One Nation One Election: ಕಲಾಪಕ್ಕೆ ಗೈರಾದ ನಿತಿನ್ ಗಡ್ಕರಿ, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ 20 ಸಂಸದರಿಗೆ ಬಿಜೆಪಿ ನೋಟಿಸ್
ಹೊಸದಿಲ್ಲಿ,ಡಿಸೆಂಬರ್ 20: ' ಒಂದು ದೇಶ ಒಂದು ಚುನಾವಣೆ' ಮಸೂದೆ ಮಂಡನೆಗಗಿನ ಮತದಾನದ ವೇಳೆ ಪಕ್ಷದ ವಿಪ್ ಹೊರತಾಗಿಯೂ ಲೋಕಸಭೆಗೆ ಗೈರಾಗಿದ್ದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಒಟ್ಟು 18 ಸಂಸದರಿಗೆ ವಿವರಣೆ ಕೋರಿ ಬಿಜೆಪಿ ನೋಟಿಸ್ ಜಾರಿಗೊಳಿಸಿದೆ.
ಮಂಗಳವಾರ ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ' ಮಸೂದೆ ಮಂಡನೆಗಾಗಿ ನಡೆದ ಮತದಾನದ ವೇಳೆ ಆಡಳಿತಾರೂಢ ಬಿಜೆಪಿಯ 20 ಸಂಸದರು ಸದನಕ್ಕೆ ಗೈರಾಗಿದ್ದುದರಿಂದ, ಬಿಜೆಪಿ ಮುಜುಗರಕ್ಕೀಡಾಯಿತು. 'ಒಂದು ದೇಶ ಒಂದು ಚುನಾವಣೆ' ಮಸೂದೆಗೆ ಆಡಳಿತಾರೂಢ ಬಿಜೆಪಿಯಲ್ಲೇ ಸಹಮತವಿಲ್ಲ ಎಂದು ವಿಪಕ್ಷಗಳ ಟೀಕೆಯಿಂದ ಬಿಜೆಪಿ ಮುಜುಗರಕ್ಕಿಡಾಗಿದೆ. ಹೀಗಾಗಿ ಲೋಕಸಭೆಗೆ ಎಲ್ಲರೂ ಕಡ್ಡಾಯವಾಗಿ ಹಾಜರಾಗಬೇಕು ಎಂದು ವಿಪ್ ಜಾರಿಗೊಳಿಸಿದ್ದರೂ, ಲೋಕಸಭೆಗೆ ಗೈರಾಗಿದ್ದ ಎಲ್ಲ 20 ಮಂದಿಗೆ ಬಿಜೆಪಿ ನೋಟಿಸ್ ಜಾರಿಗೊಳಿಸಿದೆ.

ಲೋಕಸಭೆಯಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಬಿಲ್ ಮಂಡಿಸುವ ವೇಳೆ ಗೈರಾದ ಕಾರಣಕ್ಕೆ ಹಲವು ಬಿಜೆಪಿ ಸಂಸದರನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಿತಿನ್ ಗಡ್ಕರಿ, ಗಿರಿರಾಜ್ ಸಿಂಗ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಒಟ್ಟು 20 ಸಂಸದರು ಗೈರಾಗಿದ್ರು. ಎಲ್ಲಾ ಸಂಸದರು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಪಕ್ಷವು ಮೂರು ಸಾಲಿನ ವಿಪ್ ಜಾರಿ ಮಾಡಿತ್ತು. ಆದರೆ, ಈಗ ಪಕ್ಷದ ಆದೇಶವನ್ನು ಧಿಕ್ಕರಿಸಿ ಗೈರುಹಾಜರಾದ ಸಂಸದರಿಗೆ ನೋಟಿಸ್ ಕಳುಹಿಸಲು ಬಿಜೆಪಿ ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.
ಒನ್ ನೇಷನ್, ಒನ್ ಎಲೆಕ್ಷನ್ ಬಿಲ್ ವಿವಾದಕ್ಕೀಡಾಗಿದ್ದು, ವಿರೋಧ ಪಕ್ಷಗಳಿಂದ ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗಿದೆ. ಟೀಕೆಗಳ ಹೊರತಾಗಿಯೂ, ಸಂವಿಧಾನದ (129 ನೇ ತಿದ್ದುಪಡಿ) ಮಸೂದೆಯನ್ನು ಸದನದಲ್ಲಿ ಮಂಡಿಸಿದ್ದು, ಮತದಾನದ ವೇಳೆ 269 ಪರವಾಗಿ ಮತ್ತು 198 ವಿರುದ್ಧವಾಗಿ ಮತ ಚಲಾಯಿಸಿದ್ದರು.
ಲೋಕಸಭೆಯಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಡಿಸಿದರು, ಅವರು ಮಸೂದೆಗೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯಗಳ ಸ್ವಾಯತ್ತತೆ ಅಥವಾ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು. ಮಸೂದೆಯು ಮೂಲಭೂತ ರಚನೆಯ ಸಿದ್ಧಾಂತವನ್ನು ಉಲ್ಲಂಘಿಸಿದೆ ಎಂಬ ವಿರೋಧದ ಹೇಳಿಕೆಗಳನ್ನು ಅರ್ಜುನ್ ರಾಮ್ ಅವರು ತಳ್ಳಿಹಾಕಿದರು ಮತ್ತು ಶಾಸನವು ಸಾಂವಿಧಾನಿಕ ತತ್ವಗಳಿಗೆ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಸದಸ್ಯ ಮನೀಶ್ ತಿವಾರಿ ಅವರು, ಮಸೂದೆಯನ್ನು ಸಂವಿಧಾನದ ಕೆಲವು ವೈಶಿಷ್ಟ್ಯಗಳನ್ನು ಸಂಸತ್ತಿನ ತಿದ್ದುಪಡಿ ಅಧಿಕಾರವನ್ನು ಮೀರಿದ ಮೂಲಭೂತ ರಚನೆಯ ಸಿದ್ಧಾಂತದ ಮೇಲಿನ ಆಕ್ರಮಣ ಎಂದು ಕರೆದರು. ಒಂದು ಅತ್ಯಗತ್ಯ ವೈಶಿಷ್ಟ್ಯವೆಂದರೆ ನಮ್ಮ ಪ್ರಜಾಪ್ರಭುತ್ವದ ರಚನೆ. ಈ ಮಸೂದೆಗಳು ಸಂವಿಧಾನದ ಮೂಲ ರಚನೆಯ ಮೇಲೆ ಆಕ್ರಮಣ ಮಾಡುತ್ತವೆ ಎಂದು ತಿಳಿಸಿದರು.
ತೃಣಮೂಲ ಕಾಂಗ್ರೆಸ್ ಸದಸ್ಯ ಕಲ್ಯಾಣ್ ಬ್ಯಾನರ್ಜಿ ಅವರು ಮಾತನಾಡಿ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಅಥವಾ ಸಂಸತ್ತಿಗೆ ಅಧೀನವಾಗಿಲ್ಲ, ಮಸೂದೆಗಳು ರಾಜ್ಯ ವಿಧಾನಸಭೆಯ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತವೆ, ಇದು ಚುನಾವಣಾ ಸುಧಾರಣೆಯಲ್ಲ ಎಂದು ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications