧವಾರ ಸಂಜೆ ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ಕಾಶ್ಮೀರಕ್ಕೆ ಯಾವುದೇ ಹೊಸ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 90 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲಿ ಕಾಶ್ಮೀರದಲ್ಲಿ 47 ಕ್ಷೇತ್ರಗಳು ಬರಲಿವೆ. ಈಗ ಇಲ್ಲಿ 19 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದರೆ ಉಳಿದ 28 ಕ್ಷೇತ್ರಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವ ಬಗ್ಗೆ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು.
ಪಕ್ಷದಲ್ಲಿ ಭಿನ್ನಮತ ಸಾಧ್ಯತೆ
ಟಿಕೆಟ್ ಹಂಚಿಕೆ ವಿಚಾರವೇ ಇದೀಗ ಬಿಜೆಪಿಗೆ ದೊಡ್ಡ ತಲೆನೋವಾಗುವ ಸಾಧ್ಯತೆ ಇದೆ. 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುವ ಕಾರಣ ಉಳಿದ 28 ಕ್ಷೇತ್ರಗಳ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಇದರಿಂದ ಬೇರೆ ಪಕ್ಷಗಳಿಗೆ ಸೇರುವ ಅಥವಾ ಆಂತರಿಕ ಭಿನ್ನಾಭಿಪ್ರಾಯಗಳು ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾಗುವ ಆತಂಕ ಕೂಡ ಇದೆ.
ಮುಖ್ಯವಾಗಿ ಅಮಿತ್ ಶಾ ಕಾಶ್ಮೀರಕ್ಕೆ ಭೇಟಿ ನೀಡಿ ಪಕ್ಷದ ನಾಯಕರ ಜೊತೆ ಸಂವಾಸ ಮಾಡುವ ವೇಳೆ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದರು. ಜಮ್ಮು ಪ್ರಾಂತ್ಯದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 90 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಚುನಾವಣೆಗೆ ಸಜ್ಜಾಗಲು ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದ್ದರು.
ಆದರೆ ಬಿಜೆಪಿ ಇದೀಗ ಕಾಶ್ಮೀರದಲ್ಲಿ 19 ಸ್ಥಾನಗಳಲ್ಲಿ ಮಾತ್ರ ಸ್ಪರ್ಧೆಗೆ ಒಪ್ಪಿಕೊಂಡಿದ್ದೇಕೆ ಎನ್ನುವ ಪ್ರಶ್ನೆಗ ಉತ್ತರ ಸಿಕ್ಕಿಲ್ಲ. ಇದೊಂದು ರಾಜಕೀಯ ತಂತ್ರವಾಗಿದ್ದು ಗೆಲ್ಲುವ ಸಾಧ್ಯತೆ ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲು ಸಜ್ಜಾಗಿದೆ ಎನ್ನಲಾಗಿದೆ.
ಕಾಶ್ಮೀರದಲ್ಲಿ ಬಿಜೆಪಿಯ ಪ್ರತಿಸ್ಪರ್ಧಿಗಳಾದ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಆರೋಪಿಸಿದ್ದು, ಬಿಜೆಪಿಯು ತಮ್ಮ ಮತಗಳನ್ನು ಕಡಿಮೆ ಮಾಡಲು ನಕಲಿ ಸ್ವತಂತ್ರ ಅಭ್ಯರ್ಥಿಗಳು ಮತ್ತು ಸಣ್ಣ ಪಕ್ಷಗಳನ್ನು ಪ್ರಾಯೋಜಿಸುತ್ತಿದೆ ಎಂದು ಹೇಳಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications