Exit Poll 2024: ಮಹಾರಾಷ್ಟ್ರದಲ್ಲಿ ಕಮಲಕ್ಕೆ ಬಹುಮತ ಕೊಟ್ಟ ಎಕ್ಸಿಟ್ ಪೋಲ್
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಇಂದು ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ವಿವಿಧ ಸಂಸ್ಥೆಗಳು ಚುನಾವಣೋತ್ತರ ಫಲಿತಾಂಶ ( Exit poll) ಪ್ರಕಟಿಸಿವೆ. ಅದರಂತೆ ಈ ಬಾರಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸುವುದು ಬಹುತೇಕ ಪಕ್ಕಾ ಎಂದು ಹೇಳಿವೆ.
ಎಲೆಕ್ಟೋರಲ್ ಎಡ್ಜ್ ಸಂಸ್ಥೆಯ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರದಲ್ಲಿ ಬಿಜೆಪಿ 78 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್ 60, ಎನ್ಸಿಪಿ-ಎಸ್ಪಿ 46, ಶಿವಸೇನಾ (ಯುಬಿಟಿ) 44, ಎಸ್ಎಚ್ಎಸ್ 26, ಎನ್ಸಿಪಿ-ಎಪಿ 14 ಹಾಗೂ ಇತರೆ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಏರ್ಪಡಲಿದ್ದು, ಮೈತ್ರಿ ಸರ್ಕಾರ ರಚನೆಯಾಗುವ ಸುಳಿವನ್ನು ಈ ಸಮೀಕ್ಷೆ ಹೇಳುತ್ತಿದೆ. ಇನ್ನು ಮತ ಹಂಚಿಕೆ ನೋಡುವುದಾದರೆ.. ಬಿಜೆಪಿಗೆ ಶೇ 24ರಷ್ಟಿದ್ದರೆ, ಕಾಂಗ್ರೆಸ್ (ಶೇ 17), ಎಸ್ಎಸ್ಯುಬಿಟಿ (ಶೇ 15), ಎನ್ಸಿಪಿ-ಎಸ್ಪಿ (ಶೇ 14), ಇತರೆ (ಶೇ 14), ಎಸ್ಎಚ್ಎಸ್ (ಶೇ 10), ಎನ್ಸಿಪಿ-ಎಪಿ (ಶೇ 6) ಪಾಲಾಗಿವೆ ಎಂದು ಹೇಳಿದೆ.
ಎಬಿಪಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಮಹಾರಾಷ್ಟ್ರದಲ್ಲಿ ಈ ಬಾರಿ ಬಿಜೆಪಿ-ಮಹಾಯುತಿಗೆ 150-170 ಸ್ಥಾನಗಳು, ಕಾಂಗ್ರೆಸ್-ಎಂವಿಎಗೆ 110-130 ಸ್ಥಾನಗಳು ಮತ್ತು ಇತರರಿಗೆ 8-10 ಸ್ಥಾನಗಳು ಸಿಗಲಿವೆ ಎಂದು ಹೇಳಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ಇಂದು ಪೂರ್ಣಗೊಂಡಿರುವ ಹಿನ್ನೆಲೆ ಪೀಪಲ್ ಪಲ್ಸ್ ಸಂಸ್ಥೆಯು ಚುನಾವಣೋತ್ತರ ಚುನಾವಣೋತ್ತರ ಫಲಿತಾಂಶ (Exit poll) ಪ್ರಕಟಿಸಿದೆ. ಇದರಂತೆ ಈ ಬಾರಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.
ಪೀಪಲ್ ಪಲ್ಸ್ ಹೇಳುವಂತೆ ಬಿಜೆಪಿ 102-120 ಸ್ಥಾನ ಪಡೆಯಲಿದೆ. ಶಿವಸೇನೆ (ಇಎಸ್) 42-61 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಈಗಾಗಲೇ ಬಿಜೆಪಿ ಜೊತೆಗೆ ಶಿವಸೇನೆ ಕೈಜೋಡಿಸಿದ್ದು, ಈ ಎರಡೂ ಸಂಖ್ಯೆಗಳು ಸೇರಿದರೆ ಮೈತ್ರಿ ಸರ್ಕಾರ ರಚನೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದೆ.
ಇನ್ನುಳಿದಂತೆ ಎನ್ಸಿಪಿ (ಎಪಿ) 14-25 ಸ್ಥಾನ, ಐಎನ್ಸಿ (ಕಾಂಗ್ರೆಸ್) 24-44, ಶಿವಸೇನಾ (ಯುಬಿಟಿ) 21-36, ಎನ್ಸಿಪಿ (ಎಸ್ಪಿ) 28-41 ಹಾಗೂ ಇತರೆ 6-12 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ 145 ಮ್ಯಾಜಿಕ್ ನಂಬರ್ ಆಗಲಿದೆ. ಶಿವಸೇನಾ, ಬಿಜೆಪಿ ಹಾಗೂ ಎನ್ಸಿಪಿ (ಎಪಿ) ಒಳಗೊಂಡ ಮಹಾಯುತಿ ಒಕ್ಕೂಟವು 175ರಿಂದ 195 ಸ್ಥಾನಗಳನ್ನು ಪಡೆಯಲಿದ್ದು, ಮಹಾ ವಿಕಾಸ್ ಅಘಾಡಿಯು 85ರಿಂದ 112 ಸ್ಥಾನಗಳನ್ನು ಪಡೆಯಲಿದೆ.
ಎಕ್ಸಿಟ್ ಪೋಲ್ಗಳು ನಿಖರವಾದ ಸಮೀಕ್ಷೆಗಳಲ್ಲ. ಲೋಕಸಭೆ ಚುನಾವಣೆ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಗಳು ಅದಕ್ಕೆ ಉದಾಹರಣೆಯಾಗಿದೆ. ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಅಧಿಕಾರಕ್ಕೆ ಬರಲಿದೆ ಎಂದು ಮುಂಬಾದೇವಿ ವಿಧಾನಸಭಾ ಕ್ಷೇತ್ರದ ಶಿವಸೇನಾ ಅಭ್ಯರ್ಥಿ ಶೈನಾ ಎನ್ಸಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಸೇನೆ ನಾಯಕ ಮಿಲಿಂದ್ ದಿಯೋರಾ ಮಾತನಾಡಿ, ಮಹಾರಾಷ್ಟ್ರದ ಮತದಾರರು ತಮ್ಮ ಕರ್ತವ್ಯವನ್ನು ಪೂರೈಸಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ. ಈ ಚುನಾವಣೆಯಲ್ಲಿ ಮಹಾಯುತಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ. ನಿರೀಕ್ಷೆಗೂ ಮೀರಿದ ಬಹುಮತದಿಂದ ಮಹಾಯುತಿ ಗೆಲ್ಲಲಿದೆ ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications