ಕುತೂಹಲ ಕೆರಳಿಸಿರುವ ಹಿಮಾಚಲ ಸಿಎಂ ಆಯ್ಕೆ
ಶಿಮ್ಲಾ, ಡಿಸೆಂಬರ್ 22: ಹಿಮಾಚಲ ಪ್ರದೇಶ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದ್ದು, ಶುಕ್ರವಾರ ಸಂಜೆ ವೇಳೆಗೆ ಬಿಜೆಪಿ ವೀಕ್ಷಕರು ಹೆಸರು ಘೋಷಿಸುವ ಸಾಧ್ಯತೆಯಿದೆ.
ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರೇಮ್ ಕುಮಾರ್ ಧುಮಾಲ್ ಅವರು ಸೋಲು ಕಂಡಿದ್ದು, ಬಿಜೆಪಿಗೆ ಕೊಂಚ ಹಿನ್ನಡೆಯಾಗಿತ್ತು. ಹೀಗಾಗಿ, ಮುಖ್ಯಮಂತ್ರಿ ಆಯ್ಕೆ ಸ್ವಲ್ಪ ವಿಳಂಬವಾಗಿತ್ತು. ಆದರೆ, ಕಳೆದೆರಡು ದಿನಗಳಿಂದ ಸಿಎಂ ಆಯ್ಕೆ ಪ್ರಕ್ರಿಯೆ ಬಿರುಸುಗೊಂಡಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ತೋಮಾರ್ ಅವರು ಹಿಮಾಚಲಕ್ಕೆ ಬಂದಿದ್ದು, ಸಿಎಂ ಆಯ್ಕೆಯ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.
ಈ ನಡುವೆ ಪ್ರೇಮ್ ಕುಮಾರ್ ಧುಮಾಲ್ ಪರ -ವಿರೋಧ ಪ್ರತಿಭಟನೆ ನಡೆಸಲಾಗಿದೆ. ಎರಡು ಅವಧಿಗೆ ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಸಿಎಂ ಪ್ರೇಮ್ ಕುಮಾರ್ ಪರ ಲಾಬಿ ಬಲವಾಗುತ್ತಿದೆ. ಮೂರು ಶಾಸಕರು ತಮ್ಮ ಸ್ಥಾನವನ್ನು ಬಿಟ್ಟು ಕೊಡಲು ಸಿದ್ಧ ಎಂದು ಘೋಷಿಸಿದ್ದಾರೆ.
ಇನ್ನೊಂದೆಡೆ, ಚುನಾಯಿತ ಪ್ರತಿನಿಧಿಯೊಬ್ಬರನ್ನು ಸಿಎಂ ಸ್ಥಾನದಲ್ಲಿ ಕೂರಿಸುವಂತೆ ಕೋರಿ ಪ್ರತಿಭಟನೆ ನಡೆಸಲಾಗಿದೆ. ಧುಮಾಲ್ಗೂ ಮೊದಲು ಜೆಪಿ ನಡ್ಡಾ ಹೆಸರು ಸಿಎಂ ರೇಸ್ನಲ್ಲಿ ಕೇಳಿಬಂದಿತ್ತು. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಮಾಡಲಾಯಿತು.
BJP observers Nirmala Sitharaman. Narendra Singh Tomar and party in-charge for #Himachal Mangal Pandey held a meeting with RSS leaders in Shimla, today pic.twitter.com/KP9H3EcrXB
— ANI (@ANI) December 22, 2017
ಸುಜಾನ್ಪುರ್ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ರಾಜೇಂದ್ರ ಸಿಂಗ್ ರಾಣಾ ಗೆಲುವು ಸಾಧಿಸಿದ್ದು ಈಗ ಇತಿಹಾಸ. 68 ಸ್ಥಾನಗಳಲ್ಲಿ 44 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಅಧಿಕಾರ ಸ್ಥಾಪನೆಯ ಹಕ್ಕು ಮಂಡನೆಗೆ ಮುಂದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications