2047ರ ತನಕ ಬಿಜೆಪಿಗೆ ಅಧಿಕಾರ ಎಂದು ರಾಮ್ ಮಾಧವ್ ಹೇಳಿದ್ದೇಕೆ?
ಅಗರ್ತಲ, ಜೂನ್ 09: 2047ರವರೆಗೂ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ವೇ ಅಧಿಕಾರದಲ್ಲಿರಲಿದೆ, ಉತ್ತಮ ಆಡಳಿತ ನೀಡಲಿದೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ವಿಶ್ವಾಸ ವ್ಯಕ್ತಪಡಿಸಿದ್ದು ತಿಳಿದಿರಬಹುದು. ಈ ರೀತಿ ಹೇಳಿಕೆ ನೀಡಲು ಕಾರಣವೇನು? ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ.
'ಕಾಂಗ್ರೆಸ್ಸಿನ ಆಡಳಿತ ಅವಧಿಯನ್ನು ಮೋದಿ ನೇತೃತ್ವದ ಬಿಜೆಪಿ ಮುರಿಯಲಿದೆ' ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. ತ್ರಿಪುರಾದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುತ್ತಾ, ಬಿಜೆಪಿ ಗೆಲ್ಲಲು ಈ ಬಾರಿ ಕಾರಣವಾದ ಅಂಶವೇ ಪಕ್ಷವನ್ನು ಮುನ್ನಡೆಸಲಿದೆ.

ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಬಾಲಾಕೋಟ್ ದಾಳಿ ಸೇರಿದಂತೆ ಮಿಲಿಟರಿ ಬಲವನ್ನು ಬಳಕೆ ಮಾಡಲಿಲ್ಲ. ನಮ್ಮ ಧ್ಯೇಯ ಉದ್ದೇಶ ಇದ್ದಿದ್ದು, ಸಾರ್ವಜನಿಕರಲ್ಲಿ ರಾಷ್ಟ್ರೀಯತೆ, ದೇಶಪ್ರೇಮದ ಜಾಗೃತಿ.
ರಾಷ್ಟ್ರೀಯತೆ ಎಂಬುದು ಬಿಜೆಪಿಯ ಡಿಎನ್ಎಯಲ್ಲೇ ಇದೆ. ಇದು ಬಿಜೆಪಿಯ ಅಸ್ಮಿತೆಯಾಗಿದೆ. ಚುನಾವಣೆ ಇರಲಿ, ಇಲ್ಲದಿರಲಿ, ಬಿಜೆಪಿಯೆಂದರೆ ರಾಷ್ಟ್ರೀಯತೆ, ರಾಷ್ಟ್ರೀಯತೆ ಎಂದರೆ ಬಿಜೆಪಿ ಇದೆ ಮುಂದಿನ ದಿನಗಳಲ್ಲಿ ದೇಶ ಹಾಗೂ ಪಕ್ಷದ ಬೆಳವಣಿಗೆಗೆ ಕಾರಣವಾಗಲಿದೆ ಎಂದಿದ್ದಾರೆ.
ನವಭಾರತ ನಿರ್ಮಿಸಲಿರುವ ಪ್ರಧಾನಿ ಮೋದಿಯವರ ಮೇಲೆ ವಿಶ್ವಾಸವಿಟ್ಟು, ಮತದಾರರು ಆದೇಶ ನೀಡಿದ್ದಾರೆ, ಅವರೆಲ್ಲರಿಗೂ ನಮ್ಮ ಅಭಿನಂದನೆ ಎಂದಿದ್ದಾರೆ. 2022ರ ವೇಳೆ ನಾವು ನಿರ್ಮಿಸುವ ನವಭಾರತದಲ್ಲಿ ಎಲ್ಲರಿಗೂ ಉದ್ಯೋಗ ಹಾಗೂ ಎಲ್ಲರಿಗೂ ವಸತಿ ದೊರಕಲಿದೆ, ಮುಂದಿನ ಬಜೆಟ್ ನಲ್ಲೂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ ಎಂದರು. ಸ್ವತಂತ್ರ ಭಾರತದ ಚರಿತ್ರೆಯಲ್ಲೇ 1950ರಿಂದ 1977ರವರೆಗೆ ನಿರಂತರವಾಗಿ ಆಡಳಿತ ನಡೆಸುವ ಮೂಲಕ ಕಾಂಗ್ರೆಸ್ ಬರೆದಿರುವ ದಾಖಲೆಯನ್ನು ಮೋದಿಯವರು ಮುರಿಯುತ್ತಾರೆ ಎಂದು ರಾಮ್ ಮಾಧವ್ ಹೇಳಿದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications